ಪೂರ್ವ ಮುಂಗಾರು ಗಾಳಿ-ಮಳೆ; ಮೆಸ್ಕಾಂಗೆ 9.63 ಕೋ.ರೂ.ಗೂ ಅಧಿಕ ನಷ್ಟ
Team Udayavani, Jun 2, 2024, 12:41 AM IST
ಮಂಗಳೂರು: ಪೂರ್ವ ಮುಂಗಾರು ಗಾಳಿ ಮಳೆಗೆ ವಿದ್ಯುತ್ ಕಂಬಗಳು ಪರಿವರ್ತಕಗಳು ಸೇರಿದಂತೆ 9.63 ಕೋ.ರೂ. ಮೊತ್ತದ ಮೆಸ್ಕಾಂ ಅಸ್ತಿಗಳಿಗೆ ಹಾನಿಯಾಗಿದೆ.
ಮೆಸ್ಕಾಂ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡಿದ್ದು 2024ರ ಎ.1 ರಿಂದ ಮೇ 31ರ ವರೆಗಿನ ಅವ ಧಿಯಲ್ಲಿ ಗಾಳಿ ಮಳೆಗೆ ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 353.01 ಲಕ್ಷ ರೂ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 241.72 ಲಕ್ಷ ರೂ. ಮೊತ್ತದ ಮೆಸ್ಕಾಂ ಅಸ್ತಿಗಳಿಗೆ ಹಾನಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 200.79 ಲಕ್ಷ ರೂ. ಮತ್ತು ಶಿವಮೊಗ್ಗದಲ್ಲಿ 167.70 ಲಕ್ಷ ರೂ. ಮೊತ್ತದ ಮೆಸ್ಕಾಂ ಅಸ್ತಿಗಳು ಹಾನಿಗೊಂಡಿವೆ. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಆಗಿರುವ ಹಾನಿಗಳನ್ನು ಸರಿಪಡಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯವನ್ನು ಮೆಸ್ಕಾಂ ಮಾಡುತ್ತದೆ.
5,883 ಕಂಬಗಳು ಧರಾಶಾಯಿ
ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಲ್ಲಿ ಗಾಳಿ ಮಳೆಗೆ ಒಟ್ಟು 5883 ವಿದ್ಯುತ್ ಕಂಬಗಳು ಹಾನಿಗೊಂಡಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತೀ ಹೆಚ್ಚಿನ 2066 ಕಂಬಗಳಿಗೆ ಹಾನಿಯಾಗಿದೆ. ಶಿವಮೊಗ್ಗದಲ್ಲಿ 1564, ದಕ್ಷಿಣ ಕನ್ನಡದಲ್ಲಿ 1306, ಉಡುಪಿ ಜಿಲ್ಲೆಯಲ್ಲಿ 947 ಕಂಬಗಳಿಗೆ ಹಾನಿಯಾಗಿದೆ. ಹಾನಿಗೊಂಡಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ.
ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 165 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿವೆ. ದಕ್ಷಿಣ ಕನ್ನಡದಲ್ಲಿ 26, ಉಡುಪಿ ಜಿಲ್ಲೆಯಲ್ಲಿ 20, ಶಿವಮೊಗ್ಗದಲ್ಲಿ 119 ವಿದ್ಯುತ್ ಪರಿವರ್ತಕಗಳು ಹಾನಿಗೊಂಡಿವೆ. ವಿದ್ಯುತ್ ಪರಿವರ್ತಕಗಳಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕನಿಷ್ಠ ಹಾನಿ ಸಂಭವಿಸಿದೆ. ಹಾನಿಗೊಂಡಿರುವ ಪರಿವರ್ತಕಗಳನ್ನು ದುರಸ್ತಿ ಹಾಗೂ ಬದಲಾವಣೆ ಮಾಡಲಾಗಿದೆ.
ಮುಂಗಾರು ಗಾಳಿ, ಮಳೆಗೆ 157.72 ಕಿ.ಮೀ. ವಿದ್ಯುತ್ ಮಾರ್ಗಗಳು ಹಾನಿಗೊಂ ಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65.30 ಕಿ.ಮೀ. ವಿದ್ಯುತ್ ಮಾರ್ಗ ಹಾನಿಗೊಂಡಿದ್ದು ಉಡುಪಿ ಜಿಲ್ಲೆಯಲ್ಲಿ 18.56 ಕಿ.ಮೀ. ವಿದ್ಯುತ್ ಮಾರ್ಗ ಹಾನಿಗೊಳಗಾಗಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 41.32 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 31.54 ಕಿ.ಮೀ. ವಿದ್ಯುತ್ ಮಾರ್ಗ ಹಾನಿಗೊಂಡಿದ್ದು ಸರಿಪಡಿಸಲಾಗಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.