Uttarakhand Tragedy… ಮೃತ ಪದ್ಮನಾಭ ಭಟ್‌ ಕುಂದಾಪುರ ಮೂಲದವರು


Team Udayavani, Jun 7, 2024, 9:33 AM IST

Uttarakhand Tragedy… ಮೃತ ಪದ್ಮನಾಭ ಭಟ್‌ ಕುಂದಾಪುರ ಮೂಲದವರು

ಕುಂದಾಪುರ: ಉತ್ತರಾಖಂಡದ ಸಹಸ್ತ್ರ ತಾಲ್‌ (ಲೇಕ್‌) ಗೆ ಚಾರಣ ಹೋಗಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಮೃತಪಟ್ಟಿರುವ ರಾಜ್ಯದ 9 ಜನರ ಪೈಕಿ ಬೆಂಗಳೂರಿನ ಪದ್ಮನಾಭ ಭಟ್‌ (50) ಮೂಲತಃ ಕುಂದಾಪುರದ ಕುಂಭಾಶಿಯವರು.

ಪದ್ಮನಾಭ ಅವರು ಕೃಷ್ಣಮೂರ್ತಿ ಭಟ್‌-ಸತ್ಯವತಿ ದಂಪತಿಯ ಪುತ್ರ. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕುಂಭಾಶಿಯ ಕೊರವಡಿ ರಸ್ತೆಯ ಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಇಲ್ಲೀಗ ಅವರ ಚಿಕ್ಕಪ್ಪನ ಕುಟುಂಬದವರು ವಾಸ್ತವ್ಯ ಇದ್ದಾರೆ.

ಪದ್ಮನಾಭ ಅವರ ಹುಟ್ಟು, ವಿದ್ಯಾ ಭ್ಯಾಸ ಬೆಂಗಳೂರಿನಲ್ಲೇ ನಡೆದಿತ್ತು. ಸಿಎ ವ್ಯಾಸಂಗ ಮಾಡಿದ ಅನಂತರ ಖಾಸಗಿ ಕಂಪೆನಿಯೊಂದಕ್ಕೆ ಸೇರಿದ್ದು ಆ ಸಂಸ್ಥೆಯ ವತಿಯಿಂದ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿನ ಸಿಪಿಎ ತೇರ್ಗಡೆಯಾದರು. ಬೆಂಗಳೂರಿಗೆ ಮರಳಿದ ಬಳಿಕ ಖಾಸಗಿ ಕಂಪೆನಿ ಸೇವೆ ಯಲ್ಲಿ ಮುಂದುವರಿಸಿದ್ದರು.

ಪ್ರವಾಸ ಪ್ರಿಯ
ಪದ್ಮನಾಭರಿಗೆ ಪ್ರವಾಸ, ಚಾರಣ ಇತ್ಯಾದಿ ಆಸಕ್ತಿ. ಆಗಾಗ ಸಹೋದ್ಯೋಗಿಗಳು, ಸ್ನೇಹಿತರೊಡನೆ ಪ್ರವಾಸ ಹೋಗುತ್ತಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಾಖಂಡದ ಉತ್ತರ ಕಾಶಿಯ ಬೆಟ್ಟ ಪ್ರದೇಶಕ್ಕೆ ಚಾರಣ ಹೋಗಿದ್ದರು.

