ಗದಗ:ಅವಳಿ ನಗರದ ಜನತೆಗೆ ತಪ್ಪದ ನೀರಿನ ಬವಣೆ


Team Udayavani, Jun 3, 2024, 12:15 PM IST

Udayavani Kannada Newspaper

ಉದಯವಾಣಿ ಸಮಾಚಾರ
ಗದಗ: ದೇವರು ಕೃಪೆ ತೋರಿ ಮಳೆ ಸುರಿಸಿ ನದಿಗೆ ನೀರು ಹರಿಸಿದರೂ ಅವಳಿ ನಗರದ ಜನತೆಗೆ ನೀರಿನ ಬವಣೆ ತೀರದಂತಾಗಿದೆ. ಅವಳಿ ನಗರಕ್ಕೆ ಕುಡಿವ ನೀರು ಪೂರೈಸುವ ಮುಖ್ಯ ಕೊಳವೆ ಮಾರ್ಗಗಳಲ್ಲೊಂದಾದ ಅಡವಿ ಸೋಮಾಪೂರದ ಗ್ರಾಮದ ಹತ್ತಿರ ಇರುವ ಗದ್ದಿ ಹಳ್ಳದ ಬಳಿ ಮುಖ್ಯ ಕೊಳವೆ ಪೈಪ್‌ ಒಡೆದಿದ್ದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದ್ದು, ಅವಳಿ ನಗರದ ಜನತೆಗೆ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಕಳೆದ ಕೆಲ ತಿಂಗಳಿಂದ ಬರಗಾಲ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ನೀರು ಖಾಲಿಯಾಗಿ ಸಿಂಗಟಾಲೂರ್‌ ಬ್ಯಾರೇಜ್‌ ಡೆಡ್‌ ಸ್ಟೋರೆಜ್‌ ತಲುಪಿದ್ದರಿಂದ ಅವಳಿ ನಗರಕ್ಕೆ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಸ್ಥಳಿಯ ಸಾರ್ವಜನಿಕರು ನೀರಿಗಾಗಿ ಪರಿತಪಿಸಿದ್ದರು. ಕಳೆದ ಕೆಲ ವಾರಗಳಿಂದ ತುಂಗಭದ್ರಾ ನದಿ ಪಾತ್ರದಲ್ಲಿ ಉತ್ತಮವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು.

ಇನ್ನೇನು ನದಿಯಲ್ಲಿ ನೀರು ಶೇಖರಣೆಗೊಂಡು ವಾರಕ್ಕೊಮೆಯಾದರೂ ಅವಳಿ ನಗರದ ವಾರ್ಡ್‌ಗಳಿಗೆ ನೀರು ಪೂರೈಕೆಯಾಗುತ್ತದೆ ಎನ್ನುವಷ್ಟರಲ್ಲಿ ಮುಖ್ಯ ಕೊಳವೆ ಪೈಪ್‌ ಒಡೆದಿದ್ದರಿಂದ ಸಮಸ್ಯೆ ಹಾಗೆ ಮುಂದುವರಿದಿದೆ.

ಕಳಪೆ ಮಟ್ಟದ ಪೈಪ್‌ಲೈನ್‌: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರ ಬ್ಯಾರೇಜ್‌ನಿಂದ ಪೈಪ್‌ ಲೈನ್‌ ಮೂಲಕ ಅವಳಿ ನಗರಕ್ಕೆ ತುಂಗಭದ್ರಾ ನದಿ ನೀರು ಪೂರೈಸಲಾಗುತ್ತದೆ. ಆದರೆ ಕಳಪೆ ಮಟ್ಟದ ಪೈಪ್‌ಲೈನ್‌ ಅಳವಡಿಕೆ ಹಿನ್ನೆಲೆಯಲ್ಲಿ ಪ್ರತಿವಾರ ಹಾಗೂ ತಿಂಗಳಿಗೊಮ್ಮೆ ಅಲ್ಲಲ್ಲಿ ಪೈಪ್‌ಲೈನ್‌ ಸೋರಿಕೆ ಕಂಡು ಬರುತ್ತಿತ್ತು. ಕಳೆದ ಕೆಲ ತಿಂಗಳಿಂದ ಪೈಪ್‌ಲೈನ್‌ನಲ್ಲಿ ನೀರು ಪೂರೈಕೆಯಾಗಿರಲಿಲ್ಲ. ಸದ್ಯ ನದಿಯಲ್ಲಿ ಸಾಕಷ್ಟು ಪ್ರಮಾಣದ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಅವಳಿ ನಗರಕ್ಕೆ ನೀರು ಪೂರೈಸಲು ಪೈಪ್‌ಲೈನ್‌ ಮಾರ್ಗದ ಮೂಲಕ ಪೂರೈಸಲಾಗಿತ್ತು. ನೀರಿನ ಒತ್ತಡದ ಪರಿಣಾಮ ಪೈಪ್‌ಲೈನ್‌ ಸ್ಫೋಟಗೊಂಡು ಅಪಾರ ಪ್ರಮಾಣದಲ್ಲಿ ನೀರು ಸೋರಿಕೆಯಾಗಿದೆ. ಸಂಜೆಯಾದರೂ ನೀರಿನ ಹರಿವು ನಿಲ್ಲದಾಗಿದೆ.

