![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-415x271.jpg)
ಯಾರಿಗೆ ಸಿಗಲಿದೆ ದಿಲ್ಲಿ ಸಿಂಹಾಸನ? ಮೋದಿಗೆ ಮೂರನೇ ಅವಧಿಯೋ? ಐಎನ್ಡಿಐಎಗೆ ಗಾದಿಯೋ?
ಮಹಾ ಚುನಾವಣೆ: 82 ದಿನಗಳ ಕಾತರಕ್ಕೆ ಇಂದು ಕೊನೆ ಇಂದು ಬೆಳಗ್ಗೆ 8 ಗಂಟೆಗೆ ಮತಎಣಿಕೆ ಪ್ರಕ್ರಿಯೆ ಆರಂಭ
Team Udayavani, Jun 4, 2024, 7:00 AM IST
![ಯಾರಿಗೆ ಸಿಗಲಿದೆ ದಿಲ್ಲಿ ಸಿಂಹಾಸನ? ಮೋದಿಗೆ ಮೂರನೇ ಅವಧಿಯೋ? ಐಎನ್ಡಿಐಎಗೆ ಗಾದಿಯೋ?](https://www.udayavani.com/wp-content/uploads/2024/06/modi-dd-620x413.jpg)
ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿ ಕೆ ಪ್ರಕ್ರಿಯೆಗಳು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಚುನಾವಣ ಆಯೋಗವು ಮತ ಎಣಿಕೆಗೆ ಬೇಕಾಗಿರುವ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.
543 ಲೋಕಸಭಾ ಕ್ಷೇತ್ರಗಳಿಗಾಗಿ ಒಟ್ಟು 8,360 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅವರ ಹಣೆಬರಹ ಮಂಗಳವಾರ ತಿಳಿಯಲಿದೆ. ಆಂಧ್ರ ಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆ, 25 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶವೂ ಮಂಗಳವಾರವೇ ಹೊರಬೀಳಲಿದೆ.
ಎ. 19ರಿಂದ ಜೂ. 1ರ ವರೆಗೆ ಒಟ್ಟು 7 ಹಂತದಲ್ಲಿ ಲೋಕಸಭೆಗೆ ಚುನಾವಣೆ ನಡೆದಿತ್ತು. ಪ್ರಸಕ್ತ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ 3ನೇ ಬಾರಿಗೆ ಅಧಿಕಾರಕ್ಕೇರಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ “ಹ್ಯಾಟ್ರಿಕ್’ ಸಾಧಿಸುವ ನಿರೀಕ್ಷೆಯಲ್ಲಿದ್ದಾರೆ. ಮತಗಟ್ಟೆ ಸಮೀಕ್ಷೆಗಳೂ ಬಿಜೆಪಿ 3ನೇ ಅವಧಿಗೆ ಸರಕಾರ ರಚಿಸುವ ಭವಿಷ್ಯವನ್ನು ನುಡಿದಿವೆ. ಮತ್ತೂಂದೆಡೆ ಕಾಂಗ್ರೆಸ್ ನೇತೃತ್ವದಲ್ಲಿ ಒಂದಾಗಿರುವ 23 ಪಕ್ಷಗಳ ಐಎನ್ಡಿಐಎ ಒಕ್ಕೂಟವು ಅಚ್ಚರಿಯ ಫಲಿತಾಂಶವನ್ನು ಎದುರು ನೋಡುತ್ತಿದೆ.
ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಬಳಿಕ ವಿದ್ಯುನ್ಮಾನ ಮತಯಂತ್ರಗಳಲ್ಲಿರುವ ಮತ ಗಳನ್ನು ಲೆಕ್ಕ ಹಾಕಲಾಗುತ್ತದೆ. ಬೆಳಗ್ಗೆ 10 ಗಂಟೆಯ ಸುಮಾರಿಗೆ ಚುನಾವಣೆ ಫಲಿತಾಂಶದ ಆರಂಭಿಕ ಚಿತ್ರಣ ದೊರೆತರೆ, ಮಧ್ಯಾಹ್ನ 12 ಗಂಟೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಬಹುದು. ಇವಿಎಂ ಮತ ಗಳೊಂದಿಗೆ ವಿವಿ ಪ್ಯಾಟ್ ತಾಳೆ ಹಾಕಬೇಕಾದ್ದ ರಿಂದ ಅಧಿಕೃತ ಚಿತ್ರಣವು ಸಂಜೆ 6 ಗಂಟೆ ವೇಳೆಗೆ ಹೊರಬೀಳುವ ನಿರೀಕ್ಷೆ ಇದೆ.
ತುರುಸಿನ ಸ್ಪರ್ಧೆ
3ನೇ ಅವಧಿಗೆ ಅಧಿಕಾರಕ್ಕೇರುವ ಭರವಸೆ ಯೊಂದಿಗೆ ಬಿಜೆಪಿ ನೇತೃತ್ವದ ಎನ್ಡಿಎ ಯು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸಿದೆ. ಮೋದಿ ಅವರು ಮುಸ್ಲಿಮರಿಗೆ ಮೀಸಲಾತಿ ಹುನ್ನಾರ, ಅಭಿವೃದ್ಧಿ ಭಾರತದಂಥ ವಿಷಯಗಳನ್ನು ಮುನ್ನೆಲೆಗೆ ತಂದರೆ, ಮೋದಿ ಆಡಳಿತವನ್ನು ಕೊನೆ ಗಾಣಿಸುವ ಪಣ ತೊಟ್ಟಿರುವ ಕಾಂಗ್ರೆಸ್ ನೇತೃತ್ವದ ಐಎನ್ಡಿಐಎ ಕೂಟವು ಸಂವಿ ಧಾನ ಬದಲಾವಣೆ ತಡೆ, ನಿರುದ್ಯೋಗ ಮತ್ತು ಬೆಲೆ ಏರಿಕೆಯಂಥ ವಿಷಯಗಳನ್ನು ಪ್ರಸ್ತಾ ವಿಸಿ, ಗೆಲ್ಲುವ ಭರವಸೆ ಹೊಂದಿದೆ.
ಟಾಪ್ ನ್ಯೂಸ್
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-415x271.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
![Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್](https://www.udayavani.com/wp-content/uploads/2024/07/raviraj-150x83.jpg)
Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್
![Davanagere; Protest by BJP Zilla Raitamorcha condemning the price hike](https://www.udayavani.com/wp-content/uploads/2024/07/dava-150x83.jpg)
Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್](https://www.udayavani.com/wp-content/uploads/2024/07/9-150x90.jpg)
ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.