Kalaburgi; ವಿಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ‌ ನೀಡಬೇಕೆ: ಪ್ರಿಯಾಂಕ್ ಖರ್ಗೆ


Team Udayavani, Jun 1, 2024, 2:55 PM IST

Kalaburgi; ವಿಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ‌ ನೀಡಬೇಕೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಪ್ರಾಥಮಿಕ‌‌ ವರದಿ ಬರಲಿ, ಅಗತ್ಯ ಬಿದ್ದರೆ ಸಿಬಿಐಗೂ ಕೊಡೋಣ. ಆದರೆ, ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ‌ ನೀಡಬೇಕಾ? ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಸಿಎಂ ಅವರ ಪರಮಾಧಿಕಾರವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಕಲಬುರಗಿ ನಗರದಲ್ಲಿ ತಮ್ಮನ್ನು ಭೇಟಿಯಾಗಿದ್ದ ಟಿವಿ ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ನಿನ್ನೆ ಯತ್ನಾಳ‌ ಅವರು ಮಾತನಾಡಿದ್ದನ್ನು ಗಮನಿಸಿದ್ದೇನೆ. ಅವರ ಪಕ್ಷ ಅಧಿಕಾರದಲ್ಲಿದ್ದಾಗ ಪಿಎಸ್ಬೈ ಅಕ್ರಮ ನಡೆದಿತ್ತಲ್ಲ ಆಗ ಯಾಕೆ ಮಾತನಾಡಲಿಲ್ಲ.? ಯಾಕೆ ದಾಖಲೆ ಒದಗಿಸಲಿಲ್ಲ? ಈಗ ಇದ್ದಕ್ಕಿದ್ದಂತೆ ಪರಿಶಿಷ್ಠ ಪಂಗಡದ ಮೇಲೆ ಯಾಕೆ ಪ್ರೀತಿ ಹೆಚ್ಚಾಗಿದೆ? ಈ ಹಿಂದೆ‌ ಯಡಿಯೂರಪ್ಪ ಸರ್ಕಾರದಲ್ಲಿ ಎಸ್ ಸಿ‌ಪಿ/ ಟಿಎಸ್ ಪಿಯ 10,000 ಕೋಟಿ ಅನುದಾನ ಡೈವರ್ಟ್ ಆಗಿದ್ದಾಗ ಯತ್ನಾಳ ಯಾವ ದಾಖಲೆ ಕೊಟ್ಟಿದ್ದರು. ಪದೇ ಪದೇ ವಿಜಯೇಂದ್ರ ದುಬೈಗೆ ಹೋಗುತ್ತಾರೆ ಎಂದು ಆರೋಪಿಸಿದಾಗ ಯಾವ ದಾಖಲೆ ನೀಡಿದ್ದರು ಎಂದು ಪ್ರಶ್ನಿಸಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಕುರಿತಂತೆ ಸರ್ಕಾರ ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಿದೆ. ಅಧಿಕಾರಿಗಳ ತಂಡ ಕೂಡಾ ರಚನೆಯಾಗಿದೆ ತಂಡ ತನಿಖೆ‌‌ ನಡೆಸಲಿ. ಇದರಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಆದರೆ, ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರ ರಾಜೀನಾಮೆ‌ ಸಲ್ಲಿಸಬೇಕಾ? ಈ ವಿಚಾರದಲ್ಲಿ ಏನೇ ಹೇಳಲಿ ಸಚಿವರ ರಾಜೀನಾಮೆ ಪಡೆಯುವುದು ಸಿಎಂ ಅವರ ಪರಮಾಧಿಕಾರವಾಗಿದೆ ಎಂದರು.

ಕೆಆರ್ಐಡಿಎಲ್ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗುತ್ತಿಗೆದಾರರ ಡೆತ್ ನೋಟ್ ನಲ್ಲಿ ಕೆಲವೊಂದು ವೈಯಕ್ತಿಕ ವಿಚಾರ ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನೆಲೆಯ ಕುರಿತಂತೆ ತನಿಖೆಗೆ ಮೂವರು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ, ತನಿಖೆ‌‌ ನಡೆಯಲಿದೆ ಎಂದರು.

