Tulunadu Culture: ಕಣ್ಮರೆಯಾಗುತ್ತಿರುವ ತುಳುನಾಡಿನ ದೈವಾರಾಧನೆ ಸಂಸ್ಕೃತಿ


Team Udayavani, Jun 5, 2024, 5:15 PM IST

13-

ಕರಾವಳಿ ಭಾಗದಲ್ಲಿರುವ ದೈವಾರಾಧನೆಗೆ ಅನೇಕ ವರ್ಷಗಳ ಇತಿಹಾಸವಿದ್ದು, ಅದರದೇ ಆದ ಅನೇಕ ವಿಚಾರಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇದು ತುಳುನಾಡಿನ ಜನರ ಸಂಪ್ರದಾಯವಾಗಿದ್ದು, ಎಲ್ಲ ಭಕ್ತರಿಗೂ ನಂಬಿಕೆ, ಭಕ್ತಿ, ಗೌರವ ಅವರ ಮುಗ್ಧ ಮನಸಿನಲ್ಲಿ ಕಣ್ಣನೋಟದಲ್ಲಿ ಕಾಣಿಸುತ್ತದೆ.

ತುಳುನಾಡಿನ ಜನರು ಸಮಸ್ಯೆ ಅಥವಾ ಇತರ ಯಾವುದೇ ತೊಂದರೆಗಳು ಎದುರಾದರೆ ಅದನ್ನು ಪರಿಹರಿಸಲು ಮೊದಲು ಬೇಡುವುದು ದೈವ- ದೇವರನ್ನು.

ಇತ್ತೀಚಿನ ದಿನಗಳಲ್ಲಿ ನಮ್ಮ ಈ ಒಂದು ಸಂಸ್ಕೃತಿ ನಶಿಸಿ ಹೋಗುತ್ತಿದೆ. ನಮ್ಮವರೇ ನಮ್ಮ ಸಂಸ್ಕೃತಿಯನ್ನು ಹಾಳುಮಾಡುತ್ತಿದ್ದು, ತುಳುನಾಡಿನ ಜನತೆಗೆ ಇದು ಬೇಸರ ಹಾಗೂ ಅವಮಾನವನ್ನು ಉಂಟುಮಾಡಿದೆ. ಒಂದಾನೊಂದು ಕಾಲದಲ್ಲಿ ದೈವದ ಹೆಸರನ್ನು ಹೇಳಲು ಭಯಪಡುತ್ತಿದ್ದೆವು.

ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ದೈವರಾಧನೆ ಯಾವ ಮಟ್ಟಕ್ಕೆ ಹೋಗಿದೆಯೆಂದರೆ ರಸ್ತೆಯ ಮೆರವಣಿಗೆಯಲ್ಲಿ, ಶಾಲಾ-ಕಾಲೇಜುಗಳಲ್ಲಿ ಛದ್ಮವೇಷ ಹಾಕುವುದರ ಮೂಲಕ, ಕೆಲವು ನಾಟಕ, ಸಿನೆಮಾಗಳು ಹಾಗೂ ದೈವಾರಾಧನೆಯ ವಿಷಯದಲ್ಲಿ ಅಪಪ್ರಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗಿ ಕಂಡುಬರುತ್ತಿವೆ. ಕೇವಲ ಅಷ್ಟಲ್ಲದೇ ರಿಮೋಟ್‌ ಕಂಟ್ರೊಲ್‌ ಗೊಂಬೆಯಾಗಿ ಮಾಡಿ ಪ್ರದರ್ಶಿಸುವ ಮಟ್ಟಿಗೆ ತುಳುನಾಡಿನ ದೈವಾರಾಧನೆ ಸಂಸ್ಕೃತಿಯು ನಾಶವಾಗುವ ಪರಿಸ್ಥಿತಿಯನ್ನು ತಲುಪುತ್ತಾ ಇದೆ.

ಉದಾಹರಣೆಯ ಮೂಲಕ ಹೇಳುವುದಾದರೆ ಕಾಂತಾರ ಸಿನೆಮಾದಲ್ಲಿ ತುಳುನಾಡಿನ ದೈವಾರಾಧನೆ ಬಗ್ಗೆ ತಿಳಿಯಲಿ, ಜನರಿಗೂ ಮಾಹಿತಿ ಸಿಗಲೆಂಬ ಕಾರಣಕ್ಕೆ ಸಿನೆಮಾವನ್ನು ಮಾಡಿದ್ದಾರೆ. ಆದರೆ ಇದರ ಅನಂತರ ರೀಲ್ಸ್, ವೀಡಿಯೋ, ದೈವಗಳ ಪೇಜ್‌ಗಳನ್ನು ಬಳಸುತ್ತಿದ್ದಾರೆ.

ಹೀಗೆ ಮುಂದುವರಿದರೆ ದೈವಾರಾಧನೆ ಸಂಸ್ಕೃತಿಯು ಯುವಪೀಳಿಗೆಗೆ ಅರಿವಿಗೆ ಬಾರದೆ ಹೋಗಬಹುದು. ಇನ್ನಾದರು ಎಚ್ಚೆತ್ತುಕೊಳ್ಳೋಣ. ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ, ಗೌರವ ನೀಡಿ. ತುಳುನಾಡಿನ ದೈವಾರಾಧನೆಯನ್ನು ಉಳಿಸುವ ಪ್ರಯತ್ನ ಮಾಡೋಣ.

-ರಶ್ಮಿತಾ ಎನ್‌.

ಎಂ.ಪಿ.ಎಂ. ಕಾಲೇಜು ಕಾರ್ಕಳ

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

Koderi

World Tourism Day: ಪ್ರವಾಸೋದ್ಯಮಕ್ಕೆ ಸಿಗಲಿ ಉತ್ತೇಜನ

16-cinema

UV Fusion: Cinema- ದಿ ರೆಡ್ ಬಲೂನ್, ಅಮೋರ್

15-uv-fusion

UV Fusion: ಬ್ಯಾಗ್‌ ಹಿಡಿದವರಿಗೊಂದು ಥ್ಯಾಂಕ್ಸ್‌

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.