![9-sirsi](https://www.udayavani.com/wp-content/uploads/2024/06/9-sirsi-415x249.jpg)
Lok Sabha Result:ಉತ್ತರಪ್ರದೇಶದಲ್ಲಿ ತಲೆಕೆಳಗಾದ ಲೆಕ್ಕಾಚಾರ-INDIA ಮೈತ್ರಿಗೆ ಮುನ್ನಡೆ!
ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಮುನ್ನಡೆ
Team Udayavani, Jun 4, 2024, 11:08 AM IST
![Lok Sabha Result:ಉತ್ತರಪ್ರದೇಶದಲ್ಲಿ ತಲೆಕೆಳಗಾದ ಲೆಕ್ಕಾಚಾರ-INDIA ಮೈತ್ರಿಗೆ ಮುನ್ನಡೆ!](https://www.udayavani.com/wp-content/uploads/2024/06/BJP-6-620x347.jpg)
ನವದೆಹಲಿ/ಲಕ್ನೋ: ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ಎಲ್ಲಾ ಪಕ್ಷಗಳಿಗೂ ನಿರ್ಣಾಯಕವಾಗಿದ್ದು, ಸದ್ಯದ ಅಂಕಿಅಂಶದ ಪ್ರಕಾರ 80 ಲೋಕಸಭಾ ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಎನ್ ಡಿಎ ತೀವ್ರ ಹಿನ್ನಡೆ ಅನುಭವಿಸಿರುವುದು ಬಹುತೇಕ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಇದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಇದನ್ನೂ ಓದಿ:Mangaluru; ಬಿಜೆಪಿ vs ಕಾಂಗ್ರೆಸ್ ಕಾರ್ಯಕರ್ತರ ಪರಸ್ಪರ ಘೋಷಣೆ: ಪೊಲೀಸರ ಎಚ್ಚರಿಕೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಂದಾಜು 70ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿತ್ತು. ಆದರೆ ಈವರೆಗಿನ ಫಲಿತಾಂಶದಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ.
ಉತ್ತರಪ್ರದೇಶದಲ್ಲಿ ಈ ಬಾರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ 62 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಭಾರತೀಯ ಜನತಾ ಪಕ್ಷ ಅಪ್ನಾ ದಳ, ಜಯಂತ್ ಚೌಧರಿ ನೇತೃತ್ವದ ಆರ್ ಎಲ್ ಡಿ ಮತ್ತು ಸುಹೇಲ್ ದೇವ್ ಭಾರತೀಯ ಸಮಾಜ್ ಪಾರ್ಟಿ ಮೈತ್ರಿಯೊಂದಿಗೆ ಸ್ಪರ್ಧಿಸಿತ್ತು.
ಈಗಿನ ಟ್ರೆಂಡ್ ಪ್ರಕಾರ ಉತ್ತರಪ್ರದೇಶದಲ್ಲಿ ಎನ್ ಡಿಎ 36 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮೈತ್ರಿಕೂಟ 45 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.
ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಅಜಯ್ ರಾಯ್ ಹಿನ್ನಡೆ ಅನುಭವಿಸಿದ್ದು, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮುನ್ನಡೆ ಸಾಧಿಸಿದ್ದಾರೆ.
ಟಾಪ್ ನ್ಯೂಸ್
![9-sirsi](https://www.udayavani.com/wp-content/uploads/2024/06/9-sirsi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
![T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು](https://www.udayavani.com/wp-content/uploads/2024/06/4-21-150x90.jpg)
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
![ajagrata producer gave fortuner car gift to the director](https://www.udayavani.com/wp-content/uploads/2024/06/ajagrat-150x83.jpg)
Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.