ಗದಗ: ಸಮಾಜಮುಖಿ ಆಲೋಚನೆ ಹೊಂದಿದ್ದ ಒಡೆಯರ್‌


Team Udayavani, Jun 6, 2024, 4:35 PM IST

ಗದಗ: ಸಮಾಜಮುಖಿ ಆಲೋಚನೆ ಹೊಂದಿದ್ದ ಒಡೆಯರ್‌

■ ಉದಯವಾಣಿ ಸಮಾಚಾರ
ಗದಗ: ಮೈಸೂರಿನ ಸುವರ್ಣಯುಗದ ಸಾಮ್ರಾಟ್‌, ಸಾಮಾಜಿಕ ನ್ಯಾಯದ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್‌. ಅವರ ಆಡಳಿತಾವಧಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಇಂಬು-ವೇಗೋತ್ಕರ್ಷ ದೊರೆಯಿತು. ಅವರು ಅರಮನೆಯಲ್ಲಿ ಕಾಲ ಕಳೆದದ್ದಕ್ಕಿಂತ ಸಮಾಜಮುಖಿ ಆಲೋಚನೆ ಹೊಂದಿ ಜನರೊಂದಿಗೆ ಇದ್ದುದೇ ಹೆಚ್ಚು. ಇವರ ತುಡಿತದ ಫಲವೇ ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಕಾರಣವಾಯಿತು ಎಂದು ಬರಹಗಾರ ಬಸವರಾಜ ಗಣಪ್ಪನವರ ಹೇಳಿದರು.

ನಗರದಲ್ಲಿ ಜಿಲ್ಲಾ ಕಸಾಪ ಏರ್ಪಡಿಸಿದ ಕಸಾಪ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಕೃಷ್ಣರಾಜ  ಒಡೆಯರ್‌ ಅವರ 140ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲೇ ಮೊಟ್ಟಮೊದಲ ವಿವಿಯನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕಾಲದಲ್ಲಿ ಮೈಸೂರನ್ನು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ದರು. ಶಿಕ್ಷಣ, ಕೈಗಾರಿಕೆ, ಕೃಷಿ ಮೂರು ಆಯಾಮಗಳಲ್ಲಿ ಬೃಹತ್‌ ಕೈಗಾರಿಕೆಗಳ ಸ್ಥಾಪನೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಕೃಷಿ ಭೂಮಿಯ ಅಭಿವೃದ್ಧಿಗೆ ನೀರಾವರಿ ಯೋಜನೆ ಜಾರಿಗೆ ತಂದ ಧೀಮಂತರು ಎಂದರು.

ಆಡಳಿತದಲ್ಲಿ ಜನರ ಸಹಭಾಗಿತ್ವ ಇರಬೇಕು ಎಂಬ ಉದೇಶದಿಂದ ಮೈಸೂರು ಸಂಸ್ಥಾನದಲ್ಲಿ ಚಾಮರಾಜ ಒಡೆಯರ ಕಾಲದಲ್ಲಿ ಪ್ರಜಾಪ್ರತಿನಿಧಿ ಸಭೆ ಪ್ರಾರಂಭಗೊಂಡಿತು. ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕಾಲದಲ್ಲಿ ಇದು ವಿಸ್ತಾರವಾಗಿ ಬೆಳೆಯಿತು. ಶಿಕ್ಷಣ ಇಲ್ಲದೇ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಸತ್ಯವನ್ನು ನಾಲ್ವಡಿ ಕೃಷ್ಣರಾಜರು
ಕಂಡುಕೊಂಡಿದ್ದರು. ಈ ಕಾರಣಕ್ಕಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಅವರು ಹೆಚ್ಚಿನ ಒತ್ತು ನೀಡಿದರು. ಉಚಿತ ಶಿಕ್ಷಣ ಪ್ರಾರಂಭಿಸಿದರು.

ಕನ್ನಡ ನಾಡಿನಲ್ಲಿ ನೆಲ-ಜಲ, ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿಯಲು ಕಸಾಪದಂತಹ ಸಂಸ್ಥೆ ಬೇಕು ಎನ್ನುವ ಚಿಂತನೆ ಮಾಡಿ ಸ್ಥಾಪಿಸಿದ ಸಂಸ್ಥೆ ಒಂದು ಶತಮಾನ ಕಂಡು ಕನ್ನಡಿಗರ ಹೆಮ್ಮೆಯ ದ್ಯೊತಕವಾಗಿದೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಲ್ವಡಿ ಕೃಷ್ಟರಾಜ ಒಡೆಯರ್‌ ಮೊಟ್ಟ ಮೊದಲ ಬಾರಿಗೆ
ಸ್ತ್ರೀ ಶಿಕ್ಷಣವನ್ನು ಕಡ್ಡಾಯಗೊಳಿಸಿದರು. ಕುರುಡ ಮತ್ತು ಮೂಕ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು. ಅವರ ಅವಧಿಯಲ್ಲಿ 1911ರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಿಸಲಾಯಿತು. 1918ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪದ್ಧತಿ ನಿರ್ಮೂಲನೆ ಮಾಡಲಾಯಿತು ಎಂದರು.

ಕಾರ್ಯಕ್ರಮದಲ್ಲಿ ಅಶೋಕ ಬರಗುಂಡಿ, ಚಂದ್ರಶೇಖರ ವಸ್ತ್ರದ, ಪ್ರ.ತೋ. ನಾರಾಯಣಪುರ, ಶಶಿಕಾಂತ ಕೊರ್ಲಹಳ್ಳಿ, ಅಶೋಕ ಹಾದಿ, ಅಶೋಕ ಸತ್ಯರಡ್ಡಿ, ಡಿ.ಎಸ್‌. ಬಾಪುರಿ, ಮಂಜುನಾಥ ಹಿಂಡಿ, ಸಿ.ಎಂ. ಮಾರನಬಸರಿ, ಡಾ| ರಾಜೇಂದ್ರ ಗಡಾದ ಇದ್ದರು.

ಟಾಪ್ ನ್ಯೂಸ್

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.