Udupi: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆ ನಿಲ್ಲದು: ಸಚಿವ ಪರಮೇಶ್ವರ್


Team Udayavani, Jun 7, 2024, 9:50 AM IST

Udupi: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆ ನಿಲ್ಲದು: ಸಚಿವ ಪರಮೇಶ್ವರ್

ಉಡುಪಿ: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಗರ ಪ್ರದೇಶದ ಜನರಿಗೆ ಇದರ ಅಗತ್ಯ ಇರದಿದ್ದರೂ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಇದು ಬೇಕು. ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಜಾರಿಗೊಳಿಸಿರುವುದಾಗಿ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದರು.

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ಗುರುವಾರ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಹಳಷ್ಟು ಕಡೆ ನಾವು ಸೋತಿದ್ದೇವೆ. ಈ ಸೋಲಿನ ವಿಶ್ಲೇಷಣೆ, ಆತ್ಮವಲೋಕನ ಮಾಡು ನಿಟ್ಟಿನಲ್ಲಿ ಹಿರಿಯರ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಷ್ಟು ಪ್ರಭಾವ ಬೀರಿದೆ ಎಂಬುದನ್ನು ಚರ್ಚಿಸಲಾಗುವುದು. ರಾಜಕೀಯಕ್ಕೆ ಸಂಬಂಧಿಸಿದ ತೀರ್ಮಾನವನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಸಂಪುಟ ಪುನಾರಚನೆ ನಿರ್ಧಾರವನ್ನು ಮುಖ್ಯ ಮಂತ್ರಿಯವರು ಕೈಗೊಳ್ಳುವರು. ಆ ಬಗ್ಗೆ ನನ್ನಲ್ಲಿ ಮಾಹಿತಿ ಇಲ್ಲ ಎಂದರು.

ಸುರ್ಜೆವಾಲ್‌ ರಾಜ್ಯ ಉಸ್ತುವಾರಿ ಯಾಗಿರುವುದರಿಂದ ಸಹಜವಾಗಿಯೇ ಸೋಲಿಗೆ ಕಾರಣ ಕೇಳಿರಬಹುದು. ಆದರೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ಮತಗಳಿಕೆ ಪ್ರಮಾಣ ಏರಿಕೆಯಾಗಿದೆ. ಬಿಜೆಪಿಯದ್ದು ಸುಮಾರು 60 ಸೀಟು ಕಡಿಮೆಯಾಗಿದೆ. ನಾವು 1 ಸೀಟಿನಿಂದ 9 ಸೀಟು ಗಳಿಸಿದ್ದೇವೆ. ಆದರೂ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಆತ್ಮಾವಲೋಕನ ಮಾಡಿ ಕೊಳ್ಳಲಿದ್ದೇವೆ ಎಂದು ಹೇಳಿದರು.

ಪಕ್ಷ ಸಂಘಟನೆ ಅಗತ್ಯ
ಕರಾವಳಿಯಲ್ಲೂ ಪಕ್ಷ ಸಂಘ ಟನೆಯ ಕಾರ್ಯ ಆಗಬೇಕಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿನ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊ ಳ್ಳುತ್ತೇವೆ. ರಾಜಕೀಯ ವ್ಯವಸ್ಥೆ ಬೇರೆ, ಆಡಳಿತಾತ್ಮಕ ವ್ಯವಸ್ಥೆ ಬೇರೆ. ರಾಜಕೀಯ ವ್ಯವಸ್ಥೆಯಲ್ಲಿ ಉಸ್ತುವಾರಿ ಸಚಿವರು ಬರುವುದಿಲ್ಲ. ಹೀಗಾಗಿ ಉಡುಪಿಯ ಸೋಲಿಗೂ ಉಸ್ತುವಾರಿ ಸಚಿವರಿಗೂ ಸಂಬಂಧವಿಲ್ಲ ಎಂದರು.

ಅಧಿಕೃತ ದೂರು ಬಂದಿಲ್ಲ
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ನಾವು ಎಸ್‌ಐಟಿ ರಚಿಸಿದ್ದೇವೆ. ಬ್ಯಾಂಕ್‌ ವಂಚನೆ ಪ್ರಕರಣ ಆಗಿದ್ದ ರಿಂದ ಸಿಬಿಐ ಕೂಡ ತನಿಖೆ ನಡೆ ಸುತ್ತಿದೆ. ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆಗಿರುವ ಬಗ್ಗೆ ಗೂಳಿಹಟ್ಟಿ ಚಂದ್ರಶೇಖರ್‌ ದೂರು ನೀಡಲಿ ಅದ ರಂತೆ ತನಿಖೆ ನಡೆಸುತ್ತೇವೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಯಾವುದೇ ಸಂಘ ರ್ಷ ಆಗಿಲ್ಲ. ಎಲ್ಲ ಉತ್ಸವಗಳು ಶಾಂತಿಯು ತವಾಗಿ ನಡೆದಿವೆ. ಬಿಜೆಪಿ ಸರಕಾರ ಇದ್ದಾಗ ಅಪರಾಧ ಎಷ್ಟಾಗಿದೆ ಎಂಬ ಮಾಹಿತಿಯೂ ಇದೆ. ನಮ್ಮ ಬಳಿಯಿದೆ. ಕಾನೂನು ಸುವ್ಯವಸ್ಥೆ ಹೇಗೆ ಹಾಳಾಗಿದೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.

ಟಾಪ್ ನ್ಯೂಸ್

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.