Netravathi Peak.. ಚಾರಣ ಪ್ರಿಯರ ಹೊಸ ತಾಣ; ಹೋಗುವ ಮುನ್ನ ಈ ಅಂಶಗಳು ನೆನಪಿರಲಿ

ತೊರೆಯ ರೂಪದಲ್ಲಿ ಹರಿದು ಬರುವ ನೇತ್ರಾವತಿಯ ನೀರು ಇಲ್ಲಿ ಅತ್ಯಂತ ಪರಿಶುದ್ದ...

ಕೀರ್ತನ್ ಶೆಟ್ಟಿ ಬೋಳ, Jun 6, 2024, 5:00 PM IST

netravathi trek

ಪಶ್ಚಿಮ ಘಟ್ಟದ ಜೀವ ವೈವಿದ್ಯತೆ, ಪ್ರಾಕೃತಿಕ ಸೌಂದರ್ಯ ಸವಿಯುವುದು ಒಂದು ಅಸಾಧಾರಣ ಅನುಭೂತಿ. ಸುತ್ತಲೂ ತಣ್ಣನೆ ಹಿತ ನೀಡುವ ಶುದ್ದ ಗಾಳಿ, ಕಣ್ಣ ಮುಂದೆ ಕಾಣುವಷ್ಟೂ ಹಾಸಿರುವ ಹಸಿರು, ಮುತ್ತನ್ನಿಟ್ಟು ನಾಚಿದಂತೆ ಹತ್ತಿರ ಬಂದು ದೂರ ಓಡುವ ಮಂಜಿನ ಸಾಲುಗಳ ನಡುವೆ ನಡೆಯುವ ಅಪೂರ್ವ ಅನುಭವ ಸಿಗಬೇಕಾದರೆ ನೀವೊಮ್ಮೆ ಚಾರಣಕ್ಕೆ ಹೋಗಬೇಕು.

ಇತ್ತೀಚಿನ ದಿನಗಳಲ್ಲಿ ಭಾರೀ ಪ್ರಸಿದ್ದಿ ಪಡೆಯುತ್ತಿರುವ ಚಾರಣ ಸ್ಥಳವೆಂದರೆ ಅದು ನೇತ್ರಾವತಿ ಶಿಖರ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿ ಹುಟ್ಟುವ ಸ್ಥಳವದು. ದಟ್ಟ ಕಾಡಿನಿಂದ ತೊರೆಯ ರೂಪದಲ್ಲಿ ಹರಿದು ಬರುವ ನೇತ್ರಾವತಿಯ ನೀರು ಇಲ್ಲಿ ಅತ್ಯಂತ ಪರಿಶುದ್ದ.

ನೇತ್ರಾವತಿ ಶಿಖರವು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಗಡಿಯಲ್ಲಿ ಬರುತ್ತದೆ. ಪೀಕ್ ಪಾಯಿಂಟ್ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿಗೆ ಸೇರುವುದಾದರೂ ಚಾರಣ ಆರಂಭವಾಗುವುದು ಚಿಕ್ಕಮಗಳೂರು ಜಿಲ್ಲೆಯ ಕಳಸದ ಸಂಸೆಯಿಂದ. ಜೀವವೈವಿಧ್ಯತೆಯಿಂದಾಗಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿರುವ ನೇತ್ರಾವತಿ ಶಿಖರವು 1520 ಮೀಟರ್ ಎತ್ತರದಲ್ಲಿದೆ.

ಇನ್ನು ನಮ್ಮ ಚಾರಣದ ಅನುಭವಕ್ಕೆ ಬರೋಣ.

