ʼಕೋಟಿʼ ಸಿನ್ಮಾ ಹಿಟ್ ಆದ್ಮೇಲೆ ಮದುವೆ ಆಗ್ತೀನಿ.. ಮದುವೆ ಬಗ್ಗೆ ಮೌನ ಮುರಿದ ಡಾಲಿ
Team Udayavani, Jun 6, 2024, 4:34 PM IST
ಬೆಂಗಳೂರು: ಡಾಲಿ ಧನಂಜಯ ತನ್ನ ಅಭಿನಯದಿಂದ ಪರಭಾಷಾ ಪ್ರೇಮಿಗಳ ಮನವನ್ನೂ ಗೆದ್ದಿದ್ದಾರೆ. ಸದ್ಯ ಅವರು ʼಕೋಟಿʼ ಸಿನಿಮಾದ ರಿಲೀಸ್ ನತ್ತ ಗಮನ ಹರಿಸಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ʼಕೋಟಿʼ ತನ್ನ ಟೀಸರ್, ಹಾಡಿನಿಂದ ಗಮನ ಸೆಳೆದ ಬಳಿಕ ಇದೀಗ ಟ್ರೇಲರ್ ರಿಲೀಸ್ ನಿಂದ ಸದ್ದು ಮಾಡಿದೆ. ಡಾಲಿ ಧನಂಜಯ ಅವರ ಕೆರಿಯರ್ ನಲ್ಲಿ ʼಕೋಟಿʼ ವಿಭಿನ್ನ ಸಿನಿಮಾವಾಗಿರಲಿದೆ ಎನ್ನಲಾಗುತ್ತಿದೆ.
ʼಕೋಟಿʼ ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ವೇಳೆ ಡಾಲಿ ವೇದಿಕೆಯಲ್ಲಿ ತಮ್ಮ ಮದುವೆ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಡಾಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ವರ್ಷಗಳು ಹೋಗುತ್ತಾ ಇರುತ್ತದೆ. ಅದು ಗೊತ್ತಾಗುವುದೇ ಇಲ್ಲ. ಸಿನಿಮಾದವರಿಗೆ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದೂ ಗೊತ್ತಾಗಲ್ಲ. ಒಂದು ಸಿನಿಮಾ ಮಾಡುವುದರೊಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ತಿರುಗಿ ನೋಡಿದಾಗ ಇಷ್ಟೊಂದು ಆಗೋಯ್ತಾ ಅನಿಸುತ್ತದೆ. ಇದು ಯಾವಾಗಲೂ ಅನಿಸುತ್ತದೆ ಎಂದರು.
ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ. ನಮಗೆ ಗೊತ್ತಾಗಿಲ್ಲ. ನನಗಿನ್ನು 27 ವರ್ಷ ಆದರೆ ನೋಡುವವರಿಗೆ ಇಷ್ಟು ವರ್ಷ ಆಯ್ತು ಅನಿಸುತ್ತದೆ. ಏನು ಮಾಡೋಕೆ ಆಗಲ್ಲ’ ಎಂದರು.
‘ಮದುವೆ ಬಗ್ಗೆ ಎಲ್ಲಾ ವೇದಿಕೆಯಲ್ಲೂ ಕೇಳುತ್ತಾರೆ. ಪ್ರಮಾಣ ಮಾಡಿದ್ದೀನಿ. ಕೋಟಿ ಚೆನ್ನಾಗಿ ಹಿಟ್ ಆಗಲಿ. ಪಕ್ಕಾ ಮದುವೆ ಆಗುತ್ತೇನೆ’. ಚೆನ್ನಾಗಿ ಆಗಿಲ್ಲ ಅಂದರೂ ಬಿಡಲ್ಲ, ತಾರಮ್ಮನೇ ಮದುವೆ ಮಾಡಿಸಿಬಿಡುತ್ತಾರೆ ಎಂದಿದ್ದಾರೆ.
ಮಿಡಲ್ ಕ್ಲಾಸ್ ಫ್ಯಾಮಿಲಿಯ ಕಥೆಯನ್ನೊಳಗೊಂಡಿರುವ ʼಕೋಟಿʼ ಚಿತ್ರದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ನಟಿಸಿದ್ದು, ರಮೇಶ್ ಇಂದಿರಾ ,ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ,ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪಾವೂರ್ ಮುಂತಾದವರು ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.