Captain Brijesh Chowta ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ನೂತನ ಸಂಸದರ ಮೊದಲ ದಿನದ ಚಟುವಟಿಕೆ; ದೇವಸ್ಥಾನಗಳಿಗೆ ಭೇಟಿ
Team Udayavani, Jun 5, 2024, 11:54 PM IST
ಮಂಗಳೂರು/ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ದಿನವಿಡೀ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಕಾರ್ಯ
ಕ್ರಮಗಳಲ್ಲಿ ಪಾಲ್ಗೊಂಡರು.
ಬೆಳಗ್ಗೆ ಸುಲ್ತಾನ್ ಬತ್ತೇರಿಯ ಸ್ವಸ್ತಿಕ ವಾಟರ್ಫ್ರಂಟ್ನಲ್ಲಿ ನಡೆದ ಪರಿಸರ ಮೈತ್ರಿ-ವನಮಹೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡರು. ಬಳಿಕ ಬೆಳ್ತಂಗಡಿಗೆ ತೆರಳಿ ಹಲ್ಲೆಗೊಳಗಾದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಂಗಳೂರಿನ ಬಿಜೆಪಿ ಪಕ್ಷದ ಕಚೇರಿಗೆ ಆಗಮಿಸಿದ ಅಹವಾಲು ಸ್ವೀಕರಿಸಿದರು. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದರು.
ಅವರು ಬುಧವಾರ ರಾತ್ರಿ ದಿಲ್ಲಿಗೆ ತೆರಳಿ ಪ್ರಧಾನಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪೊಳಲಿ ದೇವಸ್ಥಾನಕ್ಕೆ ಭೇಟಿ: ಕ್ಯಾ| ಚೌಟ ಅವರು ಗೆಲುವಿನ ಹಿನ್ನೆಲೆ ಯಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅರ್ಚಕ ಪದ್ಮನಾಭ ಭಟ್ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಆನುವಂಶಿಕ ಮೊಕ್ತೇಸರ, ಪವಿತ್ರಪಾಣಿ ಪಿ. ಮಾಧವ ಭಟ್, ಶ್ರೀಕಾಂತ್ ಮಯ್ಯ, ಬಂಟ್ವಾಳ ತಾ.ಪಂ.ಮಾಜಿ ಸದಸ್ಯರಾದ ವೆಂಕಟೇಶ್ ನಾವಡ ಪೊಳಲಿ, ಯಶವಂತ ಕೊಟ್ಯಾನ್ ಪೊಳಲಿ ಹಾಗೂ ಕಾರ್ಯಕರ್ತರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.