ಪ್ರಜಾತಂತ್ರದ ಮುಕುಟಕ್ಕೆ ಜಾಗತಿಕ ದಾಖಲೆಯ ಗರಿ


Team Udayavani, Jun 4, 2024, 6:01 AM IST

ಪ್ರಜಾತಂತ್ರದ ಮುಕುಟಕ್ಕೆ ಜಾಗತಿಕ ದಾಖಲೆಯ ಗರಿ

ಲೋಕಸಭಾ ಚುನಾವಣೆಯ ಮತಎಣಿಕೆ ಮತ್ತು ಫ‌ಲಿತಾಂಶ ಘೋಷಣೆಗಾಗಿ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಸಂಜೆಯ ವೇಳೆಗೆ ಫ‌ಲಿತಾಂಶದ ಸ್ಪಷ್ಟ ಚಿತ್ರಣ ಲಭಿಸಲಿದೆ.

ಬರೋಬ್ಬರಿ ಒಂದೂವರೆ ತಿಂಗಳ ಕಾಲ ನಡೆದ ಈ ಸುದೀರ್ಘ‌ ಚುನಾವಣ ಪ್ರಕ್ರಿಯೆಗೆ ಈ ಮೂಲಕ ತೆರೆ ಬೀಳಲಿದೆ. ಈ ಬಾರಿಯ ಲೋಕಸಭೆ ಚುನಾವಣೆ “ನ ಭೂತೊ’ ಎಂಬಂತೆ ನಡೆದಿದ್ದು ದೇಶದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದೆ. ಹಾಲಿ ಚುನಾವಣೆಯಲ್ಲಿ 31.2 ಕೋಟಿ ಮಹಿಳೆಯರ ಸಹಿತ ಒಟ್ಟು 64.2 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಭಾರತ ವಿಶ್ವದಾಖಲೆ ಸೃಷ್ಟಿಸಲು ಕಾರಣರಾಗಿದ್ದಾರೆ. ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ಮುಂಚೂಣಿಯಲ್ಲಿರುವ ಮತ್ತು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣ ಮಾತ್ರವಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದೇಶದ ಜನತೆ ಇರಿಸಿರುವ ದೃಢವಾದ ನಂಬಿಕೆ ಮತ್ತು ವಿಶ್ವಾಸದ ದ್ಯೋತಕವೇ ಸರಿ.

ದಶಕಗಳ ಹಿಂದೆ ಚುನಾವಣೆ ಎಂದರೆ ಗದ್ದಲ, ಘರ್ಷಣೆ, ದೊಂಬಿ, ಹಿಂಸಾಚಾರ, ಸಾವು-ನೋವು ಸಾಮಾನ್ಯ ಎಂಬಂತಿದ್ದ ಕಾಲಘಟ್ಟದಿಂದ ದೇಶವೀಗ ಸಾಕಷ್ಟು ಮುಂದೆ ಸಾಗಿ ಬಂದಿದೆ. ಇತ್ತೀಚಿನ ಚುನಾವಣೆಗಳಲ್ಲಿ ಈ ತೆರನಾದ ಘಟನಾವಳಿಗಳು ವಿರಳವಾಗಿದ್ದರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಂತೂ ಅಲ್ಲೊಂದು ಇಲ್ಲೊಂದು ಎಂಬಂತೆ ನಡೆದಿದೆ. 2019ರ ಲೋಕಸಭಾ ಚುನಾವಣೆಯ ವೇಳೆ ವಿವಿಧ ಕಾರಣಗಳಿಂದಾಗಿ ದೇಶದ ವಿವಿಧೆಡೆಯ 540 ಮತದಾನ ಕೇಂದ್ರಗಳಲ್ಲಿ ಮರು ಮತದಾನ ನಡೆದಿದ್ದರೆ, ಹಾಲಿ ಚುನಾವಣೆಯಲ್ಲಿ ಈ ಸಂಖ್ಯೆ 39ಕ್ಕೆ ಸೀಮಿತವಾಗಿತ್ತು. ಇದು ಈ ಬಾರಿಯ ಚುನಾವಣೆ ಎಷ್ಟು ವ್ಯವಸ್ಥಿತ ರೀತಿಯಲ್ಲಿ ಸುಲಲಿತವಾಗಿ ನಡೆದಿತ್ತು ಎಂಬುದಕ್ಕೆ ಒಂದು ನಿದರ್ಶನ.

