Congress ಅಸಮಾಧಾನ ಸ್ಫೋಟ; ಸತೀಶ್ ಜಾರಕಿಹೊಳಿ vs ಮಹೇಂದ್ರ ತಮ್ಮಣ್ಣವರ

ಸವಾಲಿಗೆ ಪ್ರತಿ ಸವಾಲು.. ಹೈಕಮಾಂಡ್ ಗೆ ದೂರು ಕೊಟ್ಟರೆ ಉತ್ತರ ಕೊಡುತ್ತೇನೆ!!

Team Udayavani, Jun 6, 2024, 7:16 PM IST

1-qew-ewqe

ಬೆಳಗಾವಿ : ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದೊಳಗೇ ಪ್ರಭಾವಿ ಸಚಿವ ಮತ್ತು ಶಾಸಕರ ನಡುವೆ ಸಮರ ಬಹಿರಂಗವಾಗಿದೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಕುಡಚಿ ಮೀಸಲು ಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಮಾಡಿರುವುದು ಕೋಲಾಹಲಕ್ಕೆ ಕಾರಣವಾಗಿದೆ.

ಮಹೇಂದ್ರ ತಮ್ಮಣ್ಣವರ ವಿರುದ್ಧ ಆಕ್ರೋಶ ಹೊರ ಹಾಕಿರುವ ಸಚಿವ ಸತೀಶ್ ಜಾರಕಿಹೊಳಿ, ‘ತಮ್ಮಣ್ಣವರಗೆ ಟಿಕೆಟ್ ಕೊಡಿಸಲು ನಾನು ಕಾರಣವಾಗಿದ್ದೇನೆ. ಒಂದು ವೇಳೆ ಅವರನ್ನು ಬೆಳೆಸುವ ಉದ್ದೇಶವಿಲ್ಲದಿದ್ದರೆ ಬೇರೆಯವರಿಗೆ ಟಿಕೆಟ್ ನೀಡುವಂತೆ ಸೂಚಿಸುತ್ತಿದ್ದೆ. ಮತದಾನಕ್ಕೆ ಮುನ್ನ ಮಹೇಂದ್ರ ತಮ್ಮಣ್ಣವರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಚುನಾವಣೆಯಲ್ಲಿ ಅವರ ಸಂಬಂಧಿ ಶಂಭು ಕಲ್ಲೋಳಿಕರ ಪರವಾಗಿ ಕೆಲಸ ಮಾಡಿದ್ದಾರೆ’ ಎಂದು ಆರೋಪ ಮಾಡಿದ್ದಾರೆ.

‘ಕುಡಚಿಯಲ್ಲಿ ಶಂಭು ಕಲ್ಲೋಳಿಕರಗೆ ಕೇವಲ ಮೂರು ಸಾವಿರ ಮತಗಳು ಬಂದಿವೆ.ಮಹೇಂದ್ರ ತಮ್ಮಣ್ಣವರ ತಾಕತ್ತು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.ನಾನು ಯಾವ ನಾಯಕರನ್ನು ತುಳಿಯುವ ಪ್ರಯತ್ನ ಮಾಡುತ್ತಿಲ್ಲ. ಪಕ್ಷದಲ್ಲಿ ಇದ್ದುಕೊಂಡು ಬೇರೆಯವರ ಪರವಾಗಿ ಮಹೇಂದ್ರ ತಮ್ಮಣ್ಣವರ ಕೆಲಸ ಮಾಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿರುವುದು ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನದ ಹೋಗೆ ಹೊರ ಬಂದಿರುವುದನ್ನು ಸ್ಪಷ್ಟಪಡಿಸಿದೆ.

