ಚಿಕ್ಕೋಡಿ ಲೋಕಸಭೆ ಫಲಿತಾಂಶ: ತಂಗಿ ಎದುರು ಸೋಲನುಭವಿಸಿದ “ಅಣ್ಣಾ”

ನಿವೃತ್ತ ಐಎಎಸ್‌ ಅಧಿಕಾರಿ ಶಂಭು ಕಲ್ಲೋಳಕರ 25,351 ಮತಗಳನ್ನು ಪಡೆಯುವಲ್ಲಿ ಶಕ್ತರಾಗಿದ್ದಾರೆ.

Team Udayavani, Jun 5, 2024, 1:40 PM IST

ಚಿಕ್ಕೋಡಿ ಲೋಕಸಭೆ ಫಲಿತಾಂಶ: ತಂಗಿ ಎದುರು ಸೋಲನುಭವಿಸಿದ ಅಣ್ಣಾ

ಉದಯವಾಣಿ ಸಮಾಚಾರ
ಚಿಕ್ಕೋಡಿ: ಮೇ 7ರಂದು ನಡೆದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಯುವ ನಾಯಕಿ 27 ವರ್ಷದ ಪ್ರಿಯಾಂಕಾ ಸತೀಶ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ 90,834 ಮತಗಳ ಅಂತರದಿಂದ ಜಯ ಗಳಿಸಿದರು. ಕಾಂಗ್ರೆಸ್‌-ಬಿಜೆಪಿ ಗೆಲುವಿಗೆ ಭಾರಿ ಕಸರತ್ತು ನಡೆಸಿದ್ದವು. ಅಂತಿಮವಾಗಿ ಮತದಾರರು ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 71,3461 ಮತ ಪಡೆದರೆ, ಪ್ರತಿಸ್ಪರ್ಧಿ ಅಣ್ಣಾಸಾಹೇಬ ಜೊಲ್ಲೆ 6,22,627 ಮತ ಪಡೆದಿದ್ದಾರೆ. ತೀವ್ರ ಸಂಚಲನ ಮೂಡಿಸಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಶಂಭು ಕಲ್ಲೋಳಕರ 25,351 ಮತಗಳನ್ನು ಪಡೆಯುವಲ್ಲಿ ಶಕ್ತರಾಗಿದ್ದಾರೆ.

ಕಾಂಗ್ರೆಸ್‌ಗೆ ಜೈ ಎಂದ ಮತದಾರ:
ಬಿಜೆಪಿ 10ನೇ ಸುತ್ತಿನಲ್ಲಿ 1194 ಮತಗಳ ಮುನ್ನಡೆ ಪಡೆಯಿತು. ನಂತರ 17ನೇ ಸುತ್ತಿನಲ್ಲಿ 2406 ಮತಗಳಿಂದ ಮುನ್ನಡೆ ಸಾಧಿಸಿತ್ತು. ಅಂಚೆ ಮತದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು 4459 ಮತ ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ 2638 ಮತ ಪಡೆದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಪುರುಷ ಅಭ್ಯರ್ಥಿ ವಿರುದ್ಧ ಮಹಿಳೆ ಗೆಲುವು ಸಾಧಿ ಸಿರುವುದು ಇತಿಹಾಸ. ಈ ಹಿಂದೆ ಏಳು ಬಾರಿ ಸಂಸತ್‌ ಸದಸ್ಯರಾಗಿದ್ದ ಬಿ.ಶಂಕರಾನಂದ ವಿರುದ್ಧ ರತ್ನಮಾಲಾ ಸವಣೂರ ಪ್ರಥಮ ಬಾರಿಗೆ ಗೆಲುವು ಸಾಧಿಸಿದ್ದರು. ಎರಡನೇ ಬಾರಿಗೆ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದಾರೆ.

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ವಿರುದ್ಧ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ ಅವರು 1,18,877 ಮತಗಳ ಅಂತರದಿಂದ ಗೆದ್ದು ಸಂಸತ್ತು ಪ್ರವೇಶಿಸಿದ್ದರು.

ಮತ ಎಣಿಕೆ ಕೇಂದ್ರದತ್ತ ಸುಳಿಯದ ಅಭ್ಯರ್ಥಿಗಳು
ಲೋಕಸಭೆ ಚುನಾವಣೆ ಮತ ಎಣಿಕೆ ಮುಕ್ತಾಯವಾದರೂ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ-ಕಾಂಗ್ರೆಸ್‌ ಅಭ್ಯರ್ಥಿಗಳು ಬರಲಿಲ್ಲ. ಕಾರ್ಯಕರ್ತರು, ಮಾಧ್ಯಮದವರು ಅವರ ದಾರಿ ಕಾಯ್ದು ಸುಸ್ತಾದರು. ಅಂತಿಮ ಫಲಿತಾಂಶ ಬಂದ ಬಳಿಕ ವಿಜೇತ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಪ್ರಮಾಣ ಪತ್ರ ಪಡೆದರು.

■ ಮಹಾದೇವ ಪೂಜೇರಿ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

Belagavi1

Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.