ನಾವು ಐದು ಮಂದಿ ಸ್ನೇಹಿತರ ಬಳಗ ಕಾರ್ಕಳ ದಿಂದ ಹೊರಟ್ಟಿದ್ದು ಬೆಳಗ್ಗೆ 5.45ರ ಸುಮಾರಿಗೆ. 8 ಗಂಟೆಗೆ ಸಂಸೆಗೆ ತಲುಪಿದ ನಾವು ಅಲ್ಲಿ ಏಜೆಂಟರಿಗೆ ನಮ್ಮ ಮಾಹಿತಿ ನೀಡಿ ಬುಕ್ಕಿಂಗ್ ಮಾಡಿಕೊಂಡೆವು. ಅಲ್ಲಿಂದ ಅವರ ಜೀಪ್ ನಲ್ಲಿ ಬೇಸ್ ಪಾಯಿಂಟ್ ತನಕ ಸುಮಾರು 3-4 ಕಿ.ಮೀ ಪ್ರಯಾಣ. (ಹೋಗಿ ಬರಲು ಇದರ ಶುಲ್ಕ ಗುಂಪಿಗೆ 1,500 ರೂ)

ಬೇಸ್ ಪಾಯಿಂಟ್ ವರೆಗೂ ಜೀಪು ಹೋಗುವುದಿಲ್ಲ. ಸ್ಥಳೀಯರೊಂದಿಗೆ ಅರಣ್ಯ ಇಲಾಖೆಯ ಕಿರಿಕ್ ಕಾರಣದಿಂದ ಅಲ್ಲಿ ಪ್ರವಾಸಿಗರ ವಾಹನಕ್ಕೆ ಸ್ಥಳೀಯರು ನಿರ್ಬಂಧ ಹೇರಿದ್ದಾರೆ. ಹೀಗಾಗಿ ಸುಮಾರು ಅರ್ಧ ಕಿ.ಮೀ ನಡೆದುಕೊಂಡೇ ಹೋಗಬೇಕು. ನಿಮ್ಮ ಟ್ರೆಕ್ಕಿಂಗ್ ಇಲ್ಲಿಂದಲೇ ಆರಂಭ ಎಂದುಕೊಳ್ಳಿ.

ಬೇಸ್ ಪಾಯಿಂಟ್ ಗೆ ತೆರಳಿ ಅಲ್ಲಿನ ಅರಣ್ಯಾಧಿಕಾರಿಗಳಿಗೆ ನಮ್ಮ ಮಾಹಿತಿ ನೀಡಬೇಕು. ಪ್ರತಿ ಚಾರಣಿಗನಿಗೆ ಇಲ್ಲಿ ಪ್ರವೇಶ ಶುಲ್ಕ ಎಂದು 500 ರೂ ಪಡೆಯುತ್ತಾರೆ. (ಇದು ಯಾಕೆಂದು ಅರ್ಥವಾಗಿಲ್ಲ) ಬಳಿಕ ಪ್ರತಿ 10 ಜನರ ಗುಂಪಿಗೆ ಓರ್ವ ಗೈಡ್ ಬೇಕಾಗುತ್ತದೆ. ಗೈಡ್ ಗೆ 1,000 ರೂ ನೀಡಬೇಕು. ಗೈಡ್ ಇಲ್ಲದೆ ಹೋಗಲು ಬಿಡುವುದಿಲ್ಲ. ಹೋಗುವ ಸಾಹಸವೂ ಮಾಡಬೇಡಿ, ದಾರಿ ತಪ್ಪುವುದು ಖಂಡಿತ. ಬೆಳಗ್ಗೆ 8.30ಕ್ಕೆ ಗೈಡ್ ನಿತಿನ್ ರೊಂದಿಗೆ ಇಲ್ಲಿಂದ ನಮ್ಮ ಚಾರಣ ಆರಂಭ.

