ಕಡಲ್ಕೊರೆತಕ್ಕೆ ಸಿಗದ ಶಾಶ್ವತ ತಡೆಗೋಡೆ; ಮುಂಗಾರು,ಈ ವರ್ಷವೂ ಕಲ್ಲು ಸುರಿಯುವ ಸಾಧ್ಯತೆ ಅಧಿಕ

27.98 ಕೋ.ರೂ. ಪ್ರಸ್ತಾವನೆ ಸಲ್ಲಿಸಿ ವರ್ಷ ಕಳೆದರೂ ಬಾರದ ಅನುದಾನ ಹೊಸ್ತಿಲಿನಲ್ಲಿದೆ

Team Udayavani, Jun 1, 2024, 7:35 AM IST

ಕಡಲ್ಕೊರೆತಕ್ಕೆ ಸಿಗದ ಶಾಶ್ವತ ತಡೆಗೋಡೆ; ಮುಂಗಾರು,ಈ ವರ್ಷವೂ ಕಲ್ಲು ಸುರಿಯುವ ಸಾಧ್ಯತೆ ಅಧಿಕ

ಉಡುಪಿ: ಮಳೆಗಾಲದಲ್ಲಿ ಸಂಭವಿಸಬಹು ದಾದ ಹಾನಿ ಹಾಗೂ ನೆರೆ ತೀವ್ರತೆ ಕಡಿಮೆ ಮಾಡಲು ಜಿಲ್ಲಾಡಳಿತ ಅಗತ್ಯ ಮುನ್ನೆ ಚ್ಚರಿಕೆ ಕ್ರಮಗಳನ್ನು ತೆಗೆದು ಕೊಳ್ಳುತ್ತಿದೆ. ಮುಂಗಾರು ಪೂರ್ವ ಮಳೆಯೂ ಚೆನ್ನಾಗಿ ಸುರಿ ದಿದ್ದು, ಜೂನ್‌ ಮೊದಲ ವಾರ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಆದರೆ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಕಡಲ್ಕೊರೆತ ತಡೆಗೆ ಶಾಶ್ವತ ಕಾಮಗಾರಿ ನಡೆಸಲು ಸಲ್ಲಿಸಿದ ಪ್ರಸ್ತಾವನೆಗಳಿಗೆ ವರ್ಷ ಕಳೆದರೂ ನಯಾಪೈಸೆ ಅನುದಾನ ಬಂದಿಲ್ಲ.

ಕಡಲ್ಕೊರೆತ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು ಎಂಬ ಆಗ್ರಹ ಸ್ಥಳೀಯವಾಗಿ ವರ್ಷಗಳಿಂದ ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಡಕ್‌ಫ‌ುಟ್‌ ಅಥವಾ ಸೀ ವೇವ್‌ ಬ್ರೇಕರ್‌ ತಂತ್ರಜ್ಞಾನ ಅಳವಡಿಸುವ ಬಗ್ಗೆಯೂ ಚಿಂತನೆ ನಡೆದಿತ್ತು. ಪ್ರಾಯೋಗಿಕವಾಗಿ ಮರವಂತೆ ಪ್ರದೇಶದಲ್ಲಿ ಅನುಷ್ಠಾನಕ್ಕೆ ಹಿಂದಿನ ಸರಕಾರದಲ್ಲಿ ಕ್ರಮ ಕೈಗೊಂಡಿದ್ದರೂ ಈವರೆಗೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಮಳೆಗಾಲ ಹೊಸ್ತಿಲಿನ ಲ್ಲಿರುವುದರಿಂದ ಇನ್ನು ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸಾಧ್ಯವಿಲ್ಲ. ತಾತ್ಕಾಲಿಕ ವ್ಯವಸ್ಥೆಯಾಗಿ ಕೆಲವು ಕ್ರಮ ತೆಗೆದುಕೊಳ್ಳಬೇಕು. ಮಳೆಗಾಲ ಪೂರ್ವದಲ್ಲಿ ತಡೆಗೋಡೆ ನಿರ್ಮಾಣ ಇತ್ಯಾದಿ ಮಾಡಬೇಕು. ಆದರೆ ಜಿಲ್ಲೆಯಿಂದ ಹೋಗಿರುವ ಸುಮಾರು 10 ಪ್ರಸ್ತಾವನೆಗಳಿಗೆ ಸರಕಾರದಿಂದ ಈವರೆಗೂ ಅನುಮತಿಯೇ ಸಿಕ್ಕಿಲ್ಲ. ಹೀಗಾಗಿ ಈ ವರ್ಷ ಅವೈಜ್ಞಾನಿಕ ಪದ್ಧತಿಯಲ್ಲಿ ಕಲ್ಲು ಸುರಿಯುವುದೇ ಮುಂದುವರಿಯುವ ಎಲ್ಲ ಸಾಧ್ಯತೆ ಇದೆ.

