![Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ](https://www.udayavani.com/wp-content/uploads/2024/06/4-1-415x249.jpg)
Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ
Team Udayavani, Jun 2, 2024, 3:16 PM IST
![Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ](https://www.udayavani.com/wp-content/uploads/2024/06/joshi-1-620x342.jpg)
ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಆದಿಯಾಗಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು. ನಂತರ ಸಿಬಿಐ ತನಿಖೆಗೆ ವಹಿಸಬೇಕು. ಆಗ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುವುದರಲ್ಲಿ, ದಾರಿ ತಪ್ಪಿಸುವಲ್ಲಿ ನಿಸ್ಸೀಮವಾಗಿದೆ. ಇದೀಗ ವಾಲ್ಮೀಕಿ ನಿಗಮದ ಹಗರಣದಲ್ಲಿ ಯಾವುದೇ ಸಂಪರ್ಕವಿಲ್ಲದ ಒಂಬತ್ತು ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ. ಇಷ್ಟಾದರೂ ಆರೋಪ ಹೊತ್ತಿರುವ ಸಚಿವನಿಂದ ರಾಜೀನಾಮೆ ಕೊಡಿಸಲು ಆಗುತ್ತಿಲ್ಲ ಎಂದು ಹರಿಹಾಯ್ದರು.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪ್ರಚಂಡ ಬಹುಮತದೊಂದಿಗೆ ಜಯಸಾಧಿಸಲಿದೆ ಎನ್ನುವುದು ಬಂದಿದೆ. ಚುನಾವಣೆ ಮೊದಲು, ನಂತರವೂ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮೋದಿ ನೇತೃತ್ವದಲ್ಲಿ ನಾವು ಜಯಗಳಿಸಲಿದ್ದೇವೆ ಎಂಬ ಮಾತು ಹೇಳಿದ್ದೆ. ಅದೇ ತರಹ ಅಮಿತ್ ಶಾ, ರಾಜನಾಥ್ ಸಿಂಗ್ ಎಲ್ಲರೂ ಹೇಳಿದ್ದರು. ಅದರ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ್ದರು. ಇದೀಗ ಹೆಚ್ಚು ಕಡಿಮೆ ಪಕ್ಷದ ನಾಯಕರ ಭವಿಷ್ಯಗಳು ಖಚಿತವಾಗಿವೆ. ಚುನಾವಣೆ ಫಲಿತಾಂಶ ಬಳಿಕ ಎಕ್ಸಿಟ್ ಪೋಲ್ಗಿಂತಲೂ ಬಿಜೆಪಿ 400ಕ್ಕಿಂತ ಅಧಿಕ ಸೀಟ್ಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ನವರಿಗೆ ದೇಶದ ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್, ಸಿಎಜಿ ಸೇರಿದಂತೆ ಯಾವುದೇ ರೀತಿಯಾದ ಸಂವಿಧಾನ ಆಧಾರದ ಮೇಲೆ ನಿರ್ಮಾಣವಾದ ಸ್ವಾಯತ್ತ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ. ಜನತಾ ಜನಾರ್ಧನನ ಮೇಲೆ ವಿಶ್ವಾಸವಿಲ್ಲ. ಹೀಗಾಗಿ ಜನರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿಲ್ಲ ಎಂದು ಜೋಶಿ ಕುಟುಕಿದರು.
ನೇಹಾ, ಅಂಜಲಿ ರೀತಿಯಲ್ಲಿ ಹತ್ಯೆ ಮಾಡಲಾಗುವುದು ಎಂದು ಶಿಕ್ಷಕಿ ದೀಪಾಗೆ ಬೆದರಿಕೆ ಪತ್ರ ಬಂದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಪೊಲೀಸರಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಜನಪ್ರತಿನಿಧಿಗಳೆಂದರೆ ಪೋಲಿಸರಿಗೆ ಭಯವೇ ಇಲ್ಲದಾಗಿದೆ. ಸಿಎಂ ನಿದ್ದೆಯಿಂದ ಎಚ್ಚೆತ್ತುಕೊಳ್ಳಬೇಕು. ಬೆದರಿಕೆ ಪ್ರಕರಣ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಇಂತಹ ಘಟನೆಗಳು ನಡೆಯಲು ರಾಜ್ಯ ಸರ್ಕಾರದ ನಡವಳಿಕೆಯೇ ಕಾರಣ ಎಂದು ದೂರಿದರು.
ಟಾಪ್ ನ್ಯೂಸ್
![Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ](https://www.udayavani.com/wp-content/uploads/2024/06/4-1-415x249.jpg)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lok Sabha Election: ಫಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್](https://www.udayavani.com/wp-content/uploads/2024/06/jagadeesh-150x84.jpg)
Lok Sabha Election: ಫಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್
![](https://www.udayavani.com/wp-content/uploads/2024/06/shetar-150x83.jpg)
Hubli; ಸರ್ಕಾರ ಕೂಡಲೇ ನಾಗೇಂದ್ರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ
![police crime](https://www.udayavani.com/wp-content/uploads/2024/06/police-crime-150x92.jpg)
Hubballi; ನೇಹಾ ಮತ್ತು ಅಂಜಲಿ ಮಾದರಿಯಲ್ಲೇ …: ಶಿಕ್ಷಕಿಗೆ ಬೆದರಿಕೆ ಪತ್ರ
![joshi](https://www.udayavani.com/wp-content/uploads/2024/06/joshi-150x83.jpg)
Hubli; ಇದು ದಪ್ಪ ಚರ್ಮದ ಸರ್ಕಾರ; ಕೂಡಲೇ ನಾಗೇಂದ್ರ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
![Dharwad; 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ](https://www.udayavani.com/wp-content/uploads/2024/05/divya-prabhu-150x83.jpg)
Dharwad; 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ
MUST WATCH
ಹೊಸ ಸೇರ್ಪಡೆ
![Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ](https://www.udayavani.com/wp-content/uploads/2024/06/4-1-150x90.jpg)
Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ
![ಮದುವೆ ಮೆರವಣಿಗೆಯ ಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣ](https://www.udayavani.com/wp-content/uploads/2024/06/3-1-150x90.jpg)
ಮದುವೆ ಮೆರವಣಿಗೆಯ ಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣ
![Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ](https://www.udayavani.com/wp-content/uploads/2024/06/2-1-150x90.jpg)
Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ
![Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್ ಕ್ಲಾಸ್](https://www.udayavani.com/wp-content/uploads/2024/06/special-class-150x84.jpg)
Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್ ಕ್ಲಾಸ್
![1](https://www.udayavani.com/wp-content/uploads/2024/06/1-1-150x90.jpg)
Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