Agnipath ಯೋಜನೆ ಬಗ್ಗೆ ಪುನರ್ ಪರಿಶೀಲಿಸಬೇಕು: ನಿತೀಶ್ ಕುಮಾರ್ ಜೆಡಿಯು ಬೇಡಿಕೆ
ಅಗ್ನಿಪಥ್ ಯೋಜನೆ ವಿರುದ್ಧ ಜನರಲ್ಲಿ ಆಕ್ರೋಶವಿದೆ...
Team Udayavani, Jun 6, 2024, 2:57 PM IST
ನವದೆಹಲಿ: ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಭಾರತೀಯ ಜನತಾ ಪಕ್ಷ ಎನ್ ಡಿಎ ಮೈತ್ರಿಕೂಟದ ಜೊತೆ ಚರ್ಚೆ ನಡೆಸುತ್ತಿರುವ ಬೆನ್ನಲ್ಲೇ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಸೇನೆಯ ಅಗ್ನಿಪಥ್ ನೇಮಕಾತಿ ಯೋಜನೆ ಬಗ್ಗೆ ಪರಿಶೀಲಿಸುವಂತೆ ಬೇಡಿಕೆ ಇಡುವುದಾಗಿ ತಿಳಿಸಿದೆ.
ಇದನ್ನೂ ಓದಿ:IPL: ರಾಜಸ್ಥಾನ್ ತೊರೆದು ಚೆನ್ನೈ ಕಿಂಗ್ಸ್ ಸೇರುತ್ತಾರಾ ಅಶ್ವಿನ್?
ಅಗ್ನಿಪಥ್ ಯೋಜನೆ ವಿರುದ್ಧ ಜನರಲ್ಲಿ ಆಕ್ರೋಶವಿದೆ, ಇದು ಚುನಾವಣೆಯಲ್ಲೂ ನಮಗೆ ಗೋಚರವಾಗಿದೆ ಎಂದು ಜೆಡಿಯು ಮುಖಂಡ ಕೆಸಿ ತ್ಯಾಗಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅಗ್ನಿಪಥ್ ಯೋಜನೆಯನ್ನು ಪುನರ್ ಪರಿಶೀಲಿಸಬೇಕಾದ ಅಗತ್ಯವಿದೆ. ಈ ಬಗ್ಗೆ ತುಂಬಾ ವಿರೋಧವಿದೆ ಎಂದರು.
ನಮಗೆ ಈ ಬಗ್ಗೆ ಅಸಮಾಧಾನವಿಲ್ಲ, ಆದರೆ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಜಾರಿಗೊಳಿಸಿದಾಗ, ಬಹಳಷ್ಟು ಆಕ್ರೋಶ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದು, ಈ ಬಗ್ಗೆ ಚರ್ಚೆ ನಡೆಸಬೇಕಾದ ಅಗತ್ಯವಿದೆ. ಆದರೆ ನಾವು ಒಂದು ದೇಶ, ಒಂದು ಚುನಾವಣೆ ಪರವಾಗಿದ್ದೇವೆ ಎಂದು ತ್ಯಾಗಿ ಹೇಳಿದರು.
ಅಗ್ನಿಪಥ್ ಯೋಜನೆ ಪ್ರಕಾರ, ವ್ಯಕ್ತಿಯೊಬ್ಬನನ್ನು ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಮೇಲೆ ಭೂಸೇನೆ, ವಾಯುಸೇನೆ, ನೌಕಾಸೇನೆಗೆ ನೇಮಕಾತಿ ಮಾಡುವುದು. ಇದರಲ್ಲಿ ಶೇ.25 ಮಾತ್ರ 15 ವರ್ಷಗಳವರೆಗೆ ಪೂರ್ಣಕಾಲಿಕ ಯೋಧನಾಗಿ ಕರ್ತವ್ಯ ನಿರ್ವಹಿಸಲು ಅನುಮತಿ ನೀಡಲಾಗಿತ್ತು. ಆದರೆ ಈ ಯೋಜನೆ ವಿರುದ್ಧ ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.