![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
Tamilnadu; ದಕ್ಷಿಣ ಕನ್ನಡದ ಡಿಸಿ ಆಗಿದ್ದ ಸೆಂಥಿಲ್ಗೆ ಅತ್ಯಧಿಕ ಮತ
Team Udayavani, Jun 7, 2024, 6:40 AM IST
![1-ss](https://www.udayavani.com/wp-content/uploads/2024/06/1-ss-620x358.jpg)
ಚೆನ್ನೈ: ಕರ್ನಾಟಕದ ದಕ್ಷಿಣ ಕನ್ನಡದ ಡಿಸಿ ಆಗಿದ್ದ ಶಶಿಕಾಂತ್ ಸೆಂಥಿಲ್ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲೇ ಅತ್ಯಧಿಕ ಮತಗಳ ಅಂತರದ ಜಯ ದಾಖಲಿಸಿದ್ದಾರೆ.
ತಿರುವಳ್ಳೂರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್ ಬಿಜೆಪಿಯ ವಿ. ಪೊನ್ ಬಾಲಗಣಪತಿ ವಿರುದ್ಧ 5,72,155 ಮತಗಳ ಅಂತರದಿಂದ ಗೆದ್ದಿದ್ದಾರೆ.
ಕರ್ನಾಟಕದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ವಾರ್ ರೂಮ್ ಮುಖ್ಯಸ್ಥರಾಗಿ ಸೆಂಥಿಲ್ ಅವರು ತನ್ನದೇ ಆದ ದೊಡ್ಡ ಕೊಡುಗೆಯನ್ನು ಕೊಟ್ಟು ಯಶಸ್ಸು ಪಡೆದಿದ್ದರು. ಸೆಂಥಿಲ್ ಮತ್ತು ಅನುಭವಿ ಯುವ ತಂಡ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ ಅಧಿಕಾರ ಹಿಡಿಯುವಲ್ಲಿ ಪಾತ್ರ ವಹಿಸಿದ್ದರು. ಸೆಂಥಿಲ್ ಅವರು ನಾಗರಿಕ ಸೇವೆಯನ್ನು ತೊರೆದು 2019 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಈ ದೊಡ್ಡ ಗೆಲುವಿನ ಮೂಲಕ ಮೀರಿ ನಿಂತಿದ್ದಾರೆ ಎಂದು ಹಲವರು ಅಭಿಪ್ರಾಯ ಹೊರ ಹಾಕಿದ್ದಾರೆ.
ವಿರೂಧುನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಕಮ್ ಟ್ಯಾಗೋರ್ ಡಿಎಂಡಿಕೆ ಅಭ್ಯರ್ಥಿ ವಿರುದ್ಧ ಅತ್ಯಂತ ಕಡಿಮೆ(4,379 ಮತ) ಅಂತರದ ಮತದಿಂದ ಜಯ ಗಳಿಸಿದ್ದಾರೆ.
ಟಾಪ್ ನ್ಯೂಸ್
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.