D.K., ಉಡುಪಿ ಜಿಲ್ಲಾಡಳಿತದಿಂದ ವಿಶ್ವ ಪರಿಸರ ದಿನಾಚರಣೆ

ಪರಿಸರ ಮಾಲಿನ್ಯವೂ ಅಪಾಯಕಾರಿ: ಶೋಭಾ

Team Udayavani, Jun 5, 2024, 11:04 PM IST

D.K., ಉಡುಪಿ ಜಿಲ್ಲಾಡಳಿತದಿಂದ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಮರ, ಗಿಡಗಳನ್ನು ನಾಶಗೊಳಿಸುವುದರಿಂದ ಮಾತ್ರ ಪರಿಸರ ನಾಶವಾಗುವುದಲ್ಲ, ಮಾಲಿನ್ಯದಿಂದಲೂ ಪರಿಸರ ನಾಶವಾಗುತ್ತದೆ. ಇದರ ಬಗ್ಗೆಯೂ ಎಚ್ಚರ ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶೋಭಾ ಬಿ.ಜಿ. ಹೇಳಿದರು.

ದ.ಕ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕೈಗಾರಿಕಾ ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್‌. ಮರಿಯಪ್ಪ ಮಾತನಾಡಿ, ಜಾಗತಿಕ ತಾಪಮಾನವನ್ನು ಸಮತೋಲನದಲ್ಲಿ ಇರಿಸುವಲ್ಲಿ ಪರಿಸರದ ಪಾತ್ರ ಮಹತ್ತರವಾದದ್ದು, ಇಂದು ಗಿಡಮರಗಳ ನಾಶದಿಂದ ಅಂತರ್ಜಲ ಬತ್ತಿ ಹೋಗುತ್ತಿದೆ. ನಾವು ನಮ್ಮ ಉದ್ದೇಶಗಳಿಗಾಗಿ ಮರ ಗಿಡಗಳನ್ನು ಕಡಿಯುತ್ತಿದ್ದೇವೆ. ಅವುಗಳ ಸಂಖ್ಯೆಯನ್ನು ಸರಿದೂಗಿಸಬೇಕೆಂದರೆ ನಾವು ಪ್ರತೀ ವರ್ಷವೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಮರ, ಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸಬೇಕು. ಮಳೆನೀರಿನ ಕೊಯ್ಲುಗಳನ್ನು ಪ್ರತಿ ಮನೆಯಲ್ಲೂ ಅಳವಡಿಸುವುದರಿಂದ ಅಂತರ್ಜಲ ಕುಸಿತವನ್ನು ತಡೆಗಟ್ಟಬೇಕು ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ತಾರಾನಾಥ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ, ಉಪ ಪರಿಸರ ಅಧಿಕಾರಿ ಡಾ| ಮಹೇಶ್ವರಿ ಸಿಂಗ್‌, ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸಾಮಾಜಿಕ ಅರಣ್ಯ ವಿಭಾಗದ ಸಾಮಾಜಿಕ ಅರಣ್ಯ ವಿಭಾಗದ ಪಿ. ಶ್ರೀಧರ್‌ ಉಪಸ್ಥಿತರಿದ್ದರು.

ಸ್ಪರ್ಧಾ ವಿಜೇತರಿಗೆ ಸಮ್ಮಾನ
ಪರಿಸರ ದಿನದ ಅಂಗವಾಗಿ ವಿವಿಧ ಕಾಲೇಜುಗಳಿಗೆ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಮತ್ತು ಸಾಂಕೇತಿಕವಾಗಿ ಜ್ಯೂಟ್‌ (ಸೆಣಬು) ಚೀಲ, ಬಟ್ಟೆ ಚೀಲ ಮತ್ತು ಸಸಿಗಳನ್ನು ವಿತರಿಸಲಾಯಿತು. ವಿವಿಧ ಕೈಗಾರಿಕಾ ವಲಯಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸುರತ್ಕಲ್‌ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಡಾ| ರಾಜೇಂದ್ರ ಕಲಾºವಿ ಉಪನ್ಯಾಸ ನೀಡಿದರು.

ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ: ಕಿರಣ್‌
ಉಡುಪಿ: ಮನುಷ್ಯರ ಉಳಿವಿಗೆ ಪರಿಸರ, ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡುತ್ತಿದೆ. ನಮ್ಮ ಜೀವನ ಶೈಲಿಯಲ್ಲಿ ಇರುವಂತಹ ಅನೇಕ ವಿಷಯ, ವಸ್ತುಗಳು ಹಾಗೂ ಆಚರಣೆಗಳು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ದೈನಂದಿನ ಜೀವನ ಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪ್ರಧಾನ ಜಿÇÉಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್‌ ಸಿದ್ದಪ್ಪ ಗಂಗಣ್ಣವರ್‌ ಹೇಳಿದರು.

ಮಣಿಪಾಲ ರಜತಾದ್ರಿಯಲ್ಲಿ ಬುಧವಾರ ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ, ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್‌ ಪರಿಸರಕ್ಕೆ ಮಾರಕವಾದ ವಸ್ತು. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್‌ ಕಡಿಮೆ ಬಳಕೆ, ಮರುಬಳಕೆ, ನಿಷೇಧದ ಮೂಲಕ ಅದರ ದುಷ್ಪರಿಣಾಮಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದರು.

ಕ.ರಾ.ಮಾ.ನಿ. ಮಂಡಳಿ ಪ್ರಾದೇಶಿಕ ಅಧಿಕಾರಿ ಡಿ.ಪಿ ಮಹೇಂದ್ರ ಪ್ರಾಸ್ತಾವನೆಗೈದರು. ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ಶಾಲಾ ಮಕ್ಕಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಎಎಸ್ಪಿ ಸಿದ್ಧಲಿಂಗಪ್ಪ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ, ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ನಾಗರಾಜ್ , ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

ಉಪ ಪರಿಸರ ಅಧಿಕಾರಿ ಡಾ| ಅಮೃತಾ ಎ.ಎಸ್‌. ಸ್ವಾಗತಿಸಿ, ಶಿವಪ್ರಸಾದ್‌ ಅಡಿಗ ನಿರೂಪಿಸಿ, ಪರಿಸರ ಇಲಾಖೆ ಸಿಬಂದಿ ರಾಜೇಶ್ವರಿ ವಂದಿಸಿದರು.

ಧನಾತ್ಮಕ ಶಕ್ತಿ
ಎಂಐಟಿ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರಾಧ್ಯಾಪಕ ಡಾ| ಬಾಲಕೃಷ್ಣ ಮ¨ªೋಡಿ ಉಪನ್ಯಾಸ ನೀಡಿ, ಪ್ರತಿಯೊಬ್ಬರೂ ಪರಿಸರದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು. ಪರಿಸರದಲ್ಲಿರುವ ಧನಾತ್ಮಕ ಶಕ್ತಿಯನ್ನು ಪಡೆದುಕೊಂಡು ಚೈತನ್ಯ ಹೊಂದಬೇಕು ಎಂದರು. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಪರಿಸರ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಿರದೇ ಅದನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು ಎಂದರು.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.