ತಮ್ಮಣ್ಣವರ ತಿರುಗೇಟು
‘ಕುಡಚಿ ಕ್ಷೇತ್ರದಿಂದ 22 ಸಾವಿರ ಮತಗಳ ಲಿಡ್ ಕೊಡಲಾಗಿದೆಯಾದರೂ ನಮ್ಮ ಏಳಿಗೆ ಸಹಿಸದ ಸಚಿವ ಸತೀಶ ಜಾರಕಿಹೊಳಿ ನನ್ನ ವಿರುದ್ದ ಅನಾವಶ್ಯಕ ಆರೋಪ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಯಶಸ್ವಿಯಾಗಿ ಮುಗಿದಿದೆ. ಚುನಾವಣೆ ಪೂರ್ವದಿಂದಲೂ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದೇನೆ’ ಎಂದಿದ್ದಾರೆ.

‘ಕುಡಚಿ ಕ್ಷೇತ್ರದಲ್ಲಿ 22588 ಲಿಡ್ ಬಂದರೂ ನನ್ನ ಮೇಲೆ ಆರೋಪ ಮಾಡಿರುವುದು ಬೇಸರ ತರಿಸಿದೆ. ಜಾರಕಿಹೊಳಿ ಸ್ವಕ್ಷೇತ್ರದ ಯಮಕನಮರಡಿಯಲ್ಲಿ 57 ಸಾವಿರ ಲಿಡ್ ತೆಗೆದುಕೊಂಡಿದ್ದಾರೆ. ಆದರೆ ಲೋಕಸಭೆ ಚುನಾವಣೆಯಲ್ಲಿ 23 ಸಾವಿರ ಮಾತ್ರ ಕಾಂಗ್ರೆಸ್ ಪರವಾಗಿ ಮತಗಳು ಬಂದಿರುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಪ್ರತಿ ಸವಾಲು ಹಾಕಿದ್ದಾರೆ.

‘ಪಕ್ಷೇತರ ಶಂಭು ಕಲ್ಲೋಳಕರಗೆ ಬೆಂಬಲ ಕೊಟ್ಟಿರುವ ಆರೋಪಕ್ಕೆ ತಿರುಗೇಟ ನೀಡಿ, ಕಲ್ಲೋಳಕರ ಕುಡಚಿಯಲ್ಲಿ ಕೇವಲ 3400 ಮತಗಳು ಮಾತ್ರ ತೆಗೆದುಕೊಂಡಿದ್ದಾರೆ. ಒಂದು ವೇಳೆ ನಾನು ಅವರ ಪರವಾಗಿ ಕೆಲಸ ಮಾಡಿದರೆ ಅವರಿಗೆ 20 ಸಾವಿರ ಮತಗಳನ್ನು ಕೊಡಲಾಗುತ್ತಿತ್ತು.ಜಾರಕಿಹೊಳಿ ಅವರು ದಲಿತ ಸಮಾಜದ ಮುಖಂಡರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಮಾಜಿ ಶಾಸಕ ಶ್ಯಾಮ ಘಾಟಗೆ, ಮಹಾವೀರ ಮೋಹಿತೆ, ಪ್ರದೀಪ ಮಾಳಗೆ, ಸುರೇಶ ತಳವಾರ ಮನೆ ಹಿಡಿಸಿದ್ದಾರೆ’ ಎಂದು ಕಿಡಿ ಕಾರಿದರು.

‘ದಲಿತ ಸಮಾಜದ ಮೇಲೆ ಅವರಿಗೆ ಕಳಕಳಿ ಇದ್ದರೆ ದಲಿತ ನಾಯಕರನ್ನು ಬೆಳೆಸುವ ಕೆಲಸ ಮಾಡುತ್ತಿದ್ದರು. ಹೈಕಮಾಂಡ್ ಗೆ ದೂರು ನೀಡಿದರೆ ನಾನು ಉತ್ತರ ಕೊಡಲು ಸಿದ್ದ. ಸಚಿವರು ಮುಂಬರುವ ಜಿಪಂ, ತಾಪಂ, ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿಯಲ್ಲಿ ಲಿಡ್ ತೋರಿಸಲಿ’ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.