ಫಲಿತಾಂಶದಿಂದ ರಾಜ್ಯ ಸರಕಾರ ಸೇಫ್? ಕಾಂಗ್ರೆಸ್ ಸರಕಾರ ಪತನದ ಭೀತಿ ನಿವಾರಣೆ
ಮಹಾರಾಷ್ಟ್ರ ಮಾದರಿ ಬಿಜೆಪಿ ಪ್ರಯೋಗ ಅನುಮಾನ
Team Udayavani, Jun 5, 2024, 12:37 AM IST
ಬೆಂಗಳೂರು: ಲೋಕಸಭಾ ಚುನಾ ವಣೆಯ ಫಲಿತಾಂಶ ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಚಾಚಿದ್ದ ಪತನ ಭೀತಿಯನ್ನು ನಿವಾಳಿಸಿ ಹಾಕಿದ್ದು, ಸದ್ಯಕ್ಕೆ ಸೇಫ್ ಝೋನ್ಗೆ ತಂದು ನಿಲ್ಲಿಸಿದೆ. ಆದರೆ ಗ್ಯಾರಂಟಿ ಯಿಂದಲೇ ಎಲ್ಲವನ್ನೂ ಗೆಲ್ಲಬಹು ದೆಂಬ ಭ್ರಮೆಗೆ ಮತದಾರ ಬಲವಾದ ಪೆಟ್ಟು ನೀಡಿದ್ದು ಸರಕಾರ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗಲಿದೆ.
ಒಂದೊಮ್ಮೆ ಬಿಜೆಪಿ ನಿರೀಕ್ಷಿಸಿದಷ್ಟು ಸ್ಥಾನಗಳು ಲೋಕಸಭಾ ಚುನಾವಣೆಯಲ್ಲಿ ದಕ್ಕಿದ್ದರೆ ರಾಜ್ಯ ಸರಕಾರವನ್ನು ಕೆಡಗುವ ಅಥವಾ ಅತಂತ್ರಗೊಳಿಸುವ ಅಥವಾ ಬೇರೆ ಕಾರಣಗಳಿಗಾಗಿ ಕಾಡುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಎನ್ಡಿಎ ಬಲ 300 ತಲುಪದೇ ಇರುವುದರಿಂದ ಯಾವುದೇ ರಾಜ್ಯ ಸರಕಾರವನ್ನು ಪತನಗೊಳಿ ಸುವ ಸಾಹಸಕ್ಕೆ ಬಿಜೆಪಿ ಕೈ ಹಾಕುವ ಸಾಧ್ಯತೆ ಕ್ಷೀಣವಾಗಿದೆ. ಮಹಾರಾಷ್ಟ್ರದ ಪ್ರಯೋಗವನ್ನು ಕರ್ನಾಟಕದಲ್ಲಿ ನಡೆಸುವುದಕ್ಕೆ ಸಂಘ-ಪರಿವಾರದ ಹಿರಿಯರು ಹಾಗೂ ಬಿಜೆಪಿ ವರಿಷ್ಠರು ಇನ್ನು ಮುಂದೆ ಒಪ್ಪಿಗೆ ನೀಡಲಿಕ್ಕಿಲ್ಲ.
ಪಕ್ಷಕ್ಕೆ ಎಚ್ಚರಿಕೆ ಗಂಟೆ
ಹೀಗಾಗಿ ತನ್ನದೇ ಆದ ಸ್ವಯಂಕೃತಾ ಪರಾಧ ಗಳು ಕಾಂಗ್ರೆಸ್ ಸರಕಾರಕ್ಕೆ ಮುಳು ವಾಗಬಹುದೇ ವಿನಾ ಬಿಜೆಪಿಯಿಂದ ಸದ್ಯಕ್ಕಂತೂ ಅಪಾಯ ನಿರೀಕ್ಷೆ ಮಾಡುವಂತಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಮಾಡಿರುವ ಸಾಧನೆ ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷಕ್ಕೆ ಎಚ್ಚರಿಕೆ ಗಂಟೆ. ಒಕ್ಕಲಿಗ ಮತಗಳು ಕಾಂಗ್ರೆಸ್ ತೆಕ್ಕೆಯಿಂದ ಅಲ್ಪಾವಧಿಯಲ್ಲಿ ಜಾರಿದೆ ಎಂಬುದಕ್ಕೆ ಇದು ದೃಷ್ಟಾಂತವಾ ಗಿದ್ದು, ಹೊಸ ಸಮೀಕರಣ ಸಾಧ್ಯತೆಯ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಬೇಕಾಗಲಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 1 ಸ್ಥಾನವನ್ನು ಮಾತ್ರ ಗಳಿಸಿತ್ತು. ಆದರೆ ಆಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿತ್ತು. ಆದರೆ 2014ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದ ಸಂದರ್ಭದಲ್ಲಿ ಕಾಂಗ್ರೆಸ್ 9 ಸ್ಥಾನ ಗಳಿಸಿತ್ತು. ಇಡೀ ದೇಶದಲ್ಲಿ ಕಾಂಗ್ರೆಸ್ಗೆ ಲಭಿಸಿದ ದೊಡ್ಡ ವಿಜಯ ಇದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ
MUST WATCH
ಹೊಸ ಸೇರ್ಪಡೆ
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.