ಇಡೀ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವಲ್ಲಿ ಚುನಾವಣ ಆಯೋಗ, ಸರಕಾರದ ವಿವಿಧ ಅಂಗಸಂಸ್ಥೆಗಳು, ಭದ್ರತಾ ಪಡೆಗಳ ಪಾತ್ರ ಗಮನಾರ್ಹ. ಇವೆಲ್ಲದಕ್ಕಿಂತ ಮುಖ್ಯವಾಗಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರು ಮತ್ತು ಸಾರ್ವಜನಿಕರು ಚುನಾವಣೆಯ ಮಹತ್ವವನ್ನು ಅರಿತು ಶಾಂತಿಯುತವಾಗಿ ಸಹಕರಿಸಿರುವುದರಿಂದಾಗಿಯೇ ಈ ಸಾಧನೆ, ದಾಖಲೆ ಸಾಧ್ಯವಾಗಿದೆ. 18ನೇ ಲೋಕಸಭೆ ರಚನೆಗಾಗಿ ನಡೆದ ಈ ಚುನಾವಣೆಯ ವೇಳೆ ಮತದಾರರಿಗೆ ಹಂಚಲೆಂದು ನಗದು, ಉಚಿತ ಕೊಡುಗೆಗಳು, ಡ್ರಗ್ಸ್‌, ಮದ್ಯ ಸಹಿತ ಒಟ್ಟು 10,000 ಕೋ.ರೂ.ಗಳಷ್ಟು ಮೌಲ್ಯದ ಚುನಾವಣ ಅಕ್ರಮಗಳನ್ನು ವಶಪಡಿಸಿಕೊಂಡಿರುವುದು ಒಂದು ನಕಾರಾತ್ಮಕ ದಾಖಲೆ. ಚುನಾವಣ ಅಕ್ರಮಗಳನ್ನು ತಡೆಯಲು ಚುನಾವಣ ಆಯೋಗ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರಿಂದಾಗಿ ವಶಪಡಿಸಿಕೊಳ್ಳಲಾದ ಅಕ್ರಮಗಳ ಮೌಲ್ಯ ಹೆಚ್ಚಿದೆ ಎಂದು ಹೇಳಿ ಸಮಾಧಾನಪಟ್ಟುಕೊಳ್ಳಬಹುದಾದರೂ ಇನ್ನೂ ದೇಶದ ಚುನಾವಣ ವ್ಯವಸ್ಥೆಯಲ್ಲಿ ಇಷ್ಟೊಂದು ಬೃಹತ್‌ ಪ್ರಮಾಣದಲ್ಲಿ ಮತದಾರರಿಗೆ ಆಮಿಷವೊಡ್ಡುವ ಪ್ರಯತ್ನಗಳು ನಡೆಯುತ್ತಿರುವುದು ಚಿಂತನಾರ್ಹ. ಈ ವಿಚಾರವಾಗಿ ದೇಶದ ಎಲ್ಲ ರಾಜಕೀಯ ಪಕ್ಷಗಳು, ನಾಯಕರು, ಚುನಾವಣ ಆಯೋಗ ಮಾತ್ರವಲ್ಲದೆ ದೇಶದ ಜನತೆ ಕೂಡ ಪ್ರಜ್ಞಾಪೂರ್ವಕವಾಗಿ ಚಿಂತನೆ ನಡೆಸಬೇಕು.

ಮತದಾನ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು, ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರು ತೋರಿದ ಸಹನೆ, ತಾಳ್ಮೆ, ಶಾಂತಚಿತ್ತತೆಯನ್ನು ಮಂಗಳವಾರ ಪ್ರಕಟಗೊಳ್ಳಲಿರುವ ಫ‌ಲಿತಾಂಶದ ಬಳಿಕವೂ ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯ. ಚುನಾವಣ ಫ‌ಲಿತಾಂಶ ಏನೇ ಇರಲಿ, ಜನತಾ ಜನಾರ್ದನನ ತೀರ್ಪನ್ನು ವಿಶಾಲ ಮನಸ್ಕರಾಗಿ, ಸಮಚಿತ್ತದಿಂದ ಸ್ವೀಕರಿಸಿ, ದೇಶದ ಅಭಿವೃದ್ಧಿ ಪಥದಲ್ಲಿ ತಾವೂ ಹೆಜ್ಜೆ ಹಾಕಬೇಕು. ನಾಯಕರ ಸಹಿತ ದೇಶದ ಜನತೆಯ ಇಂತಹ ಪ್ರಬುದ್ಧತೆ ದೇಶದ ಪ್ರಜಾಪ್ರಭುತ್ವವನ್ನು ಇನ್ನಷ್ಟು ಶಕ್ತಿಶಾಲಿಯನ್ನಾಗಿಸುವುದರ ಜತೆಯಲ್ಲಿ ವಿಶ್ವಮಾನ್ಯವಾಗಿಸಲಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.