ಪೈಪ್‌ಲೈನ್‌ ದುರಸ್ತಿ ಬಹುದೊಡ್ಡ ಸವಾಲು: ಗದಗ- ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಸುತ್ತಿರುವ ಪೈಪ್‌ ಲೈನ್‌ ಅಡವಿಸೋಮಾಪುರ ಬಳಿಯ ಎರಡು ಕಡೆಗಳಲ್ಲಿ ನೀರು ಸೋರಿಕೆ ಕಂಡು ಬರುತ್ತಿದೆ. ಪೈಪ್‌ಲೈನ್‌ ಒಡೆದ ಸ್ಥಳದಲ್ಲಿ ಶನಿವಾರ ಬೆಳಗ್ಗೆಯಿಂದ ಜೆಸಿಬಿ ಮೂಲಕ ನೀರನ್ನು ಲಿಫ್ಟ್‌ ಮಾಡಲಾಗುತ್ತಿದೆಯಾದರೂ ನೀರಿನ ಹರಿವು ನಿಲ್ಲುತ್ತಿಲ್ಲ. ನೀರಿನ ಹರಿವು ನಿಂತ ನಂತರವೇ ಪೈಪ್‌ಲೈನ್‌ ಯಾವ ಮಟ್ಟದಲ್ಲಿ ಒಡೆದಿದೆ ಎಂಬುದು ತಿಳಿಯಲಿದೆ. ಹೀಗಾಗಿ ಪೈಪ್‌ಲೈನ್‌ ದುರಸ್ತಿ ನಗರಸಭೆ
ಸಿಬ್ಬಂದಿಗೆ ಬಹುದೊಡ್ಡ ಸವಾಲಾಗಿದೆ.

ಪೈಪ್‌ಲೈನ್‌ ದುರಸ್ತಿಗೆ ವೆಲ್ಡ್‌ರ್‌ಗಳೇ ಸಿಗುತ್ತಿಲ್ಲ: ಕಳಪೆ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ಒಂದೆಡೆಯಾದರೆ, ಕಳೆದ ಕೆಲ ವರ್ಷಗಳಿಂದ ಅಲ್ಲಲ್ಲಿ ಸೋರಿಕೆಯಾದ ಪೈಪ್‌ ಲೈನ್‌ಗಳ ದುರಸ್ತಿ ಕೈಗೊಂಡಿದ್ದ ವೆಲ್ಡರ್‌ಗಳಿಗೆ ಸರಿಯಾದ ಸಮಯದಲ್ಲಿ ವೇತನ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ವೆಲ್ಡರ್‌ಗಳು ಕೂಡ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಅಧಿಕಾರಿಗಳು ವೆಲ್ಡರ್‌ಗಳಿಗೆ ಎಷ್ಟೇ ಫೋನ್‌ ಮಾಡಿದರೂ ವೆಲ್ಡರ್‌ಗಳು ಮಾತ್ರ ಫೋನ್‌ ಸ್ವೀಕರಿಸುತ್ತಿಲ್ಲ. ಇದು ಕೂಡ ನಗರಸಭೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ನಗರಸಭೆ ಸಿಬ್ಬಂದಿ ಈಗಾಗಲೇ ಪೈಪ್‌ ಲೈನ್‌ ದುರಸ್ತಿಗಾಗಿ ಕ್ರಮ ಕೈಗೊಂಡಿದ್ದಾರೆ. ಭಾನುವಾರ ಸಂಜೆಯೊಳಗೆ ಪೈಪ್‌ಲೈನ್‌ ರಿಪೇರಿಯಾಗಬಹುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಮುಂದೆ ಹೀಗಾಗದಂತೆ ಸರ್ವಪ್ರಯತ್ನ ಮಾಡಲಾಗುತ್ತಿದೆ.
ಪ್ರಶಾಂತ ವರಗಪ್ಪನವರ,
ಪ್ರಭಾರ ಪೌರಾಯುಕ್ತ, ಗದಗ-ಬೆಟಗೇರಿ ನಗರಸಭೆ

ತಿಂಗಳಿಗೆ ನಾಲ್ಕೈದು ಬಾರಿ ಸೋರಿಕೆ
ಗದಗ-ಬೆಟಗೇರಿ ನಗರಸಭೆಯಲ್ಲಿ ಸದ್ಯ ಬಿಜೆಪಿ ಆಡಳಿತ ನಡೆಸುತ್ತಿದೆ. ಸಿಂಗಟಾಲೂರ್‌ ಬ್ಯಾರೇಜಿನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಪೂರೈಕೆಯಾಗುವ ಪೈಪ್‌ಲೈನ್‌ ಕಳಪೆ ಗುಣಮಟ್ಟದ್ದಾಗಿದ್ದ ದ ತಿಂಗಳಿಗೆ ನಾಲ್ಕರಿಂದ ಐದು ಬಾರಿ ಪೈಪ್‌ಲೈನ್‌ನಲ್ಲಿ ಸೋರಿಕೆ ಕಂಡು ಬರುತ್ತದೆ. ಅಧಿಕಾರಿಗಳು ಹೇಗೂ ವೆಲ್ಡರ್‌ಗಳನ್ನು ಹಿಡಿದು ಸೋರಿಕೆಯಾದ ಪೈಪ್‌ಗ್ಳನ್ನು ವೆಲ್ಡಿಂಗ್‌
ಮೂಲಕ ಸರಿಪಡಿಸಿ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳುತ್ತಾರೆ. ಆದರೆ ನಗರಸಭೆಯಲ್ಲಿ ವೆಲ್ಡರ್‌ಗಳಿಗೆ ಪಾವತಿಸಬೇಕಾದ ಬಿಲ್‌ ತಡೆಹಿಡಿಯುವುದು, ವಿನಾಕಾರಣ ಮುಂದೂಡುವುದು ಮಾಡುತ್ತಿರುವುದರಿಂದ ವೆಲ್ಡರ್‌ಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಫೋನ್‌ ಮಾಡಿದರೂ ಕೈಗೆ ಸಿಗುತ್ತಿಲ್ಲ ಎನ್ನುತ್ತಾರೆ ನಗರಸಭೆ ಸಿಬ್ಬಂದಿ.

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.