ಸಂವಿಧಾನದ ಆರ್ಟಿಕಲ್ 371 ಜೆ ವಿಚಾರಕ್ಕೆ‌ ಸಂಬಂಧಿಸಿದಂತೆ ಕೆಲವರು ಅಪಸ್ವರ ಎತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆದ ಕೆಲ ಗೊಂದಲಗಳನ್ನು ನಾವು ಸರಿಪಡಿಸಿದ್ದೇವೆ. ಕಲ್ಯಾಣ ಕರ್ನಾಟಕ‌ ಭಾಗಕ್ಕೆ ಆದ ಐತಿಹಾಸಿಕ‌ ಅನ್ಯಾಯ ಹಾಗೂ ಪ್ರಾದೇಶಿಕ ಅಸಮತೋಲನ ಸರಿಪಡಿಸುವ ಉದ್ದೇಶದಿಂದ ಸಂವಿಧಾನಕ್ಕೆ‌ ತಿದ್ದುಪಡಿ ತಂದು‌ ಆರ್ಟಿಕಲ್ 371 ಗೆ ಜೆ ಸೇರಿಸಲಾಗಿದೆ. ಹಾಗಾಗಿ, ಇದನ್ನು‌ ವಿರೋಧಿಸುವವರು ನಮ್ಮ‌ ಭಾಗದ ಅಭಿವೃದ್ದಿಯನ್ನು ರಾಜ್ಯದ ಇತರೆ ಭಾಗದೊಂದಿಗೆ ಹೋಲಿಕೆ ಮಾಡಿ‌ ನೋಡಲಿ. ಈ ಬಗ್ಗೆ ನಾನು ಈಗಾಗಲೇ ಕಾನೂನು ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದರು.

ಪ್ರಜ್ವಲ್ ಕಸ್ಟಡಿಯಲ್ಲಿದ್ದಾರೆ. ಅಧಿಕಾರಿಗಳಿಗೆ ಅವರು ಉತ್ತರ ನೀಡಲಿ. ಭವಾನಿ ಅವರು ಮಿಸ್ಸಿಂಗ್ ಆಗಿದ್ದಾರೆ. ಕಾನೂನು ಚೌಕಟ್ಟಿನಲ್ಲಿ‌ ಏನು ನಡೆಯುತ್ತದೆ ನಡೆಯಲಿ. ಈ ಸಂದರ್ಭದಲ್ಲಿ ನಾವು ಹೇಳುವುದೇನಿದೆ ಎಂದರು.

ಲೋಕಸಭಾ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಪತನ ಆಗುತ್ತದೆ ಎನ್ನುವ ಯತ್ನಾಳ ಹಾಗೂ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು‌ ಮೊದಲು ತಮ್ಮ ಮನೆಯ ಬೆಂಕಿ ಆರಿಸಿಕೊಳ್ಳಲಿ. ಯತ್ನಾಳ್ ಹೇಳುವಂತೆ ವಿಜಯೇಂದ್ರ ಸ್ಥಾನ ಉಳಿಸಿಕೊಳ್ಳಲಿ. ಕೇಂದ್ರ ಬಿಜೆಪಿಗೆ ವರದಿ ಕಳಿಸಬೇಕಾಗುತ್ತದೆ. ಹಾಗಾಗಿ ಇವರೆಲ್ಲ ಮಾತನಾಡಿದ್ದು ವರದಿ ಕಳಿಸುತ್ತಾರೆ. ಸರ್ಕಾರ ಸುಭದ್ರವಾಗಿದೆ, ಅವರು ನಿರೀಕ್ಷಿಸಿದಂತೆ ಏನೂ ಆಗಲ್ಲ ಎಂದು ಪ್ರಿಯಾಂಖ್ ಖರ್ಗೆ ಹೇಳಿದರು.

ಟಾಪ್ ನ್ಯೂಸ್

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.