Shobha Karandlaje: ಸೋಮಶೇಖರ್‌ ಕ್ಷೇತ್ರದಲ್ಲಿ ಶೋಭಾಗೆ 1.14 ಲಕ್ಷ ಲೀಡ್‌!


Team Udayavani, Jun 6, 2024, 12:11 PM IST

Shobha Karandlaje: ಸೋಮಶೇಖರ್‌ ಕ್ಷೇತ್ರದಲ್ಲಿ ಶೋಭಾಗೆ 1.14 ಲಕ್ಷ ಲೀಡ್‌!

ಬೆಂಗಳೂರು: ಬೆಂಗಳೂರು ಉತ್ತರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ನಿರಾಯಸ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಗೆದ್ದು ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿರುವ ಕೃಷ್ಣಬೈರೇಗೌಡ ಮತ್ತು ಬೈರತಿ ಸುರೇಶ್‌ ಅವರ ಕ್ಷೇತ್ರದಲ್ಲಿಯೂ ಬಿಜೆಪಿ 2023ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಹೆಚ್ಚು ಮತ ಪಡೆದಿದೆ.

ಕ್ಷೇತ್ರದಲ್ಲಿನ ಬಿಜೆಪಿ ಶಾಸಕರು ತಾವು ಪಡೆದಿದ್ದ ಮತಕ್ಕಿಂತ ಹೆಚ್ಚು ಮತಗಳನ್ನು ಲೋಕಸಭೆಯಲ್ಲಿ ಬಿಜೆಪಿಗೆ ವರ್ಗಾಯಿಸಲು ಯಶಸ್ವಿ ಆಗಿದ್ದರೆ, ಕಾಂಗ್ರೆಸ್‌ನ ಎ.ಸಿ. ಶ್ರೀನಿವಾಸ್‌ ಹೊರತುಪಡಿಸಿ ಸಚಿವರಾದ ಕೃಷ್ಣಬೈರೇಗೌಡ ಮತ್ತು ಬೈರತಿ ಸುರೇಶ್‌ ಎಡವಿದ್ದಾರೆ. ಇನ್ನು ಯಶವಂತಪುರದಲ್ಲಂತೂ ಬಿಜೆಪಿಯಿಂದ ಗೆದ್ದು ಸದ್ಯ ಕಾಂಗ್ರೆಸ್‌ ನಾಯಕರ ಜೊತೆ ಓಡಾಡುತ್ತಿರುವ ಎಸ್‌.ಟಿ. ಸೋಮಶೇಖರ್‌ ಅವರ ಕ್ಷೇತ್ರದಲ್ಲಿ ಶೋಭಾ ಕಾಂಗ್ರೆಸ್‌ ಅಭ್ಯರ್ಥಿಗಿಂತ 1.14 ಲಕ್ಷ ಮತಗಳನ್ನು ಹೆಚ್ಚು ಪಡೆದಿದ್ದಾರೆ.

ಈ ಕ್ಷೇತ್ರದಲ್ಲಿ ಕೆ.ಆರ್‌.ಪುರ. ಮಲ್ಲೇಶ್ವರ, ಮಹಾಲಕ್ಷ್ಮೀ ಲೇಔಟ್‌, ದಾಸರಹಳ್ಳಿ ಮತ್ತು ಯಶವಂತಪುರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಕಾಂಗ್ರೆಸ್‌ ನಿಂದ ಪುಲಕೇಶಿ ನಗರದಲ್ಲಿ ಎ.ಸಿ. ಶ್ರೀನಿವಾಸ್‌ ಶಾಸಕರಾಗಿದ್ದಾರೆ. ಹೆಬ್ಬಾಳದ ಶಾಸಕ ಬೈರತಿ ಸುರೇಶ್‌ ಮತ್ತು ಬ್ಯಾಟರಾಯನಪುರದ ಶಾಸಕ ಕೃಷ್ಣಬೈರೇಗೌಡ ಸಚಿವರಾಗಿದ್ದಾರೆ. ಆದರೆ ಪುಲಕೇಶಿನಗರ ಮತ್ತು ಹೆಬ್ಟಾಳ ಹೊರತು ಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದು ಒಂದೆಡೆಯಾದರೆ ಎಲ್ಲ ಕ್ಷೇತ್ರಗಳಲ್ಲಿಯೂ ವಿಧಾನಸಭಾ ಚುನಾವಣೆಯಲ್ಲಿ ಗಳಿಸಿದ ಮತಗಳಿಗಿಂತ ಹೆಚ್ಚು ಮತ ಬಿಜೆಪಿ ಪಡೆದಿದೆ. ಬ್ಯಾಟರಾಯನಪುರ ಕ್ಷೇತ್ರ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಭದ್ರಕೋಟೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು 1.60 ಲಕ್ಷ ಮತ ಪಡೆದಿದ್ದರು. ಆದರೆ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜೀವ್‌ ಗೌಡ 1.29 ಲಕ್ಷ ಮತಗಳನ್ನಷ್ಟೆ ಪಡೆದಿದ್ದಾರೆ.

