ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ಕುಮಾರಸ್ವಾಮಿಯನ್ನೇ ಗಮನಿಸುತ್ತಿದ್ದ ಡಿಸಿಎಂ

Team Udayavani, Jun 3, 2024, 11:26 PM IST

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣ ಸಹಿತ ನಿತ್ಯ ಒಂದಿಲ್ಲೊಂದು ಕಾರಣಕ್ಕೆ ಸರಕಾರದ ವಿರುದ್ಧ ಕೆಂಡಕಾರುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹಾಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖಾಮುಖಿ ಆದ ಪ್ರಸಂಗ ನಡೆಯಿತು. ಎದುರಿಗೇ ನಿಂತಿದ್ದ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ ಎಚ್‌ಡಿಕೆ, ಡಿಸಿಎಂ ಶಿವಕುಮಾರ್‌ ಅವರತ್ತ ಕಣ್ಣೆತ್ತಿಯೂ ನೋಡಲಿಲ್ಲ.

ವಿಧಾನಸೌಧದ ಜೆಡಿಎಸ್‌ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಸಭೆ ನಡೆಸಿದ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಕುಮಾರಸ್ವಾಮಿ, ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಸ್ಪರ್ಧಿಸಲು ಜವರಾಯಿಗೌಡ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಅವರ ಜತೆಯಲ್ಲಿದ್ದರು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿ, ಜೆಡಿಎಸ್‌ ನಾಯಕರೆಲ್ಲರೂ ಚುನಾವಣಾಧಿಕಾರಿಯಿಂದ ಕೊಠಡಿಯಿಂದ ಹೊರಡಬೇಕು ಎನ್ನುವಷ್ಟರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ಸಿಎಂ, ಡಿಸಿಎಂ ಸಹಿತ ಎಲ್ಲರೂ ಆಗಮಿಸಿದರು.

ಚುನಾವಣಾಧಿಕಾರಿ ಕೊಠಡಿಯೊಳಗೆ ಜೆಡಿಎಸ್‌ ನಾಯಕರು ಇದ್ದುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಾಗಿಲ ಎದುರೇ ನಿಂತು ಕಾಯುತ್ತಿದ್ದರು. ಇದೇ ವೇಳೆಗೆ ಜೆಡಿಎಸ್‌ ನಾಯಕರು ಒಬ್ಬೊಬ್ಬರಾಗಿಯೇ ಹೊರಬರಲಾರಂಭಿಸಿದರು.

ಹಾಯ್‌ ಎಂದ ಸಿಎಂ
ಹೊರಬರುತ್ತಿದ್ದಂತೆ ಕೊಠಡಿ ಎದುರು ಸಿಎಂ, ಸಚಿವ ಎಚ್‌.ಕೆ. ಪಾಟೀಲ್‌ ಸಹಿತ ಪ್ರಮುಖರನ್ನು ಕಂಡು ಜೆಡಿಎಸ್‌ನ ಜೆ.ಕೆ.ಕೃಷ್ಣ ರೆಡ್ಡಿ ಚಕಿತರಾದರು. ಅವರ ಹಿಂದೆಯೇ ಆಗಮಿಸಿದ ಕುಮಾರಸ್ವಾಮಿಗೆ ಎಚ್‌.ಕೆ.ಪಾಟೀಲ್‌ ಕೈಮುಗಿದು ನಮಸ್ಕರಿಸುತ್ತಿದ್ದಂತೆ, ಕುಮಾರಸ್ವಾಮಿ ಕೂಡ ಹೃದಯ ಮುಟ್ಟಿಕೊಳ್ಳುತ್ತ ನಮಸ್ಕಾರ ತಿಳಿಸಿದರು. ಅಲ್ಲೇ ಇದ್ದ ಸಿಎಂಗೂ ಅದೇ ರೀತಿ ನಯವಾಗಿ ನಮಸ್ಕರಿಸಿದರು. ಸಿಎಂ ಕೂಡ ಹಾಯ್‌ ಎನ್ನುವಂತೆ ವಿಶ್‌ ಮಾಡಿ ಅಲ್ಲೇ ನಿಂತರು. ಪರಸ್ಪರ ಏನೂ ಮಾತುಕತೆ ನಡೆಸದೆ ಕುಮಾರಸ್ವಾಮಿ ಹೊರಟರು.

ಡಿಸಿಎಂ ಕಡೆ ನೋಡದೆ ಹೊರಟ ಎಚ್‌ಡಿಕೆ
ಸಿಎಂ ಹಿಂದೆ ಸಚಿವರು, ಡಿಸಿಎಂ ಶಿವಕುಮಾರ್‌, ಕಾಂಗ್ರೆಸ್‌ ಅಭ್ಯರ್ಥಿಗಳೂ ಇದ್ದರು. ಎದುರಿಗೆ ಸಿಕ್ಕ ಕೋನರೆಡ್ಡಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಬಲ್ಕಿಸ್‌ ಬಾನುಗೆ ವಿಶ್‌ ಮಾಡಿದ ಕುಮಾರಸ್ವಾಮಿ, ಅಲ್ಲೇ ಇದ್ದ ಡಿ.ಕೆ. ಶಿವಕುಮಾರ್‌ ಅವರತ್ತ ನೋಡಲೂ ಇಲ್ಲ, ಮಾತನಾಡಿಸಲೂ ಇಲ್ಲ. ಆದರೆ ಕುಮಾರಸ್ವಾಮಿ ಅವರ ವರ್ತನೆಯನ್ನು ಡಿಸಿಎಂ ಮಾತ್ರ ಗಮನಿಸುತ್ತಲೇ ಇದ್ದರು. ಸುತ್ತಲೂ ಇದ್ದ ಕಾಂಗ್ರೆಸ್‌ ಕೋಟೆ ದಾಟಿ ಎಚ್‌ಡಿಕೆ ಹೊರನಡೆದರು.

ಟಾಪ್ ನ್ಯೂಸ್

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.