ಮಸೀದಿಗಳಾಗಿ ಮಾರ್ಪಾಡಾದ ದೇವಾಲಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ: ಪೇಜಾವರ ಶ್ರೀ
Team Udayavani, Jun 6, 2024, 10:14 PM IST
ಬೆಳಗಾವಿ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳಾಗಿ ಮಾರ್ಪಾಡು ಮಾಡಲಾದ ಕಾಶಿ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ ಮಾಡಲಾಗುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೀದಿಯಲ್ಲಿ ಹೋರಾಡುವುದಕ್ಕಿಂತ ಕಾನೂನು ಹೋರಾಟ ಉತ್ತಮ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿರುವ ಕಾರಣ ಅದನ್ನು ಅನುಸರಿಸಿದ್ದೇವೆ ಎಂದರು. ದೇವಾಲಯಗಳನ್ನು ಹಿಂಪಡೆಯುವ ನಮ್ಮ ಹೋರಾಟ ಎಲ್ಲ ರೀತಿಯಿಂದ ಸಮರ್ಥನೀಯ ಎಂದು ಅವರು ಈ ಹಿಂದೆ ನಮಗೆ ಆದ ಅನ್ಯಾಯವನ್ನು ಈಗಲಾದರೂ ಸರಿಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ನಮ್ಮ ನ್ಯಾಯಯುತ ಹೋರಾಟದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದ ಅವರು ಅಯೋಧ್ಯೆಯ ರಾಮ ಮಂದಿರ ಪ್ರಕರಣದಲ್ಲಿ ಕಾನೂನಿನ ಮೂಲಕವೇ ನಮಗೆ ನ್ಯಾಯ ಸಿಕ್ಕಿದೆ ಎಂದರು.
ಹಿಂದೂ ದೇವಾಲಯಗಳ ಸಂಪನ್ಮೂಲವನ್ನು ಇತರೆ ಧರ್ಮಗಳ ಪ್ರಾರ್ಥನಾ ಸ್ಥಳಗಳಿಗೆ ಬಳಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೂ ದೇವಾಲಯಗಳನ್ನು ಮಾತ್ರ ಶೋಷಣೆಗೆ ಗುರಿಪಡಿಸಲಾಗಿದೆ. ಅದು ಸ್ವೀಕಾರಾರ್ಹವಲ್ಲ ಎಂದು ಸ್ಪಷ್ಟಪಡಿಸಿದರು.
ಸರಕಾರಗಳು ಎಲ್ಲ ಧರ್ಮಗಳಿಗೂ ಒಂದೇ ರೀತಿಯ ನಿಲುವು ತಳೆಯಬೇಕು. ಇದರಲ್ಲಿ ತಾರತಮ್ಯ ಸರಿಯಲ್ಲ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿರುವ ಫೈಜಾಬಾದ್ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿರುವ ಕುರಿತು ಪ್ರತಿಕ್ರಿಯಿಸಿದ ಶ್ರೀ ಗಳು ಅಭ್ಯರ್ಥಿ ಆಯ್ಕೆ ತಪ್ಪಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ಸೋತಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: Online Fraud: ಹೆಚ್ಚಿನ ಲಾಭ ಪಡೆಯಲು ಹೋಗಿ 25 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.