ಇದೇ ವೇಳೆ ಶೋಭಾ ಕರಂದ್ಲಾಜೆ ಅವರು 1.64 ಲಕ್ಷ ಮತ ಗಳಿಸಿದ್ದಾರೆ. ಅಂದರೆ ರಾಜೀವ್‌ ಗೌಡ ಅವರಿಗಿಂತ 35 ಸಾವಿರ ಹೆಚ್ಚು ಮತ ಇಲ್ಲಿ ಶೋಭಾ ಅವರಿಗೆ ಸಿಕ್ಕಿದೆ. ಇನ್ನು ಹೆಬ್ಟಾಳದಲ್ಲಿ ಬಿಜೆಪಿಗಿಂತ ಹೆಚ್ಚು ಮತ ಪಡೆಯಲು ಕಾಂಗ್ರೆಸ್‌ ಯಶಸ್ವಿ ಆಗಿದ್ದರೂ ಸಹ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್‌ನ ಮತ ಪ್ರಮಾಣ ಕಡಿಮೆಯಿದೆ. ಬೈರತಿ ಸುರೇಶ್‌ ತಾವು ವಿಧಾನಸಭಾ ಚುನಾವಣೆಗೆ ನಿಂತಾಗ 91,838 ಮತ ಪಡೆದಿದ್ದರು. ಆಗ ಬಿಜೆಪಿ 61,084 ಮತಗಳನ್ನಷ್ಟೆ ಪಡೆದು ಸೋತಿತ್ತು. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್‌ ಇಲ್ಲಿ 79,842 ಮತಗಳನ್ನು ಪಡೆದಿದ್ದರೆ ಬಿಜೆಪಿ 77,680 ಮತಗಳಿಗೆ ಸೀಮಿತವಾಗಿದೆ.

ಬೈರತಿ ಸುರೇಶ್‌ ತಾವು ಪಡೆದಷ್ಟು ಮತಗಳನ್ನು ಅಥವಾ ಅದಕ್ಕಿಂತ ಹೆಚ್ಚು ಮತಗಳನ್ನು ತಮ್ಮ ಪಕ್ಷದ ಅಭ್ಯರ್ಥಿಗೆ ವರ್ಗಾಯಿಸಲು ವಿಫ‌ಲರಾಗಿದ್ದಾರೆ. ರಾಜೀವ್‌ಗೌಡರಿಗೆ ಸುರೇಶ್‌ ಪಡೆದುದಕ್ಕಿಂತ ಸುಮಾರು 11 ಸಾವಿರ ಮತ ಕಡಿಮೆ ಗಳಿಸಿದ್ದರೆ ಅದೇ ಬಿಜೆಪಿ ಬರೋಬ್ಬರಿ 27 ಸಾವಿರ ಹೆಚ್ಚು ಮತಗಳನ್ನು ಪಡೆದುಕೊಂಡಿದೆ. ಇನ್ನು ಯಶವಂತಪುರದ ಕಥೆ ವಿಭಿನ್ನವಾದದ್ದು. ಇಲ್ಲಿ ಬಿಜೆಪಿ ಶಾಸಕ ಸೋಮಶೇಖರ್‌ ಅವರ ಕೈಗಳು ಕಾಂಗ್ರೆಸ್‌ ನಾಯಕರ ಭುಜದ ಮೇಲಿದೆ. ಕಾಂಗ್ರೆಸ್‌ಗೆ ತಮ್ಮ ಬೆಂಬಲ ಎಂಬುದನ್ನು ಬಹಿರಂಗ ಪಡಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಬರೋಬ್ಬರಿ 2.30 ಲಕ್ಷ ಮತ ಪಡೆದಿದ್ದರೆ ಕಾಂಗ್ರೆಸ್‌ನ ರಾಜೀವ್‌ ಗೌಡ ಪಡೆ ದಿರುವುದು 1.16 ಲಕ್ಷ ಮತಗಳು. ಅಂದರೆ ಬಿಜೆಪಿ ಕಾಂಗ್ರೆಸ್‌ಗಿಂತ ಈ ಕ್ಷೇತ್ರದಲ್ಲಿ ಬರೋಬ್ಬರಿ 1.14 ಲಕ್ಷ ಮತಗಳನ್ನು ಅಧಿಕವಾಗಿ ಪಡೆದಿದೆ.