ಯಶಸ್ವಿಯಾಗಿ ಪ್ರವಾಸ ಮುಗಿಸಿ ಹುಲ್ಲುಗಾವಲಿನಂತಹ ಬೆಟ್ಟ ಪ್ರದೇಶದಿಂದ ಜೂ. 4ರಂದು ಮಧ್ಯಾಹ್ನ 2 ಗಂಟೆಗೆ ಎಲ್ಲರೂ 15 ಸಾವಿರ ಅಡಿ ಎತ್ತರದಿಂದ ಕೆಳಗಿಳಿಯುತ್ತಿ¤ರುವಾಗ 100 ಕಿ.ಮೀ ನಷ್ಟು ವೇಗವಾಗಿ ಬೀಸಲಾರಂಭಿಸಿದ ಶೀತ ಮಾರುತದಿಂದಾಗಿ ಅವರು ತೊಟ್ಟಿದ್ದ ಜರ್ಕಿನ್‌ಗಳು ಚಿಂದಿಯಾದವು. ಆಧಾರ ತಪ್ಪಿದ ಅವರಿಗೆ ಯಾವ ಹಿಡಿತವೂ ಸಿಗ ಲಿಲ್ಲ. ನಾಲ್ಕು ಗಂಟೆ ಬೀಸಿದ ಮಾರುತ ಪರಿಸ್ಥಿತಿಯನ್ನು ಘೋರವಾಗಿಸಿತು. ಕೆಲವರು ಹೇಗೋ ಜೀವ ಉಳಿಸಿಕೊಂಡರೆ 9 ಮಂದಿ ಶೀತ ಮಾರುತಕ್ಕೆ ಬಲಿಯಾದರು.

ರೋದನ
ಬೆಂಗಳೂರಿನ ಭಟ್ಟರ ನಿವಾಸದಲ್ಲಿ ರೋದನ ಮುಗಿಲು ಮುಟ್ಟಿದೆ. ಅವರ ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರಿಯರು, ಕುಟುಂಬದವರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಉತ್ತರಾಖಂಡ ಆಡಳಿತ, ಸೇನೆ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಸರಕಾರವೂ ತನ್ನ ಪ್ರವಾಸಿಗರನ್ನು ವಾಪಸು ಕರೆಸಿಕೊಳ್ಳಲು ವ್ಯವಸ್ಥೆ ಮಾಡಿದೆ.

34 ಬಾರಿ ಈ ಬೆಟ್ಟ ಏರಿದವರೂ ಇದ್ದರು!
ಈ ತಂಡದಲ್ಲಿ ಬೆಂಗಳೂರಿನ ಇಬ್ಬರು ಮಹಿಳೆಯರಿದ್ದು, ಅವರು 34 ಬಾರಿ ಈ ಬೆಟ್ಟವನ್ನು ಏರಿ ಇಳಿದಿದ್ದರಂತೆ. ಅವರೂ ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಶೀತ ಮಾರುತ ಒಂದು ಗಂಟೆ ತಡವಾಗಿ ಬೀಸಿದ್ದರೂ ಎಲ್ಲರೂ ಪಾರಾಗುತ್ತಿದ್ದರು.

ಪದ್ಮನಾಭ ಭಟ್‌ ಕುಂಭಾಶಿಯ ಬಗ್ಗೆ ಮಮತೆ ಹೊಂದಿದ್ದರು. ಕುಟುಂಬ ದವರು ಪೂಜೆ ನಡೆಸುತ್ತಿದ್ದ ಕುಂಭಾಶಿಯ ಶ್ರೀ ಹರಿಹರ ದೇವಾಲಯ ಅಭಿವೃದ್ಧಿಗೂ ಸಹಕಾರ ನೀಡಿದ್ದರು. ತೆಕ್ಕಟ್ಟೆ ಬಳಿಯ ಮಾಲಾಡಿಯ ಶ್ರೀ ನಂದಿಕೇಶ್ವರ ದೈವಕ್ಕೂ ರಜತ ಮುಖವಾಡ ಇತ್ಯಾದಿ ಸಮರ್ಪಿಸಿದ್ದರು. ಮುಂದಿನ ಡಿಸೆಂಬರ್‌ನಲ್ಲಿ ಊರಿಗೆ ಬಂದು ತಮ್ಮ ತಂದೆಯ ಸ್ಮರಣಾರ್ಥ ದೊಡ್ಡ ಕಾರ್ಯಕ್ರಮ ಇತ್ಯಾದಿ ನಡೆಸುವ ಉದ್ದೇಶವಿತ್ತು.

ಟಾಪ್ ನ್ಯೂಸ್

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.