“ಸಮಾಧಾನಕರ’ ಸಾಧನೆ: ಬಿಜೆಪಿಗೆ ಎಚ್ಚರಿಕೆ ಗಂಟೆ

ಗ್ಯಾರಂಟಿ ಅಬ್ಬರದ ನಡುವೆಯೂ ಬಿಜೆಪಿ ಸಾಧನೆ

Team Udayavani, Jun 5, 2024, 7:30 AM IST

ಸಾಧನೆ ಕಳಪೆಯಂತೂ ಅಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಗೆದ್ದು ಸಾರ್ವಕಾಲಿಕ ಜಯ ದಾಖಲಿಸಿದ್ದ ರಾಜ್ಯ ಬಿಜೆಪಿ ಎಂಟು ಸ್ಥಾನಗಳನ್ನು ಕಳೆದುಕೊಂಡಿದ್ದು, ಪಕ್ಷದ ರಾಜ್ಯ ಘಟಕದಲ್ಲಿ ನಾಯಕತ್ವಕ್ಕೆ ಕಾಯಕಲ್ಪದ ಅಗತ್ಯತೆ ಹೆಚ್ಚಿಸಿದೆ. ಆದರೆ ಗ್ಯಾರಂಟಿಯ ಅಬ್ಬರದ ಮಧ್ಯೆಯೂ ಪಕ್ಷದ ಸಾಧನೆ ತೀರಾ ಕಳಪೆಯಂತೂ ಅಲ್ಲ.

ಜೆಡಿಎಸ್‌ ಜತೆಗಿನ ಮೈತ್ರಿಯ ಬಳಿಕ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚು ಕಳೆಗಟ್ಟಿದೆ. ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರದ ಮೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ “ಮೈತ್ರಿ’ ಗೆಲುವಿನ ಹಿಂದೆ ಜೆಡಿಎಸ್‌ನ ಕೊಡುಗೆ ಗಣನೀಯವಾಗಿದೆ.

ಈ ಭಾಗದಲ್ಲಿ ಒಕ್ಕಲಿಗ ಮತಗಳು ಕೇಂದ್ರೀಕೃತಗೊಂಡಿದ್ದೇ ಗೆಲುವಿನ ಮಹತ್ವದ ಕಾರಣ. ಆದರೆ ಬಿಜೆಪಿ ನಿರೀಕ್ಷಿಸಿದ್ದ ಲಿಂಗಾಯತ ಮತ ಕ್ರೋಢೀಕರಣ ಕೈ ಕೊಟ್ಟಿರುವುದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದಕ್ಕೆ ಐದು ಕ್ಷೇತ್ರದ ಜತೆಗೆ ಚಿಕ್ಕೋಡಿ, ದಾವಣಗೆರೆಯಲ್ಲಿ ಆದ ಸೋಲು ಬಿಜೆಪಿಯ ಲಿಂಗಾಯತ ನಾಯಕತ್ವ ಸಡಿಲಗೊಳ್ಳುತ್ತಿರುವುದರ ಧ್ಯೋತಕ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹೀಗಾಗಿ ಈ ಫ‌ಲಿತಾಂಶ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಗಂಟೆ ಎಂದೇ ಹೇಳಬಹುದು. ಒಂದು ರೀತಿಯಲ್ಲಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ರಾಜಸ್ಥಾನ ಹಾಗೂ ಮಹಾರಾಷ್ಟ್ರದ ಬಳಿಕ ಕರ್ನಾಟಕದಲ್ಲಿ ಎಂಟು ಸ್ಥಾನಗಳನ್ನು ಕಳೆದುಕೊಂಡಿರುವುದು ಬಿಜೆಪಿಗೆ ದೊಡ್ಡ ಹೊಡೆತವಾಗಿದ್ದು, ಉದ್ದೇಶಿತ ಗುರಿಮುಟ್ಟುವಲ್ಲಿ ಎಡವಿದ ವರಿಷ್ಠರು ರಾಜ್ಯ ಬಿಜೆಪಿಯ ಬಗ್ಗೆ ಭವಿಷ್ಯದಲ್ಲಿ ಇದೇ ವಿಶ್ವಾಸ ಮುಂದುವರಿಸುವುದು ಕಷ್ಟ.