2023ರ ವಿಧಾನ ಸಭಾ ಚುನಾವಣೆಯಲ್ಲಿ ಸೋಮಶೇಖರ್‌ 1.68 ಲಕ್ಷ ಮತ ಪಡೆದಿದ್ದರು. ಜೆಡಿಎಸ್‌ನ ಜವರಾಯಿ ಗೌಡ 1.54 ಲಕ್ಷ ಮತಗಳನ್ನು ಪಡೆದಿದ್ದರು. ಇನು °ಪುಲಕೇಶಿ ನಗರದಲ್ಲಿ ಕಾಂಗ್ರೆಸ್‌ ಭರ್ಜರಿ ಮತ ಕೊಯ್ಲು ಮಾಡಿದೆ. ಅಲ್ಲಿ ಕಾಂಗ್ರೆಸ್‌ 1.16 ಲಕ್ಷ ಮತ ಪಡೆದಿದ್ದರೆ ಬಿಜೆಪಿ ಬರೀ 28,269 ಮತಗಳನ್ನಷ್ಟೆ ಪಡೆದು ಭಾರಿ ಹಿನ್ನಡೆ ಅನುಭವಿಸಿದೆ. ಆದರೆ ಈ ಕ್ಷೇತದಲ್ಲಿ ವಿಧಾನ ಸಭೆ ಚುನಾವಣೆಗೆ ಹೋಲಿಸಿದರೆ ಎರಡೂ ಪಕ್ಷಗಳು ತಮ್ಮ ಮತಗಳನ್ನು ವೃದ್ಧಿಸಿಕೊಂಡಿವೆ. ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 87 ಸಾವಿರ ಮತ ಪಡೆದಿದ್ದರೆ ಲೋಕಸಭೆ ಹೆಚ್ಚುವರಿಯಾಗಿ 29 ಸಾವಿರ ಮತ ಗಳಿಸಿದೆ.

ಇನ್ನು ವಿಧಾನ ಸಭೆಯಲ್ಲಿ 10 ಸಾವಿರ ಮತ ಪಡೆದಿದ್ದ ಬಿಜೆಪಿ 18 ಸಾವಿರ ಅಧಿಕ ಮತ ಪಡೆದಿದೆ. ಬಿಜೆಪಿಯ ಶಾಸಕರಾದ ಕೆ. ಆರ್‌. ಪುರದ ಬೈರತಿ ಬಸವರಾಜ್‌ 9 ಸಾವಿರ, ಮಹಾಲಕ್ಷ್ಮೀ ಲೇ ಔಟ್‌ನ ಗೋಪಾಲಯ್ಯ 8 ಸಾವಿರ, ಮಲ್ಲೇಶ್ವರನ ಡಾ. ಸಿ. ಎನ್‌. ಅಶ್ವತ್ಥನಾರಾಯಣ 4 ಸಾವಿರ ಮತಗಳನ್ನು ತಮ್ಮ ಚುನಾವಣೆಗಿಂತ ಹೆಚ್ಚುವರಿಯಾಗಿ ಬಿಜೆಪಿಗೆ ವರ್ಗಾಯಿಸುವಲ್ಲಿ ಯಶಸ್ವಿ ಆಗಿದ್ದಾರೆ.

  ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.