INDIA ಮಹತ್ವದ ಸಭೆ; ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಎಲ್ಲಾ ಪಕ್ಷಗಳ ನಿರ್ಧಾರ
ನಮಗೆ ಕನಿಷ್ಠ 295 ಸ್ಥಾನ : ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ
Team Udayavani, Jun 1, 2024, 5:37 PM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಯಾ ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿರುವ ದಿನ ಇಂಡಿಯಾ ಮೈತ್ರಿಕೂಟದ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಶನಿವಾರ ಮಹತ್ವದ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.
ಖರ್ಗೆ ಅವರು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ” ಎಂದು ಹೇಳಿದ್ದಾರೆ.
“ನಾವು ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಇರುತ್ತೇವೆ, ನಮ್ಮನ್ನು ವಿಭಜಿಸಲು ಪ್ರಯತ್ನಿಸಬೇಡಿ.” ಎಂದು ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ ಹೊರ ಹಾಕಿದರು.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಾತನಾಡಿ”ಉತ್ತರ ಪ್ರದೇಶದಲ್ಲಿ, ಬಿಜೆಪಿ ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ. ಇಂಡಿಯಾ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ನಿರುದ್ಯೋಗ, ಬೆಲೆ ಏರಿಕೆ, ಜಿಎಸ್ಟಿ, ಸಿಬಿಐ, ಇಡಿ ಮತ್ತು ಆದಾಯ ತೆರಿಗೆಯ ಭೂಕಂಪ ಸಂಭವಿಸಿದೆ. ಈ ಭೂಕಂಪಗಳು ಕೊನೆಗೊಳ್ಳುತ್ತವೆ” ಎಂದರು.
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮಾತನಾಡಿ “ನಾವು 295+ ಪಡೆಯುತ್ತೇವೆ. ನಂತರ ಪ್ರಧಾನಿ ಮುಖದ ಕುರಿತು ನಿರ್ಧರಿಸುತ್ತೇವೆ. ಬಿಜೆಪಿ ಅವರ 400 ಪಾರ್ ಚಿತ್ರವು ಮೊದಲ ಹಂತದಲ್ಲಿಯೇ ಫ್ಲಾಪ್ ಆಗಿದೆ” ಎಂದರು.
ಶಿವಸೇನಾ (UBT) ನಾಯಕ ಅನಿಲ್ ದೇಸಾಯಿ ಮಾತನಾಡಿ ‘ನಾವು ಮಹಾರಾಷ್ಟ್ರದಿಂದ 30-35 ಸ್ಥಾನಗಳನ್ನು ಪಡೆಯುತ್ತೇವೆ’ ಎಂದರು.
ಚರ್ಚೆಯಲ್ಲಿ ಭಾಗಿಯಾಗಲು ನಿರ್ಧಾರ
ಕಾಂಗ್ರೆಸ್ ನಾಯಕ ಪವನ್ ಖೇರಾ ಟ್ವೀಟ್ ಮಾಡಿದ್ದು “ಇಂಡಿಯಾ ಮೈತ್ರಿ ಕೂಟದ ಪಕ್ಷಗಳು ಎಕ್ಸಿಟ್ ಪೋಲ್ ಚರ್ಚೆ ಗಳಲ್ಲಿ ಬಿಜೆಪಿ ಮತ್ತು ಅದರ ಪರಿಸರ ವ್ಯವಸ್ಥೆಯನ್ನು ಬಹಿರಂಗಪಡಿಸಲು ನಿರ್ಧರಿಸಿವೆ. ಎಕ್ಸಿಟ್ ಪೋಲ್ಗಳಲ್ಲಿ ಭಾಗವಹಿಸುವ ಪರ ಮತ್ತು ವಿರುದ್ಧ ಅಂಶಗಳನ್ನು ಪರಿಗಣಿಸಿದ ನಂತರ, ಎಲ್ಲಾ ಪಕ್ಷಗಳು ಇಂದು ಸಂಜೆ ಟಿವಿ ವಾಹಿನಿಗಳಲ್ಲಿ ನಡೆಯುವ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲು ಒಮ್ಮತದಿಂದ ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.
ಚರ್ಚೆಯಲ್ಲಿ ಭಾಗಿಯಾಗುವುದಿಲ್ಲ ಎಂದಿದ್ದ ಕಾಂಗ್ರೆಸ್ ವಿರುದ್ದ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಫಲಿತಾಂಶ ಪ್ರಕಟಕ್ಕೂ ಮುನ್ನ ಸೋಲು ಒಪ್ಪಿಕೊಂಡಿದೆ ಎಂದು ಟೀಕಾ ಪ್ರಹಾರ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.