Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ನೀಡುವುದಿಲ್ಲ.. ವರದಿ ಬಂದ ಬಳಿಕ ಮುಂದಿನ ಕ್ರಮ
Team Udayavani, Jun 3, 2024, 6:45 PM IST
ಬೆಳಗಾವಿ : ಲೋಕಸಭೆ ಚುನಾವಣೆ ಫಲಿತಾಂಶ ಕುರಿತ ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಲೋಕಸಭಾ ಚುನಾವಣೆಯ ಕೆಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಎಂದು ಹೇಳುತ್ತಿವೆ. ಆದರೆ, ಕೆಲವೊಂದು ಸಮೀಕ್ಷೆಗಳು ಕಾಂಗ್ರೆಸ್ಗೆ ಮುನ್ನಡೆ ಆಗಲಿದೆ ಎಂಬ ಸುಳಿವನ್ನೂ ನೀಡಿವೆ.ಈಗಾಗಲೇ ಮತ ಹಾಕಿಯಾಗಿದೆ. ಜನರೇ ಈ ವಿಚಾರದಲ್ಲಿ ಗೊಂದಲ್ಲಿದ್ದಾರೆ. ಫಲಿತಾಂಶಕ್ಕೆ ತುಂಬಾ ಸಮಯ ಉಳಿದಿಲ್ಲ. ಎಲ್ಲರೂ ಕಾದು ನೋಡೋಣ, ಅನಗತ್ಯ ಚರ್ಚೆ ಮಾಡುವ ಅವಶ್ಯಕತೆ ಇಲ್ಲ’ ಎಂದರು.
ಸಿಬಿಐಗೆ ನೀಡುವುದಿಲ್ಲ
ವಾಲ್ಮೀಕಿ ನಿಗಮದ ಹಗರಣ ಸಿಬಿಐಗೆ ನೀಡುವುದಿಲ್ಲ. ಈಗಾಗಲೇ ಪ್ರಕರಣವನ್ನು ಎಸ್ ಐಟಿಗೆ ವಹಿಸಲಾಗಿದೆ. ಆಂತರಿಕ ತನಿಖೆ ಕೂಡ ನಡೆಯುತ್ತಿದೆ. ಯಾವುದೇ ಹೆಜ್ಜೆ ಇಡುವ ಮೊದಲು ತಪ್ಪು ಮಾಡಿದ್ದು ಗೊತ್ತಾಗಬೇಕು. ಆರೋಪ ಮಾಡಿದ್ದಾರೆ ಎಂದು ಸಿಬಿಐ ಗೆ ನೀಡಲು ಆಗುವುದಿಲ್ಲ. ಎಸ್ಐಟಿ ಮಧ್ಯಂತರ ವರದಿ ನೀಡಿದರೆ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ. ಸಚಿವ ನಾಗೇಂದ್ರ ರಾಜೀನಾಮೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳಬೇಕು. ಯಾವುದೇ ನಿರ್ಧಾರ ಮಾಡಬೇಕು ಎಂದರೂ ವರದಿ ಬರಬೇಕು. ವರದಿ ಬಂದಾದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.