Election Result: ನಿತೀಶ್, ನಾಯ್ಡುಗೆ ಇಂಡಿಯಾ, ಎನ್ಡಿಎ ಮೈತ್ರಿಕೂಟ ಗಾಳ!
Team Udayavani, Jun 4, 2024, 9:01 PM IST
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಏಕೈಕ ಪಕ್ಷ ಬಹುಮತ ಗಳಿಸದ ಹಿನ್ನೆಲೆಯಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಉಭಯ ಮೈತ್ರಿಕೂಟಗಳು ಗಾಳ ಹಾಕಿವೆ. ಈ ಇಬ್ಬರು ನಾಯಕರು ಈ ಬಾರಿ ಅಚ್ಚರಿಯೆಂಬಂತೆ, “ಕಿಂಗ್ಮೇಕರ್’ಗಳಾಗಿ ಹೊರಹೊಮ್ಮಿದ್ದಾರೆ.
ನಿತೀಶ್ ಮತ್ತು ನಾಯ್ಡು ಇತ್ತೀಚಿಗಷ್ಟೇ ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಉಭಯ ಮೈತ್ರಿಕೂಟಗಳ ನಾಯಕರು ಈ ಇಬ್ಬರು ನಾಯಕರಿಗೆ ಫೋನ್ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹೇಗಾದರೂ ಮಾಡಿ ನಿತೀಶ್ ಹಾಗೂ ನಾಯ್ಡು ಅವರನ್ನು ಸೆಳೆಯಲು ಇಂಡಿಯಾ ಒಕ್ಕೂಟದ ನಾಯಕರು ಯತ್ನಿಸಿದರೆ, ತಮ್ಮಲ್ಲೇ ಉಳಿಸಿಕೊಳ್ಳಲು ಎನ್ಡಿಎ ನಾಯಕರು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ನಿತೀಶ್ ಕುಮಾರ್ ಫೋನ್:
ಇಂಡಿಯಾ ಮೈತ್ರಿಕೂಟವನ್ನು 272ರ ಗಡಿ ದಾಟಿಸುವ ಉದ್ದೇಶದೊಂದಿಗೆ ಎನ್ಸಿಪಿ ನಾಯಕ ಶರದ್ ಪವಾರ್ ಇಬ್ಬರು ನಾಯಕರಿಗೂ ಕರೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ವರದಿಯನ್ನು ತಳ್ಳಿ ಹಾಕಿರುವ ನಿತೀಶ್ ಯಾರಿಗೂ ಕರೆ ಮಾಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
ಯೂಟ್ಯೂಬ್ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ
West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್
Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!
Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.