ಎಲ್ಲವೂ ಬದಲಾಗಲಿದೆ.. ಟ್ರೇಲರ್ ರಿಲೀಸ್ ಡೇಟ್ ರಿವೀಲ್ ಮಾಡಿದ ʼಕಲ್ಕಿ 2898 ಎಡಿʼ
Team Udayavani, Jun 5, 2024, 12:21 PM IST
ಹೈದರಾಬಾದ್: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಬಹುನಿರೀಕ್ಷಿತ ಸೈನ್ಸ್ – ಫೀಕ್ಷನ್ ʼಕಲ್ಕಿ 2898 ಎ.ಡಿʼ ಚಿತ್ರದ ಬಗ್ಗೆ ಬಿಗ್ ಅಪ್ಡೇಟ್ ವೊಂದು ಹೊರಬಿದ್ದಿದೆ.
ಈಗಾಗಲೇ ʼ ಕಲ್ಕಿ 2898 ಎಡಿʼ ಚಿತ್ರದ ಪುಟ್ಟದೊಂದು ಝಲಕ್ ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದು, ಚಿತ್ರದ ದುಬಾರಿ ವಿಎಫ್ ಎಕ್ಸ್ ಹಾಗೂ ದೃಶ್ಯಗಳು ಗಮನ ಸೆಳದಿದೆ.
ನಿರ್ದೇಶಕ ನಾಗ್ ಅಶ್ವಿನ್ ಸಿನಿಮಾದ ಮೇಲೆ ದೊಡ್ಡಮಟ್ಟದ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ಇದೊಂದು ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾವಾಗಲಿದ್ದು,‘ಮಹಾಭಾರತದಿಂದ ಆರಂಭ ಆಗುವ ಸಿನಿಮಾದ ಕಥೆ 2898 ಎಡಿಯಲ್ಲಿ ಕೊನೆಗೊಳ್ಳಲಿದೆ. ಸುಮಾರು ಆರು ಸಾವಿರ ವರ್ಷಗಳ ಕಥೆ ಸಿನಿಮಾದಲ್ಲಿದೆ. ನಾವು ಜಗತ್ತುಗಳನ್ನು ಸೃಷ್ಟಿಸಲು ಪ್ರಯತ್ನಿಸಿದ್ದೇವೆ” ಎಂದು ಈ ಹಿಂದೆ ನಾಗ್ ಅಶ್ವಿನ್ ಕಾರ್ಯಕ್ರಮವೊಂದರಲ್ಲಿ ಸಿನಿಮಾದ ಬಗ್ಗೆ ಮಾತನಾಡುತ್ತಾ ಹೇಳಿದ್ದರು.
ಸಿನಿಮಾದ ಪ್ರಚಾರವನ್ನು ವಿಭಿನ್ನವಾಗಿ ಮಾಡಿರುವ ಚಿತ್ರತಂಡ ಇದೀಗ ಎಲ್ಲರೂ ಕಾತರದಿಂದ ಕಾಯುತ್ತಿದ್ದ ಟ್ರೇಲರ್ ರಿಲೀಸ್ ಡೇಟ್ ನ್ನು ಅನೌನ್ಸ್ ಮಾಡಿದೆ.
ಪ್ರಭಾಸ್(ಕಲ್ಕಿ) ಎತ್ತರದಲ್ಲಿ ನಿಂತಿರುವ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ, ಟ್ರೇಲರ್ ಇದೇ ಜೂನ್ 10 ರಂದು ಬಿಡುಗಡೆ ಆಗಲಿದೆ. ಪೋಸ್ಟರ್ ಮೇಲೆ “ಎಲ್ಲವೂ ಬದಲಾಗಲಿದೆ” ಎಂದು ಬರೆಯಲಾಗಿದೆ. ಆ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ʼಕಲ್ಕಿʼ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಲು ಪ್ರಮುಖ ಕಾರಣಗಳಲ್ಲಿ ಅದರ ಪಾತ್ರವರ್ಗವೂ ಒಂದು. ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾನಿ, ಮತ್ತು ದೀಪಿಕಾ ಪಡುಕೋಣೆ ಮುಂತಾದ ಖ್ಯಾತ ಕಲಾವಿದರು ನಟಿಸಿದ್ದಾರೆ.
ವರ್ಷದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʼ ಕಲ್ಕಿ 2898 ಎಡಿʼ ಇದೇ ಜೂನ್ 27 ರಂದು ರಿಲೀಸ್ ಆಗಲಿದೆ.
𝐀 𝐍𝐄𝐖 𝐖𝐎𝐑𝐋𝐃 𝐀𝐖𝐀𝐈𝐓𝐒!#Kalki2898AD Trailer on June 10th. @SrBachchan @ikamalhaasan #Prabhas @deepikapadukone @nagashwin7 @DishPatani @Music_Santhosh @VyjayanthiFilms @Kalki2898AD @saregamaglobal @saregamasouth #Kalki2898ADonJune27 pic.twitter.com/5FB0Mg6kNi
— Vyjayanthi Movies (@VyjayanthiFilms) June 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ
Devara: ಹೇಗಿದೆ ಜೂ.ಎನ್ಟಿಆರ್ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ
ಶಂಕರ್ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.