8 + 8 ಕಿ.ಮೀ ಚಾರಣ

ಕೆಲವು ರೀಲ್ಸ್ ವಿಡಿಯೋಗಳನ್ನು ನೋಡಿ ಹೋಗಿದ್ದ ನಾವು 4 ಕಿ,ಮೀ ಟ್ರೆಕ್ ಅಂದುಕೊಂಡಿದ್ದೆವು. ಆದರೆ ಹೋದ ಮೇಲೆಯೇ ಗೊತ್ತಾಗಿದ್ದು ಇದು 8+8 ಕಿ.ಮೀ ಟ್ರೆಕ್ ಎಂದು. ಬೇಸ್ ಪಾಯಿಂಟ್ ನಿಂದ ಹೊರಟವರಿಗೆ ಆರಂಭದಲ್ಲಿ ಒಂದು ಗುಡ್ಡ ಹತ್ತಿದರೆ ಬಳಿಕ ಸುಮಾರು ಹೊತ್ತು ಹೆಚ್ಚು ಕಷ್ಟವೇನಿಲ್ಲ. ಮೊದಲ ಬಾರಿಗೆ ಚಾರಣ ಮಾಡುವವರಿಗೂ ಕಷ್ಟ ಎನಿಸದು. ಗುಡ್ಡದ ಹಾದಿಯಲ್ಲಿ ಮೇಲೆರಿಕೊಂಡು ಸುಲಭವಾಗಿ ಬರಬಹುದು. ತಣ್ಣನೆ ಬೀಸುವ ಗಾಳಿಯ ಕಾರಣದಿಂದ ಹೆಚ್ಚು ಆಯಾಸ ಅನುಭವಕ್ಕೆ ಬಾರದು.

ಬೇಸ್ ಪಾಯಿಂಟ್ ನಿಂದ ಸುಮಾರು 2.5 ಕಿ.ಮೀ ನಡೆದು ಬಂದಾಗ ಒಂದು ಸಣ್ಣ ಜಲಪಾತ ಸಿಗುತ್ತದೆ. ಇಲ್ಲಿ ಮುಖ ತೊಳೆದುಕೊಂಡು ಆಯಾಸ ದೂರ ಮಾಡಿಕೊಂಡು ಸಾಗಬಹುದು. (ನಾವು ಹೋದಾಗ ಇಲ್ಲಿ ಹೆಚ್ಚು ನೀರಿರಲಿಲ್ಲ). ಇಲ್ಲಿಂದ ನೇತ್ರಾವತಿ ತೊರೆಯವರೆಗೆ ಒಂದೇ ದಾರಿ ಸರ್, ನೇರ ನಡೆದುಕೊಂಡು ಹೋಗಿ ಎಂದರು ನಮ್ಮ ಗೈಡ್ ನಿತಿನ್. ಇದು 3.5-4 ಕಿ.ಮೀ ದಾರಿ. ಇಲ್ಲಿ ನೀವು ಬೆಟ್ಟಗಳನ್ನು ಹತ್ತಿ ಸಾಗುತ್ತೀರಿ.

ಮಂಜಿನ ಸಾಲುಗಳು, ಎದರುಲ್ಲಿ ಕಾಣುವ ಹಸಿರನ್ನು ಹೊದ್ದ ದೊಡ್ಡ ಬೆಟ್ಟಗಳನ್ನು ಕಣ್ತುಂಬಿಕೊಂಡು ಸಾಗುವ ಚಾರಣ ಚಂದ. ಕೆಲವು ಕಡೆ ಸಣ್ಣ ಸಣ್ಣ ಕಲ್ಲುಗಳನ್ನು ಹತ್ತಿ ಇಳಿದು, ಸಣ್ಣ ತೋಡಿನಲ್ಲಿ ಬರುವ ನೀರಿನಲ್ಲಿ ಕಾಲಿರಿಸಿ ದಣಿವಾರಿಸಿಕೊಂಡು ಹೋಗಬಹುದು. ನಮ್ಮಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಚಾರಣಕ್ಕೆ ಬಂದ ಕಾರಣ, ‘ಚಾರಣ ಎಂದರೆ ಇಷ್ಟೇನಾ’ ಎಂದು ಸುಲಭವಾಗಿಯೇ ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದರು.

ಇಲ್ಲಿ ನಮಗೆ ಜತೆಯಾಗಿದ್ದು ಟಾಮಿ. ಬಹುಶಃ ಮುಂದೆ ಸಾಗಿದ್ದ ಯಾವುದೋ ತಂಡದೊಂದಿಗೆ ಬಂದಿದ್ದ ಈ ನಾಯಿ ಅರ್ಧ ದಾರಿಯಲ್ಲಿ ನಮಗೆ ಜೊತೆಯಾಗಿದ್ದ. ಟಾಮಿ ಎಂದು ನಾವೇ ಇಟ್ಟ ತಾತ್ಕಾಲಿಕ ಹೆಸರು. ಶಿಖರದ ತುದಿಯವರೆಗೂ ನಮ್ಮೊಂದಿಗೆ ಇದ್ದ.

