ದಡ ಸೇರಿದ ಸಿದ್ದರಾಮಯ್ಯ ಬಣದ ಅಭ್ಯರ್ಥಿಗಳು: ಖರ್ಗೆ ವರ್ಚಸ್ಸು ಹೆಚ್ಚಳ, ಮತ್ತಷ್ಟು ಹಿಡಿತ


Team Udayavani, Jun 5, 2024, 5:16 AM IST

Candidates of Siddaramaiah faction won in election

ಬೆಂಗಳೂರು:  ಲೋಕಸಭಾ ಚುನಾವಣೆ ಫ‌ಲಿತಾಂಶವು ರಾಜ್ಯದ ನಾಯಕರ ಮಟ್ಟಿಗೆ ಸಿಹಿ-ಕಹಿಯ ಮಿಶ್ರಣ. ಒಂದೇ ಪಕ್ಷದಲ್ಲಿ ಕೆಲವರಿಗೆ ಮೇಲುಗೈ ಆಗಿದ್ದರೆ, ಕೆಲವರಿಗೆ ಹಿನ್ನಡೆ ಉಂಟಾಗಿದೆ.

ಸಿದ್ದರಾಮಯ್ಯ: ತವರು ಕ್ಷೇತ್ರದಲ್ಲಿ ಸೋಲನುಭವಿಸಿದರೂ ಹಲವು ಕಾರಣಗಳಿಂದ ಸಿಎಂ ಈ ಫ‌ಲಿತಾಂಶದಿಂದ ತಕ್ಕಮಟ್ಟಿಗೆ ತೃಪ್ತರಾಗಿದ್ದಾರೆ. ಯಾಕೆಂದರೆ, ತಮ್ಮ ಬಣದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಅಭ್ಯರ್ಥಿಗಳನ್ನು ಗೆಲುವಿನ ದಡ ತಲುಪಿಸಿದ್ದಾರೆ. ಫ‌ಲಿತಾಂಶ ಹೊರ ಬೀಳುವ 2 ದಿನಗಳ ಹಿಂದಷ್ಟೇ ಪುತ್ರನಿಗೆ ಮೇಲ್ಮನೆ ಟಿಕೆಟ್‌ ಕೊಡಿಸಿದ್ದಾರೆ.

ನಿರೀಕ್ಷಿತ ಫ‌ಲಿತಾಂಶ ಬಾರದಿದ್ದರೆ, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದು ಕಷ್ಟ. ಪಟ್ಟದಲ್ಲಿ ಮುಂದು ವರಿಯಲು ಹೆಚ್ಚು ಸೀಟುಗಳನ್ನು ಗೆಲ್ಲಿಸಿ ಕೊಡಬೇಕು ಅಂತ ಶಾಸಕರು ವಿವಿಧ ಕಡೆ ಹೇಳಿದ್ದೂ ಉಂಟು. ಈಗ ಕುರ್ಚಿ ಗಟ್ಟಿಯಾಗಿದ್ದು, ಈಗಾಗಲೇ ಆದ ಮಾತುಕತೆ ಪ್ರಕಾರ 2.5 ವರ್ಷ ಅಧಿಕಾ ರಾವಧಿಗೆ ಅಡೆತಡೆ ಇಲ್ಲದಂತಾಗಿದೆ.