27.98 ಕೋ.ರೂ. ಪ್ರಸ್ತಾವನೆ
ಜಿಲ್ಲೆಯಲ್ಲಿ ದೀರ್ಘ‌ಕಾಲ ಬಾಳಿಕೆ ಬರಬಹುದಾದ ಶಾಶ್ವತ ತಡೆಗೋಡೆಗಳನ್ನು 10 ಕಡೆಗಳಲ್ಲಿ ಸುಮಾರು 27.98 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲು ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿ ಕೇಂದ್ರ ಕಚೇರಿಗೆ ಸಲ್ಲಿಸಿದ್ದಾರೆ. ಸುಮಾರು 2,515 ಮೀ. ತಡೆಗೋಡೆ ನಿರ್ಮಾಣವಾಗಲಿದೆ. ಸಭೆಯಲ್ಲೂ ಚರ್ಚೆ ನಡೆದಿದೆ. ಆದರೆ ಅನುದಾನ ಮಾತ್ರ ಬಂದಿಲ್ಲ ಎನ್ನುತ್ತಾರೆ ಜಿಲ್ಲೆಯ ಹಿರಿಯ ಅಧಿಕಾರಿಗಳು.

ಎಲ್ಲೆಲ್ಲಿ ಶಾಶ್ವತ ತಡೆಗೋಡೆ?
ಕಾಪು ತಾಲೂಕು: ಮೂಳೂರು ತೊಟ್ಟಂ ಕಡಲ ತೀರದಲ್ಲಿ 300 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ 3.75 ಕೋ.ರೂ., ಪಡುಬಿದ್ರಿಯ ಕಡಲ ತೀರದಲ್ಲಿ 200 ಮೀ. ಉದ್ದ ಶಾಶ್ವತ ತಡೆಗೋಡೆಗಾಗಿ 2.50 ಕೋ.ರೂ., ಹೆಜಮಾಡಿ ಕಡಲ ತೀರದಲ್ಲಿ 190 ಮೀ. ಶಾಶ್ವತ ತಡೆಗೋಡೆ ಕಟ್ಟಲು 2.40 ಕೋ.ರೂ. ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ.

ಉಡುಪಿ ತಾಲೂಕು: ಉದ್ಯಾವರ ಪಡುಕೆರೆ ಕಡಲ ತೀರದಲ್ಲಿ 200 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ 2.50 ಕೋ.ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ.

ಬ್ರಹ್ಮಾವರ ತಾಲೂಕು: ಕೋಡಿ ಕನ್ಯಾನ ಹೊಸಬೆಂಗ್ರೆ ಲೈಟ್‌ ಹೌಸ್‌ನಿಂದ ಅಮ್ಮ ಸ್ಟೋರ್‌ ವರೆಗೆ ಆಯ್ದ ಕಡೆಗಳಲ್ಲಿ 440 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಿಸಲು 5 ಕೋ.ರೂ., ಲಿಲ್ಲಿ ಫೆರ್ನಾಂಡಿಸ್‌ ರಸ್ತೆಯಿಂದ ಶಿವರಾಜ್‌ ಜನರಲ್‌ ಸ್ಟೋರ್ ಸಮೀಪದ ವರೆಗಿನ ಆಯ್ದ ಭಾಗಗಳಲ್ಲಿ 250 ಮೀ. ಉದ್ದದ ತಡೆಗೋಡೆ ನಿರ್ಮಿಸಲು 2.25 ಕೋ.ರೂ. ಹಾಗೂ ಗೋಪಾಲ್‌ ಪೂಜಾರಿಯವರ ಮನೆಯಿಂದ ಹೊಸಬೆಂಗ್ರೆ ಲೈಟ್‌ಹೌಸ್‌ವರೆಗೆ 400 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಿಸಲು 3.80 ಕೋ.ರೂ. ಪ್ರಸ್ತಾವನೆ ನೀಡಲಾಗಿದೆ.

ಕುಂದಾಪುರ ತಾಲೂಕು: ಕೋಟೇಶ್ವರ ಗ್ರಾ.ಪಂ. ವ್ಯಾಪ್ತಿಯ ಹಳೇ ಅಳಿವೆ ಕಿನಾರ ಹೊಟೇಲ್‌ ಮುಂಭಾಗದಲ್ಲಿ 65 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಿಸಲು 78 ಲಕ್ಷ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ.

ಬೈಂದೂರು ತಾಲೂಕು: ಮರವಂತೆ ಬ್ರೇಕ್‌ ವಾಟರ್‌ ಬಳಿ 120 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಿಸಲು 1.90 ಕೋ.ರೂ., ಮರವಂತೆಯ ನಾಗ ಬನದ ಹತ್ತಿರ 250 ಮೀ. ಉದ್ದದ ಶಾಶ್ವತ ತಡೆಗೋಡೆ ನಿರ್ಮಿಸಲು 3.10 ಕೋ.ರೂ. ಪ್ರಸ್ತಾವನೆ ಕೊಡಲಾಗಿದೆ.

ಉಡುಪಿ ಜಿಲ್ಲೆಯಿಂದ ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆ ನಿರ್ಮಿಸುವ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಸಚಿವರೊಂದಿಗೆ ಮಾತುಕತೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಗತ್ಯ ಇದ್ದ ಕಡೆಗಳಲ್ಲಿ ಕಾಮಗಾರಿ ನಡೆಸಬೇಕಾಗುತ್ತದೆ. ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳಿಗೂ ಸೂಚನೆ ನೀಡಲಿದ್ದೇವೆ.
-ಕ್ಯಾ| ಸ್ವಾಮಿ, ನಿರ್ದೇಶಕರು,
ಬಂದರು ಇಲಾಖೆ, ಕಾರವಾರ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.