Viral News: ಕಳ್ಳತನಕ್ಕೆಂದು ಮನೆಗೆ ನುಗ್ಗಿ ಎಸಿಯ ಗಾಳಿಗೆ ಗಾಢವಾಗಿ ನಿದ್ರಿಸಿದ ಕಳ್ಳ.!
ಪೊಲೀಸರೇ ಬಂದು ಎಚ್ಚರಿಸಿದರು.!
Team Udayavani, Jun 3, 2024, 11:21 AM IST
ಲಕ್ನೋ: ಮನೆ ಕಳ್ಳತನ ಬಂದ ಕಳ್ಳನೊಬ್ಬ ಮನೆಯಲ್ಲಿದ್ದ ಎಸಿಯ ಗಾಳಿಗೆ ಗಾಢ ನಿದ್ರೆಗೆ ಜಾರಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಭಾನುವಾರ(ಜೂ.2 ರಂದು) ಮುಂಜಾನೆ ಈ ಘಟನೆ ನಡೆದಿದ್ದು, ಲಕ್ನೋದ ಇಂದಿರಾನಗರ ಪ್ರದೇಶದಲ್ಲಿದ್ದ ಖಾಲಿ ಮನೆಯೊಂದಕ್ಕೆ ವ್ಯಕ್ತಿಯೊಬ್ಬ ಕಳ್ಳತನ ಮಾಡಲು ಬಂದಿದ್ದಾನೆ. ಈ ಮನೆ ಡಾ. ಸುನೀಲ್ ಪಾಂಡೆ ಎಂಬುವವರಿಗೆ ಸೇರಿದ್ದು, ಘಟನೆಯ ಸಮಯದಲ್ಲಿ ಅವರು ಮನೆಯಲ್ಲಿ ಇಲ್ಲದ ಕಾರಣ ಕಳ್ಳ ಮನೆಯ ಗೇಟ್ ತೆರೆದು ಮನೆಯೊಳಗೆ ಕಳ್ಳತನಕ್ಕೆ ಬಂದಿದ್ದಾನೆ.
ಮದ್ಯ ಸೇವಿಸಿ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿ ಮನೆಯ ಒಳಗೆ ಹೋಗಿದ್ದಾನೆ. ಮನೆಯಲ್ಲಿ ಎಸಿ ಆನ್ ಇರುವುದು ಕಂಡಿದ್ದಾನೆ. ಸ್ವಲ್ಪ ಸಮಯ ವಿಶ್ರಾಂತಿ ಮಾಡಿ ಕಳ್ಳತನ ಮಾಡಲೆಂದು ವ್ಯಕ್ತಿ ಸೋಫಾದ ಬಳಿ ಎಸಿಯ ತಣ್ಣಗೆಯ ಗಾಳಿಗೆ ಕೂತಿದ್ದಾನೆ.
ಮನೆಯ ಮಾಲೀಕ ಮನೆಯಲ್ಲಿ ಇಲ್ಲದೆ ಇದ್ದಾಗ, ಮನೆಯ ಗೇಟ್ ಹೇಗೆ ತೆರೆದಿದೆ ಎಂದು ಅಕ್ಕಪಕ್ಕದವರು ಮಾಲೀಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಈ ವೇಳೆ ಡಾ. ಪಾಂಡೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ, ಏರ್ ಕಂಡಿಷನರ್ ಆನ್ ಮಾಡಿ ಆರಾಮವಾಗಿ ಮಲಗಿದ್ದ ವ್ಯಕ್ತಿಯನ್ನು ಕಂಡಿದ್ದಾರೆ. ವ್ಯಕ್ತಿಯನ್ನು ಎಚ್ಚರಿಸಿ ವಿಚಾರಿಸಿದಾಗ ಆತ ಕಳ್ಳತನಕ್ಕೆಂದು ಮನೆಯೊಳಗಡೆ ಬಂದಿದ್ದಾಗಿ ಹೇಳಿದ್ದಾನೆ.
ಸದ್ಯ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದೆಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.