Kadaba ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅರಣ್ಯಾಧಿಕಾರಿಗಳ ವಿರುದ್ಧ ದೂರು
Team Udayavani, Jun 5, 2024, 9:46 PM IST
ಕಡಬ: ಕೊಂಬಾರು ಭಾಗದ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅರಣ್ಯಾಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಕಡಬ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.
ಈ ಅರಣ್ಯ ಪ್ರದೇಶದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 2 ಕುಟುಂಬಗಳು ಗುಡಿಸಲು ನಿರ್ಮಿಸಿ ವಾಸ್ತವ್ಯ ಹೂಡಿರುವ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಜೂ. 2ರಂದು ವಿವಾದಿತ ಗುಡಿಸಲುಗಳನ್ನು ತೆರವುಗೊಳಿಸಲು ಸ್ಥಳಕ್ಕೆ ತೆರಳಿದ್ದರು. ಕಾರ್ಯಾಚರಣೆಯ ವೇಳೆ ಗುಡಿಸಲು ನಿರ್ಮಿಸಿದ್ದವರಿಂದ ವಿರೋಧ ವ್ಯಕ್ತವಾಗಿತ್ತು. ಅನಂತರ ಬೆಳವಣಿಗೆಯಲ್ಲಿ ಗುಡಿಸಲು ನಿರ್ಮಿಸಿದ್ದ ಕುಟುಂಬಗಳು ಕಡಬ ಪೊಲೀಸ್ ಠಾಣೆಗೆ ದೂರು ನೀಡಿ ಅರಣ್ಯಾಧಿಕಾರಿಗಳು ಯಾವುದೇ ನೋಟಿಸ್ ನೀಡದೆ ಕಾರ್ಯಾಚರಣೆ ನಡೆಸಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಕಡಬ ಎಸ್ಐ ಅಭಿನಂದನ್ ಎಂ.ಎಸ್. ಅವರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಕೊಂಬಾರು ಮೀಸಲು ಅರಣ್ಯದಲ್ಲಿ ಅನಧಿಕೃತವಾಗಿ ಟೆಂಟ್ ಮಾದರಿಯ 2 ಗುಡಿಸಲುಗಳನ್ನು ನಿರ್ಮಿಸಲಾಗಿತ್ತು. ಸಂಬಂಧಪಟ್ಟವರಿಗೆ ಟೆಂಟ್ಗಳನ್ನು ತೆರವುಗೊಳಿಸಲು ಸೂಚಿಸಿದರೂ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಇಲಾಖೆಯ ಸಿಬಂದಿ ಟೆಂಟ್ ತೆರವುಗೊಳಿಸಲು ತೆರಳಿದ್ದರು. ಅಲ್ಲಿ ಯಾವುದೇ ರೀತಿಯ ದೌರ್ಜನ್ಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.