Chitradurga: ಬಿಜೆಪಿ ಅವಧಿಯಲ್ಲಿ ಬೋವಿ ನಿಗಮದಲ್ಲೂ 100 ಕೋ. ರೂ. ಅವ್ಯವಹಾರ: ಗೂಳಿಹಟ್ಟಿ
Team Udayavani, Jun 6, 2024, 11:02 PM IST
ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಬಯಲಿಗೆ ಬಂದ ಬೆನ್ನಲ್ಲೇ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ಸರಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲೂ 100 ಕೋ. ರೂ.ಗಳ ಅವ್ಯವಹಾರ ನಡೆದಿದ್ದು, ಅದರ ತನಿಖೆ ಮಾಡಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೆ, ಇದಕ್ಕೆ ಆಗ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರೇ ಹೊಣೆ ಎಂದು ಆರೋಪಿಸಿದ್ದಾರೆ.
ತಮ್ಮ ವಾಟ್ಸ್ಆ್ಯಪ್ ಸ್ಟೇಟಸ್ ಆಡಿಯೋದಲ್ಲಿ ಈ ಕುರಿತು ಮಾತನಾಡಿರುವ ಗೂಳಿಹಟ್ಟಿ, ಕೊನೆಯ ಮೂರು ತಿಂಗಳ ಅವಧಿ ಯಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ನನ್ನನ್ನು ಬೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷನನ್ನಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಲ್ಲಿನ ಎಲ್ಲ ವಿಚಾರಗಳೂ ನನಗೆ ಗೊತ್ತು. ನಾನು ಸೋತು ಮನೆಯಲ್ಲಿರುವುದರಿಂದ ಮಾಧ್ಯಮಗಳ ಮುಂದೆ ಬಂದು ಹೇಳುತ್ತಿಲ್ಲ ಎಂದಿದ್ದಾರೆ.
ಹಿಂದಿನ ಸರಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಬೋವಿ ನಿಗಮದಲ್ಲಿ 100 ಕೋಟಿ ರೂ. ಅವ್ಯವಹಾರ ಆಗಿದೆ. ಇದನ್ನು ಸುಪ್ರೀಂ ಕೋರ್ಟ್ ನ್ಯಾಯಾ ಧೀಶರ ಮೂಲಕ ತನಿಖೆ ಮಾಡಿಸಿ. ಕೋಟ ಅವರಂತಹ ಪ್ರಾಮಾಣಿಕ ದೇಶದಲ್ಲೇ ಇಲ್ಲ. ಆದರೂ ಅವರು 50-60 ಕೋ. ರೂ. ಮೌಲ್ಯದ ಆಸ್ತಿ ಮಾಡಿದರು. ಅದು ಎಲ್ಲಿಂದ ಬಂದಿದೆ ಎಂದು ಹೇಳಿಲ್ಲ. ಬಿಜೆಪಿ ಸರಕಾರದಲ್ಲಿ ಬೋವಿ ಅಭಿವೃದ್ಧಿ ನಿಗಮದ ಕೋಟಿ ಕೋಟಿ ರೂ. ನುಂಗಿದ್ದಾರೆ. ಸಚಿವರಿಗೆ ಶೇ.15, ಅಧ್ಯಕ್ಷರಿಗೆ ಶೇ.5ರಷ್ಟು ವಿವೇಚನಾ ಕೋಟ ಇರುತ್ತದೆ. ಈ ದುಡ್ಡು ಬಿಡುಗಡೆಯಲ್ಲೂ ಅವ್ಯವಹಾರವಾಗಿದೆ. ಇದ್ಯಾವುದಕ್ಕೂ ದಾಖಲೆ ಇಲ್ಲ. ಇದಕ್ಕೆ ಕೋಟ ಶ್ರೀನಿವಾಸ ಪೂಜಾರಿ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.