Raghupati Bhat ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸಲ್ಲ
Team Udayavani, Jun 2, 2024, 12:11 AM IST
ಮಂಗಳೂರು: ನಾನು ಚುನಾವಣೆಯಲ್ಲಿ ಸೋತಿಲ್ಲ. ಮತದಾರರು ನನ್ನನ್ನು ನಿರ್ಲಕ್ಷಿಸಿಲ್ಲ. ಕಾರ್ಯಕರ್ತರು ವಾಪಸು ಹೋಗಿ ಎಂದಿಲ್ಲ. ನಮ್ಮ ಕ್ಷೇತ್ರದಲ್ಲಿ ಗೋ ಬ್ಯಾಕ್ ಹೇಳಿಸಿಕೊಂಡವರಿಗೆ ಬೇರೆ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಆದರೆ ನನ್ನ ವಿರುದ್ಧ ಯಾರೂ ಗೋ ಬ್ಯಾಕ್ ಅಭಿಯಾನ ಮಾಡಿಲ್ಲ. ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸು ಕೂಡ ನನ್ನದಲ್ಲ ಎಂದು ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಹೇಳಿದ್ದಾರೆ.
ಕೆಲವರಿಗೆ ಅಧಿಕಾರ ಇಲ್ಲದೆ ಇರಲಾಗದು ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂತೋಷ್ ಅವರು ಎಲ್ಲರನ್ನೂ ಉದ್ದೇಶಿಸಿ ಹೇಳಿರಬಹುದು. 70 ವರ್ಷ ಮೇಲ್ಪಟ್ಟವರು, ಸೋತವರನ್ನೂ ಲೋಕಸಭೆಗೆ ನಿಲ್ಲಿಸಲಾಗಿದೆ. ನಾನು ಮುಖ್ಯಮಂತ್ರಿ ಆಗಬೇಕು, ನನ್ನ ಪುತ್ರ ಅಧ್ಯಕ್ಷನಾಗಬೇಕು ಎನ್ನು ತ್ತಿರುವವರಿಗೂ ಹೇಳಿರಬಹುದು ಎಂದರು.
ವ್ಯವಸ್ಥೆ ಬದಲಾಗಬೇಕಿದೆ
ಸುಮಾರು 25 ಲಕ್ಷ ಪದವೀಧರರ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ 85 ಸಾವಿರ ಮಾತ್ರ ಆಗಿದ್ದು, ಈ ವ್ಯವಸ್ಥೆಯನ್ನು ಬದಲಿಸಬೇಕಿದೆ. ಮುಂದೆ ಗೆದ್ದು ಬಂದಾಗ ಈ ಬಗ್ಗೆ ಧ್ವನಿ ಎತ್ತುವೆ. ಒಮ್ಮೆ ಪದವಿ ದೊರಕಿದ ಬಳಿಕ ಅದು ಶಾಶ್ವತ. ಹಾಗಿರುವಾಗ ಆರು ವರ್ಷಗಳಿಗೆ ಒಮ್ಮೆ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಅನಗತ್ಯ ಎಂದರು.
ಸಾಧನೆಯೇ ಆಧಾರ ಶಾಸಕನಾಗಿ ನಾನು ಮಾಡಿದ ಸಾಧನೆಗಳೇ ನನಗೆ ಆಧಾರ. ಕ್ಷೇತ್ರದ ಪ್ರಬುದ್ಧ ಮತದಾರರು ಅದನ್ನು ಆಧರಿಸಿ ಬೆಂಬಲಿಸುವ ಸಾಧ್ಯತೆ ಇದೆ ಎಂದರಲ್ಲದೇ, ಪದವೀಧರರ ಸಮಸ್ಯೆಯನ್ನು ಬಗೆಹರಿಸಲು ಅಂಕಿಅಂಶ ಆಧಾರಿತ ಜಾಲವನ್ನು ರಚಿಸಿ ಕಾರ್ಯತತ್ಪರನಾಗಲು ಯೋಚಿಸಿರುವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
ಯೂಟ್ಯೂಬ್ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ
West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.