ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ


Team Udayavani, Jun 3, 2024, 3:55 PM IST

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಉದಯವಾಣಿ ಸಮಾಚಾರ
ಕೊಪ್ಪಳ: ದಿನದ 24 ಗಂಟೆಗಳಲ್ಲಿ ಎಂಟು ತಾಸು ದುಡಿಸಿ ಕೊಳ್ಳಬೇಕೆಂದು ಮಾಲೀಕ ವರ್ಗವನ್ನು ಕಾರ್ಮಿಕ ನಾಯಕರು ಆಗ್ರಹಿಸಿದ್ದರು. ಅದಕ್ಕೆ ಮಾಲೀಕರು ಒಪ್ಪದಿದ್ದಾಗ ಕಾರ್ಮಿಕರ ಮತ್ತು ಮಾಲೀಕರ ನಡುವೆ ನಡೆದ ಸಂಘರ್ಷದಲ್ಲಿ ಹಲವು ಕಾರ್ಮಿಕರು ಹುತಾತ್ಮರಾಗಿ ಕಾರ್ಮಿಕರ ಗೆಲುವು ಸಾಧಿಸುತ್ತಾರೆ. ಆ ದಿನ ನೆನಪಿಸುವ ದಿನವೇ ಕಾರ್ಮಿಕ ದಿನಾಚರಣೆ ಎಂದು ಎಂದು ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಎಐಟಿಯುಸಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್‌ ವಿಜಯ ಭಾಸ್ಕರ್‌ ಡಿ. ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ 138ನೇ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ ಸಂಯೋಜಿತ)ದ ಜಿಲ್ಲಾ ಘಟಕದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಎಐಟಿಯುಸಿಯ ಹೋರಾಟದ ಮೂಲಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸ್ಥಾಪಿಸುವಲ್ಲಿ ಸಂಘಟನೆ ಶ್ರಮಿಸಿದೆ. ಆದರೆ ಈಚೆಗೆ ಕಲ್ಯಾಣ ಮಂಡಳಿಯ ಅಧಿಕಾರಿಗಳಿಂದ ಕಾರ್ಮಿಕ ವರ್ಗಕ್ಕೆ ಅನ್ಯಾಯವಾಗುತ್ತಿದೆ. ನಮ್ಮ ಹಕ್ಕುಗಳನ್ನು ಪಡೆಯಬೇಕಾದರೆ ಹೋರಾಟದ ಮೂಲಕವೇ ಪಡೆಯಬೇಕು ಎಂದರು.

ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎಚ್‌. ಜಿ. ಉಮೇಶ್‌ ಮಾತನಾಡಿ, ಕಲ್ಯಾಣ ಮಂಡಳಿಯ ದುಡ್ಡನ್ನು ಬೇರೆ ಬೇರೆ ಕಾರಣಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಅದನ್ನು ತಡೆಯಲು ನಮ್ಮ ಸಂಘಟನೆ ಸತತ ಪ್ರಯತ್ನ ಮಾಡುತ್ತಿದೆ ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ| ಕೆ.ಎಸ್‌. ಜನಾರ್ದನ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮೊದಲು ನಗರದ ಕಾರ್ಮಿಕ ವೃತ್ತದಿಂದ ಅಶೋಕ ವೃತ್ತದವರೆಗೆ ಕಟ್ಟಡ ಕಾರ್ಮಿಕರು ಬೃಹತ್‌ ಮೆರವಣಿಗೆ ನಡೆಸಿ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖಂಡರಾದ ಹುಲುಗಪ್ಪ ಅಕ್ಕಿ ರೊಟ್ಟಿ, ಗಿರೀಶ್‌ ತುಮಕೂರು, ಯು.ಎಸ್‌.ಸೊಪ್ಪಿಮಠ,
ಎ.ಬಿ.ದಿಂಡೂರ್‌, ಅಡಿವೆಪ್ಪ ಚಲವಾದಿ, ಹೊನ್ನಪ್ಪ ಮರೆಮ್ಮನವರ್‌, ಮುಮ್ತಾಜ್‌ ಬೇಗಂ, ಪ್ರಭುದೇವ್‌ ಯಳಸಂಗಿ, ನೂರ್‌ಸಾಬ್‌ ಹೊಸಮನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಸಂಘದ ತಾಲೂಕು ಘಟಕದ ಕಾರ್ಯದರ್ಶಿ ರಾಜಾಸಾಬ್‌ ತಹಶೀಲ್ದಾರ್‌ ಸ್ವಾಗತಿಸಿದರು. ಜಿಲ್ಲಾ ಸಂಚಾಲಕ ಎಸ್‌.ಎ.ಗಫಾರ್‌ ನಿರೂಪಿಸಿದರು. ಕೊನೆಯಲ್ಲಿ ಸೆಬಾಸ್ಟಿನ್‌ ವಂದಿಸಿದರು.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kushtagi

Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ‌ ಪಾಟೀಲ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.