Doodh Sagar: ಮರು ಆದೇಶ ಬರುವವರೆಗೆ ದೂಧ್ ಸಾಗರ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ
Team Udayavani, Jun 1, 2024, 1:41 PM IST
ಪಣಜಿ: ಜೂನ್ 1 ರಿಂದ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಧ್ಯಸ್ಥಿಕೆಯಲ್ಲಿ ಹಿಂಪಡೆಯಲಾಗಿದೆ.
ಗೋವಾ ವನ್ಯಜೀವಿ ಹಾಗೂ ಪ್ರವಾಸೋದ್ಯಮ ಉಪಸಂರಕ್ಷಕರು ದೂಧ್ ಸಾಗರ ಜಲಪಾತ ಬಂದ್ಗೆ ಆದೇಶ ಹೊರಡಿಸಿದ್ದರು. ದೂಧ್ ಸಾಗರ ಜೀಪ್ ಅಸೋಸಿಯೇಶನ್ ವತಿಯಿಂದ ಈ ಬಂದ್ ಆದೇಶ ಹಿಂಪಡೆಯುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿತ್ತು.
ಗೋವಾದ ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನವನದಲ್ಲಿ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವಿದೆ. ಈ ಜಲಪಾತ ವೀಕ್ಷಣೆಗೆ ದೇಶವಿದೇಶಗಳಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರವಾಸಿಗರು ಜಲಪಾತದಲ್ಲಿ ಬಿದ್ದು ಸಾವನ್ನಪ್ಪುವ ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಳೆಗಾಲದ ಸಂದರ್ಭದಲ್ಲಿ ಜಲಪಾತದ ಬಳಿ ತೆರಳಲು ನಿರ್ಬಂಧ ಹೇರಲಾಗುತ್ತಿತ್ತು.
ಎಲ್ಲಿಯ ವರೆಗೆ ದೂಧ್ ಸಾಗರ ಜಲಪಾತ ಬಂದ್ ಮಾಡುವ ಮರು ಆದೇಶ ಬರುತ್ತದೆಯೋ ಅಲ್ಲಿಯ ವರೆಗೆ ಜಲಪಾತದ ಬಳಿ ತೆರಳಲು ಅವಕಾಶ ಲಭಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ದೂಧಸಾಗರ ಜೀಪ್ ಅಸೋಸಿಯೇಶನ್ ಸಂಸತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಾವಂತ್ ಹಾಗೂ ಶಾಸಕ ಗಣೇಶ್ ಗಾವಕರ್ ರವರಿಗೆ ಆಭಾರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Mudigere; ವಿದ್ಯುತ್ ಶಾಕ್ ನಿಂದ ಮರದಲ್ಲೇ ಮೃತಪಟ್ಟ ಕಾರ್ಮಿಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.