ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು


Team Udayavani, Jun 1, 2024, 1:22 AM IST

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ಮಂಗಳೂರು/ಉಡುಪಿ: ಉಭಯ ಜಿಲ್ಲೆಗಳಲ್ಲಿ ಒಂದೂವರೆ ತಿಂಗಳ ಬೇಸಗೆ ರಜೆ ಮುಗಿಸಿದ ವಿದ್ಯಾರ್ಥಿಗಳು ಶುಕ್ರವಾರ ಶಾಲೆಯತ್ತ ಹೆಜ್ಜೆ ಇಟ್ಟಿದ್ದಾರೆ. ಮೊದಲ ಬಾರಿಗೆ ಶಾಲೆಗೆ ದಾಖಲಾದ ವಿದ್ಯಾರ್ಥಿಗಳನ್ನು ಸಂಭ್ರಮ – ಸಡಗರದ ಶಾಲಾ ಪ್ರಾರಂಭೋತ್ಸವದ ಮೂಲಕ ಬರಮಾಡಿಕೊಳ್ಳಲಾಯಿತು.

ಶಾಲಾ ಕಟ್ಟಡ, ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮಕ್ಕಳಿಗೆ ಸಿಹಿತಿನಿಸು ನೀಡಿ ಶಾಲೆಗೆ ಸ್ವಾಗತಿಸಲಾಯಿತು. ಹೊಸದಾಗಿ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪನ್ನೀರು ಚುಮುಕಿಸಿ, ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಲಾಯಿತು.

ಮಂಗಳೂರಿನ ಮಣ್ಣಗುಡ್ಡೆ ಸರಕಾರಿ
ಶಾಲೆಯಲ್ಲಿ ಪುಸ್ತಕಗಳನ್ನು ಪಲ್ಲಕಿ ಮೆರವಣಿಗೆ ಮೂಲಕ ವಿದ್ಯಾರ್ಥಿಗಳು ಶಾಲೆಗೆ ತಂದರು. ಬೊಕ್ಕಪಟ್ಣ ಶಾಲೆ ಯಲ್ಲಿ ಅಕ್ಕಿಯಲ್ಲಿ ಬರೆಸುವ ಮೂಲಕ ಶಿಕ್ಷಕರು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ – ಪುಸ್ತಕಗಳನ್ನು ವಿತರಿಸಲಾಯಿತು.

ಮಧ್ಯಾಹ್ನ ಬಿಸಿಯೂಟದೊಂದಿಗೆ “ಪಾಯಸ’ ವಿಶೇಷವಾಗಿ ಮಕ್ಕಳಿಗೆ ಬಡಿಸಲಾಯಿತು. ಕೆಲವು ಶಾಲೆಗಳಲ್ಲಿ ಸಿಹಿತಿಂಡಿ, ಐಸ್‌ಕ್ರೀಂ ಕೂಡ ವಿತರಿಸಲಾಯಿತು.

ಚುನಾವಣ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಶಾಲಾ ಪ್ರಾರಂಭೋತ್ಸವದಲ್ಲಿ ಭಾಗವಹಿಸಿಲ್ಲ. ದ.ಕ. ಡಿ.ಡಿ.ಪಿ.ಐ. ವೆಂಕಟೇಶ ಸುಬ್ಯಾಯ ಪಾಟಗಾರ ಹಾಗೂ ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಪ್ರಾರಂಭೋತ್ಸವದಲ್ಲಿ ಭಾಗವಹಿಸಿದರು.

ಜಿಲ್ಲಾದ್ಯಂತ ಸಡಗರದ ಶಾಲಾರಂಭೋತ್ಸವ
ಉಡುಪಿ: ಜಿಲ್ಲಾದ್ಯಂತ ಶುಕ್ರವಾರ ಎಲ್ಲ ಶಾಲೆಗಳಲ್ಲೂ ವಿದ್ಯಾರ್ಥಿಗಳನ್ನು ಹೊಸ ಶೈಕ್ಷಣಿಕ ವರ್ಷಕ್ಕೆ ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದ್ದಾರೆ.

2024-25ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭೋತ್ಸದ ಹಿನ್ನೆಲೆಯಲ್ಲಿ ಎಲ್ಲ ಶಾಲೆಗಳನ್ನು ತಳಿರು ತೋರಣ ಕಟ್ಟಿ ವಿಶೇಷವಾಗಿ ಸಿಂಗಾರ ಮಾಡಲಾಗಿತ್ತು. ಕೆಲವೊಂದು ಶಾಲೆಯಲ್ಲಿ ಮಕ್ಕಳನ್ನು ಗುಲಾಬಿ ಹೂ ನೀಡಿ ಸ್ವಾಗತಿಸಿದರೆ, ಇನ್ನು ಕೆಲವು ಶಾಲೆಗಳಲ್ಲಿ ಹೊಸದಾಗಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಹೂವಿನ ಮಳೆಗೈದಿದ್ದಾರೆ. ಮಕ್ಕಳಿಗೆ ಮೈದಾನದಲ್ಲಿ ತಮ್ಮ ಇಚ್ಛೆಯಂತೆ ಆಟವಾಡಲು ಬಿಟ್ಟಿದ್ದಾರೆ. ಬಹುತೇಕ ಶಾಲೆಗಳಲ್ಲಿ ಸಿಹಿ ವಿತರಣೆ ಮಾಡಿದ್ದಾರೆ. ಮಧ್ಯಾಹ್ನದ ಬಿಸಿ ಊಟದ ಜತೆಗೆ ಪಾಯಸ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಗಣಪತಿ ಅವರು ವಿವಿಧ ಶಾಲೆಗೆ ಭೇಟಿ ನೀಡಿ ಮೊದಲ ದಿನದ ಕಾರ್ಯಕ್ರಮ ಸಹಿತ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಜನ ಪ್ರತಿನಿಧಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು. ಒಟ್ಟಿನಲ್ಲಿ ಜಿಲ್ಲಾದ್ಯಂತ ಶಾಲಾಂಭೋತ್ಸವ ಅಚ್ಚುಕಟ್ಟಾಗಿ ನಡೆದಿದೆ.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.