![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
Highway toll ಹೆಚ್ಚಳ; ಲೋಕಸಭೆ ಚುನಾವಣೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ದರ ಏರಿಕೆ
Team Udayavani, Jun 3, 2024, 6:52 AM IST
![1-wqeewqewqewq](https://www.udayavani.com/wp-content/uploads/2024/06/1-wqeewqewqewq-620x356.jpg)
ಹೊಸದಿಲ್ಲಿ: ಸೋಮವಾರದಿಂದ ಎಕ್ಸ್ ಪ್ರಸ್ ವೇ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಲಿದೆ. ದೇಶಾದ್ಯಂತ ಸರಾಸರಿ ಶೇ. 5ರಷ್ಟು ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಪ್ರತೀ ವರ್ಷ ಟೋಲ್ ಶುಲ್ಕವನ್ನು ಪರಿಷ್ಕರಣೆ ಮಾಡುವಂತೆ ಈ ಬಾರಿ ಶೇ. 5ರಷ್ಟು ಹೆಚ್ಚಳ ಮಾಡಲು ನಿರ್ಧರಿಸ ಲಾಗಿದೆ. ಈ ಹೊಸ ಶುಲ್ಕಗಳು ಎ. 1 ರಿಂದಲೇ ಜಾರಿಯಾಗಬೇಕಿತ್ತು. ಆದರೆ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ತಡೆಹಿಡಿಯಲಾಗಿತ್ತು. ಈಗ ಲೋಕಸಭೆ ಚುನಾವಣೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಟೋಲ್ ಶುಲ್ಕ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೂತನ ಶುಲ್ಕದ ನಿರ್ಧಾರವನ್ನು 2 ತಿಂಗಳ ಅನಂತರ ತೆಗೆದುಕೊಳ್ಳಲು ಚುನಾವಣೆ ಆಯೋಗ ಹೆದ್ದಾರಿ ಪ್ರಾಧಿಕಾರವನ್ನು ಕೇಳಿಕೊಂಡಿತ್ತು. ಅದರಂತೆ ಪರಿಷ್ಕೃತ ಶುಲ್ಕ ಜೂ. 3ರಿಂದ ಜಾರಿಯಾಗುತ್ತಿದೆ.
ಪ್ರತಿವರ್ಷ ಆಗುವ ಶುಲ್ಕ ಪರಿಷ್ಕರಣೆಯ ಭಾಗವಾಗಿ ಹಾಗೂ ಹಣದುಬ್ಬರದಲ್ಲಿ ಬದಲಾವಣೆ, ಗ್ರಾಹಕ ಬೆಲೆ ಸೂಚ್ಯಂಕದ ಅನುಸಾರ ಈ ನೂತನ ಶುಲ್ಕ ಜಾರಿಯಾಗಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ದೇಶಾದ್ಯಂತ 855 ಟೋಲ್ ಪ್ಲಾಜಾಗಳು ಸೋಮವಾರದಿಂದಲೇ ಹೊಸ ಶುಲ್ಕ ವಿಧಿಸಲಿವೆ. ಕಳೆದ ಒಂದು ದಶಕದಿಂದ ಭಾರತ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯಲ್ಲಿ ತೊಡಗಿದ್ದು, ಈ ವರೆಗೆ 14,600 ಕಿ.ಮೀ. ವಿಸ್ತರಿಸಿದೆ.
ಟಾಪ್ ನ್ಯೂಸ್
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![6](https://www.udayavani.com/wp-content/uploads/2024/06/6-20-150x90.jpg)
ಯೂಟ್ಯೂಬ್ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ
![1-qwewqewq](https://www.udayavani.com/wp-content/uploads/2024/06/1-qwewqewq-1-150x92.jpg)
West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-150x90.jpg)
Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!
![1-adsdadsad](https://www.udayavani.com/wp-content/uploads/2024/06/1-adsdadsad-150x87.jpg)
Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?
MUST WATCH
ಹೊಸ ಸೇರ್ಪಡೆ
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-150x96.jpg)
Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.