“ನೀಟ್‌’ನಲ್ಲಿ “ಎಕ್ಸ್‌ಪರ್ಟ್‌’ ಅದ್ವಿತೀಯ ಸಾಧನೆ

ಎಕ್ಸ್‌ಪರ್ಟ್‌ನ ಅರ್ಜುನ್‌ ಕಿಶೋರ್‌ ದೇಶದಲ್ಲೇ ಪ್ರಥಮ ರ್‍ಯಾಂಕ್‌

Team Udayavani, Jun 5, 2024, 10:54 PM IST

“ನೀಟ್‌’ನಲ್ಲಿ “ಎಕ್ಸ್‌ಪರ್ಟ್‌’ ಅದ್ವಿತೀಯ ಸಾಧನೆ

ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ಅಖಿಲ ಭಾರತ ಮಟ್ಟದ ನೀಟ್‌ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್‌ ಕಿಶೋರ್‌ ದೇಶದಲ್ಲೇ ಪ್ರಥಮ ರ್‍ಯಾಂಕ್‌ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜತೆಗೆ 14 ವಿದ್ಯಾರ್ಥಿಗಳು 700 ಹಾಗೂ ಅದಕ್ಕಿಂತ ಹೆಚ್ಚು ಅಂಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ| ನರೇಂದ್ರ ಎಲ್‌. ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅರ್ಜುನ್‌ ಕಿಶೋರ್‌ 720 ಅಂಕಗಳಲ್ಲಿ 720 ಅಂಕ ಪಡೆದಿದ್ದಾರೆ. ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಗೂ ಇದೊಂದು ಹೆಮ್ಮೆಯ ಕ್ಷಣ ಎಂದರು.

ಎಕ್ಸ್‌ಪರ್ಟ್‌ನ 1,508 (ಶೇ. 97)ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. 14 ಮಂದಿ 700 ಹಾಗೂ ಅದಕ್ಕಿಂತ ಅಧಿಕ, 55 ಮಂದಿ 675ಕ್ಕಿಂತ ಅಧಿಕ, 109 ಮಂದಿ 650ಕ್ಕಿಂತ ಅಧಿಕ, 176 ಮಂದಿ 625ಕ್ಕಿಂತ ಅಧಿಕ, 271 ಮಂದಿ 600ಕ್ಕಿಂತ ಅಧಿಕ, 359 ಮಂದಿ 575ಕ್ಕಿಂತ ಅಧಿಕ, 451 ಮಂದಿ 550ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ ಎಂದರು.

ನೀಟ್‌ನಲ್ಲಿ 715 ಅಂಕ ಪಡೆದ ಸಂಜನಾ ಸಂತೋಷ್‌ ಕಟ್ಟಿ ಜನರಲ್‌ ಮೆರಿಟ್‌ ವಿಭಾಗದಲ್ಲಿ ದೇಶದಲ್ಲೇ 255ನೇ ರ್‍ಯಾಂಕ್‌, 710 ಅಂಕ ಪಡೆದ ಉತ್ಸವ್‌ ಆರ್‌. 533ನೇ ರ್‍ಯಾಂಕ್‌, 710 ಅಂಕ ಪಡೆದ ಅಮನ್‌ ಅಬ್ದುಲ್‌ ಹಕೀಂ 592ನೇ ರ್‍ಯಾಂಕ್‌ ಪಡೆದಿದ್ದಾರೆ ಎಂದರು.

ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ. 56ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಅರ್ಹತೆ ಪಡೆಯುತ್ತಾರೆ. ಈ ಪೈಕಿ ಮಂಗಳೂರಿನ ಎಕ್ಸ್‌ಪರ್ಟ್‌ ಪದವಿಪೂರ್ವ ಕಾಲೇಜಿನ ಶೇ. 97ರಷ್ಟು ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ ಎಂದರು.

ನಿಖರ ಗುರಿ
ಇದ್ದಾಗ ಸಾಧನೆ
ಸಂಸ್ಥೆಯ ಉಪಾಧ್ಯಕ್ಷೆ ಡಾ| ಉಷಾ ಪ್ರಭಾ ಎನ್‌. ನಾಯಕ್‌ ಮಾತನಾಡಿ, ವಿದ್ಯಾರ್ಥಿಗಳು ನಿಖರ ಗುರಿ ಇಟ್ಟುಕೊಂಡು ಅಧ್ಯಯನ ನಡೆಸಿದರೆ ಮಾತ್ರ ಉತ್ತಮ ಸಾಧನೆ ಮಾಡಬಲ್ಲರು. ಎಕ್ಸ್‌ಪರ್ಟ್‌ ವಿದ್ಯಾರ್ಥಿಗಳು ಇದನ್ನು ಮಾಡಿ ತೋರಿಸಿದ್ದಾರೆ ಎಂದರು.

ಐಟಿ ನಿರ್ದೇಶಕ ಅಂಕುಶ್‌ ಎನ್‌. ನಾಯಕ್‌, ವಳಚ್ಚಿಲ್‌ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪ್ರಿನ್ಸಿಪಾಲ್‌ ಎನ್‌.ಕೆ. ವಿಜಯನ್‌, ಶೈಕ್ಷಣಿಕ ಪ್ರಿನ್ಸಿಪಾಲ್‌ ಪ್ರೊ| ಸುಬ್ರಹ್ಮಣ್ಯ ಉಡುಪ, ಕೊಡಿಯಾಲ್‌ ಬೈಲ್‌ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪ್ರೊ| ರಾಮಚಂದ್ರ ಭಟ್‌, ಎಐಸಿ ವಿಭಾಗದ ಸಂಯೋಜಕ ಪ್ರೊ| ಶ್ಯಾಮ್‌ ಪ್ರಸಾದ್‌, ಕೋರ್‌ ಕಮಿಟಿ ಸಮಿತಿ ಸದಸ್ಯ ಪ್ರೊ| ವಿನಯ್‌ಕುಮಾರ್‌, ಕೋಚಿಂಗ್‌ ವಿಭಾಗದ ಕೋ ಆರ್ಡಿನೇಟರ್‌ ಗುರುದತ್‌, ಕರುಣಾಕರ ಬಳ್ಕೂರು ಉಪಸ್ಥಿತರಿದ್ದರು.

ಸಿಇಟಿ, ಪಿಯುಸಿಯಲ್ಲೂ “ಎಕ್ಸ್‌ಪರ್ಟ್‌’ ಸಾಧನೆ
ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ಸಿಇಟಿ ಪರೀಕ್ಷೆಯ 7 ವಿಭಾಗಗಳಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಬಿಎನ್‌ವೈಎಸ್‌ ಹಾಗೂ ಕೃಷಿಯಲ್ಲಿ ಪ್ರಥಮ ರ್‍ಯಾಂಕ್‌, ದ್ವಿತೀಯ ರ್‍ಯಾಂಕ್‌ ಮತ್ತು ಪಶುವೈದ್ಯಕೀಯ ಹಾಗೂ ನರ್ಸಿಂಗ್‌ನಲ್ಲಿ ತೃತೀಯ ರ್‍ಯಾಂಕ್‌ ಪಡೆದುಕೊಂಡಿದ್ದಾರೆ. ಇದೇ ರೀತಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ಪಡೆದಿದ್ದು, ಶೇ. 99.94ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 590ಕ್ಕಿಂತ ಅಧಿಕ ಅಂಕಗಳನ್ನು 23 ಮಂದಿ, 580ಕ್ಕಿಂತ ಅಧಿಕ ಅಂಕ 193 ಮಂದಿ ಪಡೆದುಕೊಂಡಿದ್ದಾರೆ. ಹಲವು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.