ನೇತ್ರಾವತಿಯ ಶುಭ್ರ ಹರಿವು

ಬೇಸ್ ಪಾಯಿಂಟ್ ನಿಂದು ಸುಮಾರು 6.5 ಕಿ.ಮೀ ನಡೆದು ಬಂದಾಗ ಸಿಗುವುದು ನೇತ್ರಾವತಿ. ಶೋಲಾ ಕಾಡುಗಳ ನಡುವೆ ಉಗಮವಾಗುವ ನೇತ್ರಾವತಿ ಇಲ್ಲಿ ತೊರೆಯ ರೂಪದಲ್ಲಿ ಹರಿದು ಬರುತ್ತಾಳೆ. ಕಲ್ಲುಗಳ ನಡುವೆ ಹರಿದು ಬರುವ ನೇತ್ರಾವತಿ ಮೊದಲ ಬಾರಿಗೆ ಮಾನವ ಸಂಪರ್ಕಕ್ಕೆ ಬರುವುದು ಇಲ್ಲಿಯೇ. ಹೀಗಾಗಿ ಅತ್ಯಂತ ಶುದ್ಧವಾಗಿರುವ ನೀರನ್ನು ಇಲ್ಲಿ ಕುಡಿಯಬಹುದು. ಇಲ್ಲಿ ನಮ್ಮ ಖಾಲಿಯಾಗಿದ್ದ ನೀರಿನ ಬಾಟಲಿಗಳನ್ನು ತುಂಬಿಸಿ ಒಂದೈದು ನಿಮಿಷ ದಣಿವಾರಿಸಿಕೊಂಡು ಮುಂದಿನ ಹಂತ ಆರಂಭ.

ಇದು ಕಠಿಣ ದಾರಿ

ಇಡೀ ನೇತ್ರಾವತಿ ಚಾರಣ ಪ್ರಮುಖ ಘಟ್ಟವಿದು. ಇಲ್ಲಿರುವುದು ಸುಮಾರು 1ರಿಂದ 1.5 ಕಿ.ಮೀ ದೂರ. ಆದರೆ ಇಷ್ಟು ಸಾಗಲು ನಿಮಗೆ ಕನಿಷ್ಠ ಒಂದು ಗಂಟೆ ಬೇಕು. ಇಲ್ಲಿಯೇ ಅಂದಾಜು ಮಾಡಿಕೊಳ್ಳಿ ಇದರ ಕಾಠಿಣ್ಯತೆ. ನೇತ್ರಾವತಿ ತೊರೆ ದಾಟಿದ ಕೂಡಲೇ ನಿಮಗೆ ಸಣ್ಣ ಬೆಟ್ಟವೊಂದು ಸಿಗುತ್ತದೆ. ಇದನ್ನು ಹತ್ತುವಾಗಲೇ ನಿಮಗೆ ಈ ಚಾರಣದ ಕಷ್ಟ ಅರ್ಥವಾಗುತ್ತದೆ! ನೇರ ಬೆಟ್ಟದ ಬೆನ್ನಮೇಲೆ ಸಾಗುವ ನಿಮಗೆ ಅಲ್ಲಿಂದ ಸುಂದರ ದೃಶ್ಯಗಳು ಕಾಣ ಸಿಗುತ್ತದೆ. 360 ಡಿಗ್ರಿಯೂ ಹಚ್ಚ ಹಸುರಿನ ಸುಂದರತೆಯನ್ನು ಇಲ್ಲಿ ಕಣ್ತುಂಬಬಹುದು. ಇದಕ್ಕೆ ಸರಿಯಾಗಿ ಮಂಜಿನ ಸಾಲು.