ಸಂಘಟನೆ ಅನಿವಾರ್ಯ :
2019ರಲ್ಲಿ ಲೋಕಸಭಾ ಚುನಾವಣೆ ನಡೆಯುವಾಗ ಬಿಜೆಪಿ ಸಂಘಟನಾತ್ಮಕವಾಗಿ ಹೆಚ್ಚು ಬಲಶಾಲಿಯಾಗಿತ್ತು. ವಿಧಾನಸಭೆಯಲ್ಲಿ ಪಕ್ಷವನ್ನು 103 ಸ್ಥಾನದವರೆಗೆ ತಲುಪಿಸಿದ್ದ ಬಿ.ಎಸ್‌.ಯಡಿಯೂರಪ್ಪ ಸರ್ಕಾರ ರಚಿಸದೇ ಇದ್ದರೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದು, ರಾಜ್ಯಪೂರ್ತಿ ಸುತ್ತಿ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ಅವಕಾಶ ಸ್ವಲ್ಪದರಲ್ಲೇ ತಪ್ಪಿ ಹೋಗಿದ್ದರಿಂದ ಕಾರ್ಯಕರ್ತರ ಪಡೆ ಹಠ ಕಟ್ಟಿ ಲೋಕಸಭಾ ಚುನಾವಣೆ ನಡೆಸಿತ್ತು. ಆದರೆ ಈ ಬಾರಿ ಪಕ್ಷ ಸಂಘಟನಾತ್ಕವಾಗಿ ಸೊರಗಿ ಹೋಗಿತ್ತು. ವಿಧಾನಸಭಾ ಚುನಾವಣೆ ಪೂರ್ವದಲ್ಲೇ ಆರಂಭವಾದ ಒಳಜಗಳ ಇದುವರೆಗೂ ಮುಂದುವರಿದಿತ್ತು.

ಹೀಗಾಗಿ ಪಕ್ಷದ ಸಂಘಟನಾ ವ್ಯವಸ್ಥೆಯನ್ನು ಮರಳಿ ಹಳಿಗೆ ತರುವ ಸವಾಲು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮೇಲಿದೆ. ಮುನಿಸಿಕೊಂಡ ಹಿರಿಯರ ವಿಶ್ವಾಸ ಗಳಿಸುವುದು ಅಷ್ಟು ಸುಲಭದ ಮಾತಲ್ಲ. ಸಂಖ್ಯಾಬಲದ ದೃಷ್ಟಿಯಿಂದ ಪ್ರಬಲರಾಗಿರುವ ಪಂಚಮಸಾಲಿ ಸಮುದಾಯದ ಪ್ರಶ್ನಾತೀತ ನಾಯಕರಾಗಿ ಬೆಳೆದಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಂಥವರನ್ನು ಪಕ್ಕಕ್ಕಿಟ್ಟು ಭವಿಷ್ಯದಲ್ಲಿ ಪಕ್ಷ ಕಟ್ಟುವುದು ಕಷ್ಟ.

ಹೀಗಾಗಿ ಸಂಘಟನೆ ಹಾಗೂ ಹಿರಿಯರ ವಿಶ್ವಾಸ ಗಳಿಸುವ ಅನಿವಾರ್ಯತೆ ರಾಜ್ಯ ಘಟಕದ ಮೇಲೆ ಬಿದ್ದಿದೆ. ಲೋಕಸಭಾ ಫ‌ಲಿತಾಂಶದ ಬಳಿಕ ರಾಜ್ಯ ಸರ್ಕಾರದ ಕೌಂಟ್‌ಡೌನ್‌ ಪ್ರಾರಂಭ ಎಂಬ ಹೇಳಿಕೆಗಳನ್ನು ಪಠಿಸುವ ದುಸ್ಸಾಹಸಕ್ಕೆ ಕೈ ಹಾಕುವ ಬದಲು ಪಕ್ಷದ ಕೇಡರ್‌ನ್ನು ಮತ್ತೆ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಈಗ ಬಿಜೆಪಿಯ ಮುಂದೆ ಇದೆ.

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.