ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ
Team Udayavani, Jun 3, 2024, 6:00 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿದ್ದು, ರೈತರಿಗೆ ಬಿತ್ತನೆ ಬೀಜ ಹಾಗೂ ರಸ ಗೊಬ್ಬರಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ ಮೊದಲ ವಾರ ಬಿತ್ತನೆ ಪ್ರಾರಂಭವಾಗುವ ನೀರೀಕ್ಷೆಯಿದ್ದು, ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಪ್ರಮಾ ಣಿತ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ಸಹಾಯಧನದಲ್ಲಿ ಒದಗಿಸ ಲಾಗುತ್ತಿದೆ.
ಕೆಂಪಕ್ಕಿ ಬೀಜಕ್ಕೆ ಬೇಡಿಕೆ
ಜಿಲ್ಲೆಯಲ್ಲಿ ಕೆಂಪಕ್ಕಿ ತಳಿಯ ಭತ್ತದ ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ಲಭ್ಯವಿರುವ ಕೆಂಪಕ್ಕಿ ತಳಿಗಳಾದ ಜಯ (140-150 ದಿನಗಳು) 60.5 ಕ್ವಿಂ., ಜ್ಯೋತಿ (115-120 ದಿನಗಳು) 65.5 ಕ್ವಿಂ., ಎಂಒ-4 (130-135 ದಿನಗಳು) 198 ಕ್ವಿಂ. ಮತ್ತು ಸಹ್ಯಾದ್ರಿ ಕೆಂಪುಮುಖೀ¤ (120-125 ದಿನಗಳು) 180 ಕ್ವಿಂ. ಬಿತ್ತನೆ ಬೀಜಕ್ಕೆ ಈಗಾಗಲೇ ಬೇಡಿಕೆ ಸಲ್ಲಿಸಿ ಹಂತಹಂತವಾಗಿ ದಾಸ್ತಾನಿರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಂಒ-4 ತಳಿಯೊಂದಿಗೆ ಇತರ ಪರ್ಯಾಯ ಕೆಂಪಕ್ಕಿ ತಳಿಗಳಾದ ಜಯ, ಜ್ಯೋತಿ, ಸಹ್ಯಾದ್ರಿ ಕೆಂಪುಮುಖೀ¤ ತಳಿಗಳ ಬಿತ್ತನೆ ಬೀಜಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ.
ರೈತ ಸಂಪರ್ಕದಲ್ಲಿ ಮಾಹಿತಿ
ರೈತ ಸಂಪರ್ಕ ಕೇಂದ್ರದಲ್ಲಿ ಎಂಒ-4. 112 ಕ್ವಿಂ., ಸಹ್ಯಾದ್ರಿ ಕೆಂಪುಮುಖೀ¤ – 80 ಕ್ವಿಂ., ಜಯ – 28.25 ಕ್ವಿಂ., ಜ್ಯೋತಿ 26 ಕ್ವಿಂ. ದಾಸ್ತಾನಿದ್ದು, ರೈತರು ರೈತ ಸಂಪರ್ಕ ಕೇಂದ್ರಗಳಿಂದ ಬಿತ್ತನೆ ಬೀಜ ಪಡೆಯುವಾಗ ವಿವಿಧ ತಳಿಯ ಭತ್ತದ ಅವಧಿ, ಬೇಸಾಯ ಕ್ರಮಗಳು ಹಾಗೂ ಸಸ್ಯ ಸಂರಕ್ಷಣೆ ವಿಧಾನಗಳ ಮಾಹಿತಿ ಪಡೆದು ಆಯಾ ಕಾಲಕ್ಕನುಗುಣವಾಗಿ ಬಿತ್ತನೆಗೆ ಉಪಯೋಗಿಸಬೇಕು. ಕರಾವಳಿಯಲ್ಲಿ ಜ್ಯೋತಿ ತಳಿಗೆ ಪರ್ಯಾಯವಾದ ಕೆಂಪಕ್ಕಿ ಸಹ್ಯಾದ್ರಿ ಕೆಂಪುಮುಖೀ¤ಯನ್ನು ಬಿತ್ತನೆಗೆ ಪರಿಚಯಿಸಲಾಗುತ್ತಿದೆ.
ರಸಗೊಬ್ಬರ ದಾಸ್ತಾನು
ದ.ಕ.ದಲ್ಲಿ ಮುಂಗಾರು ಹಂಗಾಮಿನ ಮೇ ಅಂತ್ಯದ ವರೆಗಿನ ರಸಗೊಬ್ಬರದ ಬೇಡಿಕೆ 6,772 ಟನ್ಗಳಷ್ಟಿದ್ದು ದಾಸಾನು ಸೇರಿದಂತೆ ಜಿಲ್ಲೆಯ ವಿವಿಧ ಸಹಕಾರಿ ಹಾಗೂ ಖಾಸಗಿ ಮಾರಾಟ ಮಳಿಗೆಗಳಲ್ಲಿ 14,608 ಟನ್ ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.