ಇಲ್ಲಿ ನಿಧಾನವಾಗಿ ಹೆಜ್ಜೆ ಇಡುತ್ತಾ ಸಾಗಬೇಕು. ಪ್ರತಿ ಹತ್ತಿಪ್ಪತ್ತು ಹೆಜ್ಜೆಗೆ ಅರೆ ನಿಮಿಷದ ವಿರಾಮ ಪಡೆದು ಸಾಗಬೇಕು. ಎದುರಿಗೆ ಸಿಗುವ ಶಿಖರ ತಲುಪಿದರೆ ಆಯಿತು ಎಂದು ಸಾಗಿದರೆ ನಿಮಗೆ ಹತ್ತಿ ಬಂದಕ್ಕಿಂತ ಮತ್ತೊಂದು ದೊಡ್ಡ ಶಿಖರ ಕರೆಯುತ್ತದೆ. ಒಂಥರಾ ಬೇಸರ ಸುಸ್ತಿನಿಂದ ನಿಮ್ಮ ನಡಿಗೆ ಮತ್ತೆ ಆರಂಭ. ಕೊನೆಗೂ ಶಿಖರದ ತುತ್ತ ತುದಿ ತಲುಪಿದರೆ ಸಿಗುವ ನಿರಾಳತೆ, ಆನಂದ ಅದು ವಿವರಿಸಲು ಕಷ್ಟ. ಅನುಭವವೇ ಆಗಬೇಕು.

ನೇತ್ರಾವತಿ ಪೀಕ್ ನಿಂದ ನಿಮಗೆ ಪಶ್ಚಿಮ ಘಟ್ಟಗಳ ಕೆಲವು ಪ್ರಮುಖ ಶಿಖರಗಳನ್ನು ನೋಡುತ್ತೀರಿ. ಹೆಚ್ಚಿನ ಮೋಡಗಳು ಇರದ್ದರೆ, ಬಲಭಾಗದಲ್ಲಿ ಕುದುರೆಮುಖ ಶಿಖರ ಮತ್ತು ಎಡಭಾಗದಲ್ಲಿ ರಾಣಿ ಝರಿಯನ್ನು ನೋಡಬಹುದು. ದೂರದ ದಿಗಂತದಲ್ಲಿ ಕೆಲವು ಪರ್ವತಗಳು ಕಾಣುತ್ತವೆ. ಕೆಳಗೆ ಬೆಳ್ತಂಗಡಿಯ ಊರುಗಳು, ಗಾಂಭೀರ್ಯದಿಂದ ನಿಂತ ಗಡಾಯಿಕಲ್ಲು ಕಾಣುತ್ತದೆ.

ಚಾರಣ ಹತ್ತುವುದಾದರೆ ಒಂದು ಬಗೆಯ ಉತ್ಸಾಹವಾದರೆ, ಇಳಿಯುವುದು ಮತ್ತೊಂದು ಸಾಹಸ. ಮೊದಲ ಒಂದು ಕಿ.ಮೀ ದೂರ ಇಳಿಜಾರು ಪ್ರದೇಶವಾದ ಕಾರಣ ಜಾಗರೂಕತೆಯಿಂದ ಇಳಿಯಬೇಕು.

ಚಾರಣಕ್ಕೆ ಮುನ್ನ ಇದು ನೆನಪಿರಲಿ

ಆನ್ ಲೈನ್ ಬುಕ್ಕಿಂಗ್: ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ನೇತ್ರಾವತಿ ಚಾರಣಕ್ಕೆ ಬರುತ್ತಿರುವ ಕಾರಣ ಆನ್ ಲೈನ್ ಬುಕ್ಕಿಂಗ್ ಅಗತ್ಯ. ದಿನಕ್ಕೆ 300 ಜನರಿಗೆ ಮಾತ್ರ ಅವಕಾಶವಿದೆ. ವೀಕೆಂಡ್ ಗಳಲ್ಲಿ ಬೆಂಗಳೂರು ಸೇರಿ ಹಲವೆಡೆಯಿಂದ ತುಂಬಾ ಜನರು ಬರುವ ಕಾರಣ ಆನ್ ಲೈನ್ ಬುಕ್ಕಿಂಗ್ ಮಾಡಬೇಕಾಗುತ್ತದೆ. ವಾರದ ದಿನಗಳಲ್ಲಿ ಅಷ್ಟು ಚಾರಣಿಗರು ಇರುವುದಿಲ್ಲ.

