Rabkavi Banhatti; ಪೌರ ಕಾರ್ಮಿಕರ ಕೊರತೆ: ನಗರಸಭೆಗೆ ಸವಾಲಾದ ಕಸ ವಿಲೇವಾರಿ


Team Udayavani, Jun 2, 2024, 8:59 PM IST

1-qqwwqe

ರಬಕವಿ ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯಲ್ಲಿ ಪೌರ ಕಾರ್ಮಿಕರ ಕೊರತೆಯಿಂದಾಗಿ ಕಸ ವಿಲೇವಾರಿ ಮತ್ತು ಕಸ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.

ಬನಹಟ್ಟಿ ನಗರದ ಬಹಳಷ್ಟು ಕಡೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಸ ಸಂಗ್ರಹಣೆಗೊಂಡರೂ ಸರಿಯಾದ ರೀತಿಯಲ್ಲಿ ವಿಲೇವಾರಿಯಾಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಸರಿಯಾಗಿ ಕಸ ವಿಲೇವಾರಿಯಾಗದೆ ಇರುವುದರಿಂದ ಚರಂಡಿಗಳಲ್ಲಿಯೂ ಅಪಾರ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹಣೆಗೊಳ್ಳುತ್ತಿದೆ.

ನಗರಸಭೆಯ ವ್ಯಾಪ್ತಿಯಲ್ಲಿ ರಬಕವಿ, ಬನಹಟ್ಟಿ, ರಾಮಪುರ ಮತ್ತು ಹೊಸೂರ ಊರುಗಳು ಬರುತ್ತವೆ. ಇದರಿಂದಾಗಿ ನಗರಸಭೆಯ ಸಭೆಯ ಬಹಳಷ್ಟು ವಿಶಾಲವಾಗಿದೆ. ಈ ನಾಲ್ಕು ಊರುಗಳಿಗೆ ಒಟ್ಟು 124 ಜನ ಪೌರ ಕಾರ್ಮಿಕರ ಅಗತ್ಯವಿದೆ. ಸದ್ಯ 52 ಜನ ಮಾತ್ರ ಪೌರ ಕಾರ್ಮಿಕರು ಮಾತ್ರ ಇದ್ದಾರೆ. ಇಲ್ಲಿಯ 16 ಜನ ಪೌರ ಕಾರ್ಮಿಕರು ಬೇರೆ ಕಡೆಗೆ ಖಾಯಃ ಆಗಿ ನಿಯೋಜನೆಗೊಂಡಿದ್ದರಿಂದ ಕಸ ನಿರ್ವಹಣೆ ಮತ್ತಷ್ಟು ಸಮಸ್ಯೆಯಾಗಿದೆ.

ಕಸ ನಿರ್ವಹಣೆಗೆ ಇಪ್ಪತ್ತು ವಾಹನಗಳನ್ನು ಬಳಸಾಗುತ್ತಿದೆ. ನಗರದ ಸಿದ್ಧರಾಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕರು ಸಾಕಷ್ಟು ಪ್ರಮಾಣದಲ್ಲಿ ಕಸ ಹಾಕಿ ಹೋಗುತ್ತಿದ್ದಾರೆ. ಈ ರಸ್ತೆಯ ಮೂಲಕ ಸಂಚಾರ ಮಾಡುವ ಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಬಹಳಷ್ಟು ತೊಂದರೆಯಾಗಿದೆ. ಮುಗತಿ ಗಲ್ಲಿಗೆ ಹೋಗುವ ತಿರುವಿನ ಬಳಿಯೂ ಜನರು ಕಸ ಹಾಕುತ್ತಿದ್ದಾರೆ. ಇಲ್ಲಿ ಜನರು ಕಸವನ್ನು ಚರಂಡಿ ಬದಿಗೆ ಹಾಕುತ್ತಿರುವುದರಿಂದ ಹೆಚ್ಚಾದ ಕಸ ಚರಂಡಿಯನ್ನು ಸೇರಿಕೊಳ್ಳುತ್ತಿದೆ. ಇದರಿಂದಾಗಿ ಚರಂಡಿಗಳು ಕೂಡಾ ತ್ಯಾಜ್ಯದಿಂದ ತುಂಬಿಕೊಂಡು ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ.

ರಬಕವಿ ಬನಹಟ್ಟಿ ನಗರಸಭೆಗೆ ಹೆಚ್ಚಿನ ಪೌರ ಕಾರ್ಮಿಕರನ್ನು ನೀಡಬೇಕು ಎಂದು ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ. ಇರುವ ಪೌರ ಕಾರ್ಮಿಕರನ್ನು ಬಳಸಿಕೊಂಡು ಕಸ ನಿರ್ಹವಣೆಯನ್ನು ಮಾಡಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.ಸಾರ್ವಜನಿಕರು ಕೂಡಾ ಕಸವನ್ನು ರಸ್ತೆ ಮತ್ತು ಚರಂಡಿಗೆ ಹಾಕದೆ ತಮ್ಮ ಮನೆಗೆ ಬರುವ ವಾಹನಗಳಿಗೆ ನೀಡಬೇಕು.
– ಜಗದೀಶ ಈಟಿ ಪೌರಾಯುಕ್ತರು, ನಗರಸಭೆ ರಬಕವಿ-ಬನಹಟ್ಟಿ

ಜನರು ಕಸವನ್ನು ಚರಂಡಿಗಳಿಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಾಕದೆ ನಗರಸಭೆಯ ವಾಹನಗಳಿಗೆ ನೀಡಬೇಕು. ಇದರಿಂದ ನಗರ ನೈರ್ಮಲ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ.
– ಡಾ.ಅನಂತಮತಿ ಎಂಡೊಳ್ಳಿ, ಸಾಮಾಜಿಕ ಕಾರ್ಯಕರ್ತೆ, ರಬಕವಿ-ಬನಹಟ್ಟಿ

ವರದಿ-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

14-mudhol-2

Mudhol: ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ‌ ಖಂಡನೆ; ಮನವಿ ಸಲ್ಲಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.