‘ಶಿವಮ್ಮ’ ಎಂಟ್ರಿಗೆ ಡೇಟ್‌ ಫಿಕ್ಸ್‌!


Team Udayavani, Jun 6, 2024, 6:44 PM IST

shivamma movie

“ಶಿವಮ್ಮ’- ಹೀಗೊಂದು ಸಿನಿಮಾದ ಹೆಸರು ಆಗಾಗ ಕೇಳಿಬರುತ್ತಿತ್ತು. ಅದು ಚಿತ್ರೋತ್ಸವಗಳಿಗೆ ಆಯ್ಕೆಯಾದ, ಪ್ರಶಸ್ತಿ ಗೆದ್ದ ವಿಚಾರದಲ್ಲಿ. ಈಗ ಈ ಚಿತ್ರವನ್ನು ಚಿತ್ರಮಂದಿರಕ್ಕೆ ತರಲು ಚಿತ್ರದ ನಿರ್ಮಾಪಕರಾದ ರಿಷಭ್‌ ಶೆಟ್ಟಿ ಮನಸ್ಸು ಮಾಡಿದ್ದಾರೆ. ಚಿತ್ರ ಜೂನ್‌ 14ರಂದು ತೆರೆಗೆ ಬರಲಿದೆ. ಜೈ ಶಂಕರ್‌ ಈ ಚಿತ್ರದ ನಿರ್ದೇಶಕರು.

“ನಿರ್ದೇಶಕ ಜೈಶಂಕರ್‌ ಆರ್ಯ ಅವರು ನಮ್ಮ ಕಥಾ ಸಂಗಮ ಚಿತ್ರದ ನಿರ್ದೇಶಕರಲ್ಲಿ ಅವರು ಒಬ್ಬರಾಗಿದ್ದರು. ಆನಂತರ ಜೈಶಂಕರ್‌ ಅವರು ಶಿವಮ್ಮ ಚಿತ್ರದ ಕಥೆ ಕುರಿತಾಗಿ ಹೇಳಿದರು. ಕಥೆ ಇಷ್ಟವಾಯಿತು. ನಿರ್ಮಾಣ ಆರಂಭಿಸಿದ್ದೆವು. ಕೋವಿಡ್‌ಗೂ ಮುನ್ನ ಆರಂಭವಾದ ಚಿತ್ರವಿದು. ಉತ್ತರ ಕರ್ನಾಟಕದ ಯರೇಹಂಚಿನಾಳ ನಿರ್ದೇಶಕರ ಊರು. ಈ ಚಿತ್ರದಲ್ಲಿ ನಟಿಸಿರುವ ಶಿವಮ್ಮ ಪಾತ್ರಧಾರಿ ಶರಣಮ್ಮ ಚಟ್ಟಿ ಅವರ ಊರು ಕೂಡ ಅದೇ ಊರಿನವರು. ಆ ಊರಿನ ಪ್ರತಿಭೆಗಳನ್ನು ಬಳಸಿಕೊಂಡು ನಿರ್ದೇಶಕರು ಈ ಸಿನಿಮಾ ಮಾಡಿದ್ದಾರೆ. ಈವರೆಗೂ ಹದಿನೇಳು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಶಿವಮ್ಮ ಪ್ರದರ್ಶನವಾಗಿ ಪ್ರಶಂಸೆ ಪಡೆದು ಕೊಂಡಿದೆ. ಜನರಿಗೂ ಈ ಚಿತ್ರ ಇಷ್ಟವಾಗಲಿದೆ. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಬಿಡುಗಡೆಯಾದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಶಿವಮ್ಮ ಎಂಬ ಹೊಸ ನಾಯಕಿಯನ್ನು ಈ ಚಿತ್ರದ ಮೂಲಕ ಪರಿಚಯ ಮಾಡುತ್ತಿದ್ದೇವೆ’ ಎಂದರು ನಿರ್ಮಾಪಕ ರಿಷಭ್‌ ಶೆಟ್ಟಿ.

ನಿರ್ದೇಶಕ ಜೈ ಶಂಕರ್‌ ಮಾತನಾಡಿ, “ನಾನು ಮೂಲತಃ ಐಟಿ ಉದ್ಯೋಗಿ. ಬೆಳೆದಿದ್ದು ಬೆಂಗಳೂರಿನಲ್ಲೇ. ಆದರೆ ಯರೇಹಂಚಿನಾಳ ನನ್ನ ತಂದೆಯ ಊರು. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ನನ್ನ ಊರಿನ ಬಗ್ಗೆ ಸಿನಿಮಾ ಮಾಡುವ ಆಸೆಯಾಯಿತು. ಹಾಗಾಗಿ ನಮ್ಮ ಊರಿಗೆ ಹೋದೆ. ಕೋವಿಡ್‌ನಿಂದಾಗಿ ಒಂದು ವರ್ಷ ಅಲ್ಲೇ ಇರಬೇಕಾಯಿತು. ಅದು ನನಗೆ ಅನುಕೂಲವಾಯಿತು. ಅಲ್ಲಿನ ಜನರ ಹಾಗೂ ಅಲ್ಲಿನ ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಸಮಯ ಸಿಕ್ಕಿತ್ತು. ರಿಷಭ್‌ ಶೆಟ್ಟಿ ಅವರು ನಿರ್ಮಾಣಕ್ಕೆ ಮುಂದಾದರು’ ಎಂದು ವಿವರ ನೀಡಿದರು.

ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ಶರಣ ಚಟ್ಟಿ, ತಮಗೆ ಈ ಸಿನಿಮಾದಲ್ಲಿ ಅವಕಾಶ ಸಿಕ್ಕ ಬಗ್ಗೆ ಮಾಹಿತಿ ಹಂಚಿಕೊಂಡರು. ಚಿತ್ರದಲ್ಲಿ ನಟಿಸಿರುವ ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ ಹಾಗೂ ಶೃತಿ ಕೊಂಡೇನಹಳ್ಳಿ ತಮ್ಮ ಪಾತ್ರದ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.