ಡಿ.ಕೆ. ಶಿವಕುಮಾರ್‌: ಪಕ್ಷದಮಟ್ಟಿಗೆ ಫ‌ಲಿತಾಂಶ ಸಮಾಧಾನಕರವಾಗಿದ್ದರೂ ವೈಯಕ್ತಿಕ ಪ್ರದರ್ಶನ ವಿಚಾರದಲ್ಲಿ ಉಪಮುಖ್ಯಮಂತ್ರಿಗೆ ತುಸು ಹಿನ್ನಡೆಯಾಗಿದೆ ಎಂದೇ ಹೇಳಬೇಕಾಗುತ್ತದೆ. ಸಹೋದರ ಡಿ.ಕೆ. ಸುರೇಶ್‌, ಆಪ್ತರಾಗಿದ್ದ ವೆಂಕಟರಮಣೇಗೌಡ (ಸ್ಟಾರ್‌ಚಂದ್ರು) ಸೇರಿ ಬಣದಲ್ಲಿ ಗುರುತಿಸಿಕೊಂಡವರನ್ನೇ ಗೆಲ್ಲಿಸಿಕೊಂಡು ಬರಲಾಗಲಿಲ್ಲ. ಹಾಗಾಗಿ, ಒಂಬತ್ತು ಸ್ಥಾನಗಳನ್ನು ಗೆದ್ದಿದ್ದರೂ ತಮ್ಮ ಯಶಸ್ಸಿನ ಫ‌ಲ ಎಂದು ಸಂಪೂರ್ಣವಾಗಿ “ಕ್ಲೈಮ್‌’ ಮಾಡಿಕೊಳ್ಳಲು ಆಗುವುದಿಲ್ಲ.  8 ಜನ ಒಕ್ಕಲಿಗರಿಗೆ ಟಿಕೆಟ್‌ ಕೊಡಿಸಿದ್ದಾಗಿ ಸ್ವತಃ ಡಿಸಿಎಂ ಹೇಳಿಕೊಂಡಿದ್ದರು. ಆದರೆ, ಅದರಲ್ಲಿ ಒಬ್ಬರು ಮಾತ್ರ ಗೆದ್ದಿದ್ದಾರೆ. ಇದರ ನಡುವೆ ಅಧಿಕಾರಕ್ಕೆ ಬರುತ್ತಿದ್ದಂತೆ ಒಕ್ಕಲಿಗ ಸಮುದಾಯದ ನಾಯಕನ ನ್ನಾಗಿ ಬಿಂಬಿಸಿಕೊಳ್ಳಲು ಯತ್ನಿಸಿದ್ದರು. ಅದರಲ್ಲಿ ಭಾಗಶಃ ಯಶಸ್ವಿಯೂ ಆಗಿ ದ್ದರು ಎನ್ನಲಾಗಿತ್ತು. ಆದರೆ, ಫ‌ಲಿತಾಂಶ ಆ ಲೆಕ್ಕಾಚಾರವನ್ನು ತಿರುವು ಮುರು ವುಗೊಳಿಸಿತು. ಇದಕ್ಕೆ ಪೂರಕವಾಗಿ ಸ್ವತಃ ಡಿ.ಕೆ. ಶಿವಕುಮಾರ್‌, “ಈ ಫ‌ಲಿತಾಂಶದ ಮೂಲಕ ಜನ ಸಂದೇಶ ನೀಡಿದ್ದಾರೆ. ಸರಿಪಡಿಸಿಕೊಳ್ಳುತ್ತೇನೆ’ ಎಂದಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಬಿಟ್ಟುಕೊಡಲು ಒತ್ತಡ  ಹೆಚ್ಚಲಿದೆ.

ಮಲ್ಲಿಕಾರ್ಜುನ ಖರ್ಗೆ:  ಈ ಹಿಂದಿನ ಚುನಾವಣೆಯಲ್ಲಿ ತಮ್ಮ ಸೋಲು ಸೇರಿ ಕಲ್ಯಾಣ ಕರ್ನಾಟಕದಲ್ಲೇ ತೀವ್ರ ಹಿನ್ನಡೆ ಅನುಭವಿಸಿದ್ದ ಎಐಸಿಸಿ ಅಧ್ಯಕ್ಷರು, ಪ್ರಸಕ್ತ ಚುನಾವಣೆಯಲ್ಲಿ ತಮ್ಮ ಬದಲಿಗೆ ಅಳಿಯ ರಾಧಾಕೃಷ್ಣ ದೊಡ್ಡ ಮನಿ ಜತೆಗೆ ಕಲ್ಯಾಣ ಕರ್ನಾಟಕದಲ್ಲಿ 5 ಕಡೆ (ಕಲ ಬುರಗಿ, ರಾಯಚೂರು, ಕೊಪ್ಪಳ, ಬೀದ ರ್‌, ಬಳ್ಳಾರಿ) ಗೆದ್ದಿದ್ದಾರೆ. ಒಟ್ಟಾರೆ 9ರ‌ಲ್ಲಿ ಅರ್ಧಕ್ಕಿಂತ ಹೆಚ್ಚು ಕಲ್ಯಾಣ ಕರ್ನಾಟಕ ದಿಂದಲೇ ಬಂದಿವೆ. ಇದರೊಂದಿಗೆ ಅವರ ಹಿಡಿತ ಮತ್ತು ವರ್ಚಸ್ಸು ಹೆಚ್ಚಿದೆ.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.