ಕನಕಗಿರಿ: ಮಾತು ಬಾರದ ಸಹೋದರಿಯರಿಗೆ ನರೇಗಾ ಆಸರೆ


Team Udayavani, Jun 1, 2024, 6:00 PM IST

ಕನಕಗಿರಿ: ಮಾತು ಬಾರದ ಸಹೋದರಿಯರಿಗೆ ನರೇಗಾ ಆಸರೆ

ಉದಯವಾಣಿ ಸಮಾಚಾರ
ಕನಕಗಿರಿ: ಕೇಂದ್ರದ ಮಹತ್ವಾಕಾಂಕ್ಷಿ ಉದ್ಯೋಗ ಖಾತ್ರಿ ಯೋಜನೆ ಕೇವಲ ಯುವಕರು, ವಯಸ್ಕರು, ವೃದ್ಧರಿಗಷ್ಟೇ ಅಲ್ಲ
ವಿಶೇಷಚೇತನರಿಗೂ ಆಸರೆಯಾಗಿದೆ. ತಾಲೂಕಿನಲ್ಲಿ ಸಾಕಷ್ಟು ವಿಶೇಷ ಚೇತನರು ನರೇಗಾ ಯೋಜನೆಯಡಿ ತಮ್ಮ ಬದುಕನ್ನೇ
ಕಟ್ಟಿಕೊಂಡಿದ್ದಾರೆ. ಇದ್ದೂರಲ್ಲೇ ಕೆಲಸ ಮಾಡುವ ಮೂಲಕ ಎಲ್ಲೂ ಗುಳೆ ಹೋಗದೇ ತಮ್ಮ ಜೀವನಮಟ್ಟ ಸರಿದೂಗಿಸಿಕೊಂಡಿದ್ದಾರೆ. ತಾಲೂಕಿನ ಕರಡೋಣ ಗ್ರಾಪಂ ವ್ಯಾಪ್ತಿಯ ಬುನ್ನಟ್ಟಿ ಗ್ರಾಮದ ಅಂಬ್ರಮ್ಮ, ಶಂಕ್ರಮ್ಮ, ಹಾಲಮ್ಮ ಈ ಮೂವರು ಸಹೋದರಿಯರೇ ಸಾಕ್ಷಿಯಾಗಿದ್ದಾರೆ.

ಈ ಮೂವರು ಬಾಯಿ ಇಲ್ಲದ ಸಹೋದರಿಯರು. ಹುಟ್ಟಿನಿಂದಲೇ ಇವರಿಗೆ ಮಾತು ಬರುತ್ತಿಲ್ಲ. ಅಲ್ಲದೇ ಮೂವರು ಸಹೋದರಿಯರಿಗೂ ಮದುವೆಯಾಗಿದ್ದು, ಅದರಲ್ಲಿ ಇಬ್ಬರ ಗಂಡಂದಿರು ಮೃತಪಟ್ಟಿದ್ದು, ತಮ್ಮ ಸಹೋದರನ ಬಳಿ ಇದ್ದಾರೆ. ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಮೂಲಕ ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ನರೇಗಾ ಯೋಜನೆಯಡಿ ಕೆಲಸ ಮಾಡುತ್ತ ಬಂದಿದ್ದಾರೆ.

ಗ್ರಾಮದಲ್ಲಿ ನಾಲಾ, ಕೆರೆ ಹೂಳೆತ್ತುವ ಕೆಲಸಕ್ಕೆ ತೆರಳುವ ಇವರು ಪ್ರತಿ ವರ್ಷ 80ಕ್ಕೂ ಹೆಚ್ಚು ಮಾನವ ದಿನಗಳನ್ನು ಪೂರೈಸಿದ್ದಾರೆ. ಇನ್ನು ಇಬ್ಬರು ಸಹೋದರಿಯರಿಗೆ ಮಕ್ಕಳಿದ್ದು, ಶಾಲೆಗೆ ಹೋಗುತ್ತಿದ್ದಾರೆ. ಉದ್ಯೋಗ ಖಾತ್ರಿಯಡಿ ದುಡಿದ ದುಡ್ಡು ಮಕ್ಕಳ ಓದಿಗೆ ಅನುಕೂಲವಾಗಿದೆ ಎಂದು ಕೈಸನ್ನೆ ಮೂಲಕ ಖುಷಿ ವ್ಯಕ್ತಪಡಿಸುತ್ತಾರೆ.

ವಿಶೇಷಚೇತನರು ಸಮಾಜದ ಅವಿಭಾಜ್ಯ. ಅವರಿಗೆ ಮಾತಿನ ಅನುಕಂಪ ತೋರಿಸುವ ಬದಲು ಅವರು ಸಮಾಜದಲ್ಲಿ ಇತರರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು. ಅ ನಿಟ್ಟಿನಲ್ಲಿ ನಮ್ಮ ನರೇಗಾ ಯೋಜನೆ ಸಹಕಾರಿ ಯಾಗಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ಅಂಗ ವೈಕಲ್ಯವುಳ್ಳವರಿಗೆ, ಹಿರಿಯ ನಾಗರಿಕರಿಗೆ ನರೇಗಾದಡಿ ಕೆಲಸ ನೀಡಲಾಗಿದೆ.
ನಾಗಲಿಂಗಪ್ಪ, ಗ್ರಾಪಂ ಪಿಡಿಒ,
ಕರಡೋಣ.

ಬೇಸಿಗೆಯಲ್ಲಿ ಗುಳೆ ತಡೆಯುವ ಉದ್ದೇಶದಿಂದ ತಾಲೂಕಿನಾದ್ಯಂತ ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಆರಂಭಿಸಿದ್ದು, ವಿಶೇಷ ಚೇತನರು, ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ಕೆಲಸ ಒದಗಿಸಲಾಗುತ್ತಿದೆ.
ಎಲ್‌.ವೀರೇಂದ್ರಕುಮಾರ್‌,
ಇಒ ತಾಪಂ ಕನಕಗಿರಿ

■ ಶ್ರೀನಿವಾಸ ಪೂಜಾರ

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.