ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಜೂ.7ರ ವರೆಗೆ ಹಳದಿ ಅಲರ್ಟ್ ಎಚ್ಚರಿಕೆ
Team Udayavani, Jun 6, 2024, 7:45 AM IST
ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂ.7ರ ವರೆಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂ.7ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬುಧವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸರ್ಕ್ಯೂಲೇಶನ್ 4.5 ಮತ್ತು 5.8 ಕಿ.ಮೀ ಎತ್ತರದಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜೂನ್ 6ರಿಂದ 8ರ ವರೆಗೆ ಹಗುರದಿಂದ ಸಾಧಾರಣವಾಗಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ. ಮಳೆಯ ಜತೆಗೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿಯು ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿಯಲ್ಲಿ ಎಲ್ಲೋ, ಆರೆಂಜ್ ಅಲರ್ಟ್
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಬಿರುಸು ಪಡೆಯುವ ಸಾಧ್ಯತೆ ಇದ್ದು, ಜೂ. 6ರಿಂದ 8ರ ವರೆಗೆ ಎಲ್ಲೋ ಅಲರ್ಟ್ ಮತ್ತು ಜೂ. 9ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಉತ್ತಮ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ತಡರಾತ್ರಿ, ಬುಧವಾರ ಮಳೆಯಾಗಿದೆ.
ಸಿಡಿಲು ಬಡಿದು ಹಸು ಸಾವು
ಉಡುಪಿ ಜಿಲ್ಲೆಯಲ್ಲಿ ಬುಧವಾರ ಇಡೀ ದಿನ ಬಿಸಿಲು-ಮೋಡ ಕವಿದ ವಾತಾವರಣ ನಡುವೆ ಹನಿಹನಿ ಮಳೆಯಾಗಿದೆ. ಸಂಜೆ ಅನಂತರ ರಾತ್ರಿವರೆಗೂ ಉಡುಪಿ, ಮಣಿಪಾಲ, ಮಲ್ಪೆ ಭಾಗದಲ್ಲಿ ಬಿಟ್ಟುಬಿಟ್ಟು ಕೆಲಕಾಲ ಧಾರಾಕಾರ ಮಳೆ ಸುರಿದಿದೆ. ಬ್ರಹ್ಮಾವರ, ಹೆಬ್ರಿ ಪರಿಸರದಲ್ಲಿಯೂ ಉತ್ತಮ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಜೂ. 4ರಂದು ಸಿಡಿಲು ಬಡಿದು ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಷಾ ದೇವಾಡಿಗ ಅವರ ಹಸು ಮೃತಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.