Chef Chidambara trailer: ಭರವಸೆ ಮೂಡಿಸಿದ ಅನಿರುದ್ಧ್ ಸಿನಿಮಾ
Team Udayavani, Jun 3, 2024, 3:15 PM IST
“ಶೆಫ್ ಚಿದಂಬರ’ ಹೀಗೊಂದು ಸಿನಿಮಾ ತುಂಬಾ ದಿನಗಳಿಂದ ಸದ್ದು ಮಾಡುತ್ತಲೇ ಇದೆ. ಈಗ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಕುತೂಹಲಕಾರಿ ಅಂಶಗಳ ಮೂಲಕ ಟ್ರೇಲರ್ ಭರವಸೆ ಮೂಡಿಸಿದೆ. ಆ್ಯಕ್ಷನ್, ಸಸ್ಪೆನ್ಸ್, ಕಾಮಿಡಿ ಸೇರಿದಂತೆ ಹಲವು ಅಂಶಗಳು ಟ್ರೇಲರ್ನಲ್ಲಿ ಗಮನ ಸೆಳೆಯುತ್ತಿವೆ.
ಅನಿರುದ್ಧ್ ಜತಕರ್ನಾಯಕನಾಗಿ ನಟಿಸಿರುವ ಈ ಸಿನಿಮಾವನ್ನು ರೂಪ ಡಿ.ಎನ್ ನಿರ್ಮಾಣ ಮಾಡಿದ್ದಾರೆ. ಆನಂದರಾಜ್ ಎಂ. ನಿರ್ದೇಶಿಸಿರುವ ಈ ಸಿನಿಮಾದ ಟ್ರೇಲರ್ ಅನ್ನು ನಟ ರಮೇಶ್ ಅರವಿಂದ್ ಇತ್ತೀಚೆಗೆ ಬಿಡುಗಡೆ ಮಾಡಿದರು. ಟ್ರೇಲರ್ಗೆ ಮೆಚ್ಚುಗೆ ದೊರಕುತ್ತಿದ್ದು, ಇದೇ ಜೂನ್ 14 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ಧ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.
“ಅನಿರುದ್ಧ್ ನನ್ನ ನಿರ್ದೇಶನದ ರಾಮ ಶ್ಯಾಮ ಭಾಮ ಸೇರಿದಂತೆ ಎರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ಪ್ರತಿಭಾವಂತ ನಟ. ಈ ಚಿತ್ರದ ಟ್ರೇಲರ್ ಸಹ ಚೆನ್ನಾಗಿದೆ. ಡಾರ್ಕ್ ಕಾಮಿಡಿ ಜಾನರ್ನ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ’ ಎಂದು ಶುಭಕೋರಿದರು ರಮೇಶ್ ಅರವಿಂದ್
ನಟ ಅನಿರುದ್ಧ್ ಮಾತನಾಡಿ, “ನಿರ್ಮಾಪಕಿ ರೂಪ ಅವರ ಪತಿ ಸರ್ವೋತಮ್ ಹಾಗೂ ನಾನು ಬಹಳ ವರ್ಷಗಳ ಸ್ನೇಹಿತರು. ಅವರು ಚಿತ್ರ ಮಾಡೋಣ ಎಂದಾಗ ಸಾಕಷ್ಟು ಕಥೆಗಳನ್ನು ಕೇಳಿದ್ದೆ. ಆನಂದರಾಜ್ ಅವರು ಹೇಳಿದ ಈ ಕಥೆ ಇಷ್ಟವಾಯಿತು. ಕಿಚ್ಚ ಸುದೀಪ್ ಟೀಸರ್ಗೆ ಧ್ವನಿ ನೀಡಿ ಪ್ರೋತ್ಸಾಹಿಸಿದರು. ಈಗ ರಮೇಶ್ ಅರವಿಂದ್ ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ’ ಎಂದರು ನಟ ಅನಿರುದ್ಧ್.
ಚಿತ್ರದ ನಾಯಕಿಯರಾದ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್ ಅವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್, ಛಾಯಾಗ್ರಾಹಕ ಉದಯ್ ಲೀಲ, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಸಂಭಾಷಣೆ ಬರೆದಿರುವ ಗಣೇಶ್ ಪರಶುರಾಮ್ ಸೇರಿದಂತೆ ಮುಂತಾದ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.