3ನೇ ಸ್ಥಾನ ಜಸ್ಟ್ ಮಿಸ್,4ನೇ ಸ್ಥಾನದಲ್ಲಿ ನೋಟಾ ವಿಜಯಪುರ ಮೀ. ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು
Team Udayavani, Jun 5, 2024, 11:02 AM IST
ವಿಜಯಪುರ : ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಪ್ರಸಕ್ತ ಚುನಾವಣೆಯಲ್ಲಿ 8 ಅಭ್ಯರ್ಥಿಗಳು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲು ಅಂತಿಮ ಕಣದಲ್ಲಿದ್ದರು. ಆದರೆ ಮತದಾರ ಪ್ರಭು ನೀಡಿರುವ ತೀರ್ಪಿನಲ್ಲಿ ನೋಟಾ ಮತದಾನವೇ 4ನೇ ಸ್ಥಾನದಲ್ಲಿ ಮಿಂಚಿದೆ.
ವಿಜೇತ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ 6,72,781 ಮತ ಪಡೆದು ಮೊದಲ ಸ್ಥಾನದೊಂದಿಗೆ ವಿಜೇತರಾದರೆ, ಕಾಂಗ್ರೆಸ್ ಸ್ಪರ್ಧಿ ರಾಜು ಆಲಗೂರ 5,95,552 ಮತಗಳೊಂದಿಗೆ ರನ್ನರ್ ಸ್ಥಾನದಲ್ಲಿ ತೃಪ್ತಿ ಪಡದಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಗಣೇಶ ರಾಠೋಡ 7,691 ಮತಗಳೊಂದಿಗೆ ತೃತೀಯ ಸ್ಥಾನ ಸಂಪಾದಿಸಿದ್ದಾರೆ. ಇವರ ನಂತರ 4ನೇ ಸ್ಥಾನ ನೋಟಾ ಬಟನ್ಗೆ ದಕ್ಕಿದೆ.
ಒಟ್ಟು ಚಲಾವಣೆಯಾದ ಮತಗಳಲ್ಲಿ 7,502 ಮತಗಳು ನೋಟಾ ಬಟನ್ ಒತ್ತಿದ್ದಾರೆ. ಅಂಚೆ ಮೂಲಕ ಚಲಾವಣೆಯಾದ ಸೇವಾ ಮತದಾರರಲ್ಲಿ 20 ಮತಗಳು ನೋಟಾ ಎಂದು ನಮೂದಿಸಲಾಗಿದೆ.
ಈ ಮೂಲಕ ಸ್ಪರ್ಧಿಸಿರುವ ಎಲ್ಲ 8 ಅಭ್ಯರ್ಥಿಗಳನ್ನೂ ತಿರಸ್ಕರಿಸಿರುವ ಮತದಾರರ ಸಂಖ್ಯೆ 4ನೇ ಸ್ಥಾನದಲ್ಲಿರುವುದು ರಾಜಕೀಯ ಪಕ್ಷಗಳಿಗೆ, ಚುನಾವಣಾ ಸ್ಪರ್ಧಿಗಳಿಗೆ ಎಚ್ಚರಿಕೆ ಗಂಟೆಯಾಗಿದೆ. ಏಕೆಂದರೆ ಕೇವಲ ಇನ್ನು 121 ಮತದಾರರು ನೋಟಾ ಬಟನ್ ಒತ್ತಿದ್ದರೆ ನನ್ ಆಫ್ ದ ಅಬೌ 3ನೇ ಸ್ಥಾನದಲ್ಲಿ ಕುಳಿತಿರುತ್ತಿತ್ತು ಎಂಬುದು ಚುನಾವಣೆ ಗುಂಗಿನ ರಾಜಕೀಯ ಮಂದಿ ಗಂಭೀರವಾಗಿ ಚಿಂತಿಸಬೇಕಿರುವ ವಿಷಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.