ಬೆಳಗ್ಗೆ ಹೋಗಬೇಕು: ಬೆಳಗ್ಗೆ 6 ಗಂಟೆಗೆ ಚಾರಣ ಆರಂಭವಾಗುತ್ತದೆ. 11 ಗಂಟೆಯವರೆಗೆ ಮಾತ್ರ ಇಲ್ಲಿ ಅನುಮತಿ ನೀಡಲಾಗುತ್ತದೆ. ಹೀಗಾಗಿ ಬೇಗನೇ ಬೇಸ್ ಪಾಯಿಂಟ್ ತಲುಪಿ.

ಆಧಾರ್ ಕಾರ್ಡ್: ವಾರದ ದಿನಗಳಲ್ಲಿ ಇಲ್ಲಿಯೇ ಬಂದು ಬುಕಿಂಗ್ ಮಾಡುವುದಾದರೆ ಆಧಾರ್ ಕಾರ್ಡ್ ಬೇಕಾಗುತ್ತದೆ.

ಆಹಾರ ತನ್ನಿ: ಎಳನೀರು ಕ್ರಾಸ್ ಬಳಿಕ ನಿಮಗೆ ಯಾವುದೇ ಅಂಗಡಿಯೂ ಸಿಗುವುದಿಲ್ಲ. ಹೀಗಾಗಿ ಚಾರಣದ ಸಮಯದಲ್ಲಿ ತಿನ್ನಲು ಬೇಕಾಗುವ ತಿಂಡಿ ತನ್ನಿ. ನೀವು ಹೋಂ ಸ್ಟೇಗಳಲ್ಲಿ ಉಳಿದು ಇಲ್ಲಿ ಚಾರಣಕ್ಕೆ ಬರುವುದಾದರೆ ಅಲ್ಲಿದಂಲೇ ತಿಂಡಿ ಕಟ್ಟಿಕೊಂಡು ಬನ್ನಿ. ನೀರಿನ ಬಾಟಲಿಯೂ ನಿಮ್ಮೊಂದಿಗೆ ಇರಲಿ.

ಪ್ಲಾಸ್ಟಿಕ್ ಎಸೆಯಬೇಡಿ: ನೀರಿನ ಬಾಟಲಿ, ತಿಂಡಿ ಕಟ್ಟಿಕೊಂಡು ಬಂದ ಪ್ಲಾಸ್ಟಿಕ್ ಚೀಲಗಳನ್ನು ದಯವಿಟ್ಟು ಎಲ್ಲೆಂದರಲ್ಲಿ ಎಸೆಯಬೇಡಿ. ಸದ್ಯಕ್ಕೆ ನೇತ್ರಾವತಿ ಬೆಟ್ಟ ಸಾಲು ಸ್ವಚ್ಛವಾಗಿದೆ. ಹೀಗೆಯೇ ಮುಂದೆಯೂ ಇರಲಿ.

ಜೋರು ಮಳೆಯಲ್ಲಿ ಚಾರಣ ಕಷ್ಟ: ಜೋರು ಮಳೆ ಬರುವ ಸಮಯದಲ್ಲಿ ಇಲ್ಲಿ ಚಾರಣ ಮಾಡುವುದು ಕಷ್ಟ. ಅದರಲ್ಲೂ ಕೊನೆಯ ಒಂದು ಕಿ.ಮೀ ಹಾದಿ ಜಾರುವ ಕಾರಣ ಮಳೆಯಲ್ಲಿ ನಡೆಯುವುದು ಕಷ್ಟ. ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಇಲ್ಲಿ ಚಾರಣಕ್ಕೆ ಬರುವುದು ಸೂಕ್ತ ಎನ್ನುತ್ತಾರೆ ಸ್ಥಳೀಯರು.

ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

5-lips-4

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.