ಮತ್ತೆ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ,ಕೃಷಿ ಹಾನಿ; ಸ್ಥಳಾಂತರಕ್ಕೆ ಒತ್ತಾಯ!


Team Udayavani, Jun 7, 2024, 9:52 AM IST

4-wild-elephant

ಸವಣೂರು: ಕೆಲ ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು, ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ.

ಜೂ.6ರಂದು ಬೆಳಿಗ್ಗೆ ಕೆಯ್ಯೂರು ಗ್ರಾಮದ ತೆಗ್ಗು ಪರಿಸರದಲ್ಲಿ ಬೀಡುಬಿಟ್ಟಿದ್ದ ಕಾಡಾನೆ ರಾತ್ರಿಯೇ ಗೌರಿಹೊಳೆಗೆ ಇಳಿದು ಪುಣ್ಚಪ್ಪಾಡಿ ಗ್ರಾಮದ ಸಾರಕರೆ ಮೂಲಕ ಆಗಮಿಸಿದೆ ಎನ್ನಲಾಗಿದೆ.

ಪುಣ್ಚಪ್ಪಾಡಿ ಗ್ರಾಮದ ಸಾರಕರೆ, ಬೆದ್ರಂಪಾಡಿ ಸುತ್ತಮುತ್ತ ಬಾಳೆ ಗಿಡ ಹಾಗೂ ತೆಂಗಿನ ಗಿಡಗಳಿಗೆ ಹಾನಿ ಮಾಡಿದೆ.

ಜೂ.3 ರಂದು ಪಾಲ್ತಾಡಿ ಗ್ರಾಮದ ಅಸಂತಡ್ಕ, ಖಂಡಿಗೆಗೆ ಆಗಮಿಸಿದ ಆನೆ ಜೂ.4 ರಂದು ರಾತ್ರಿ ಮಲೆಮಾಡಾವಿನಲ್ಲಿ ಕೃಷಿಕರ ತೋಟದಲ್ಲಿದ್ದ ಬಾಳೆ ಗಿಡ, ಹಲಸಿನ ಹಣ್ಣುಗಳನ್ನು ತಿಂದು ಕೆಯ್ಯೂರು ಗ್ರಾಮದ ಬೊಳಿಕಳ ಮೂಲಕ ಪುಣ್ಚಪ್ಪಾಡಿ ಗ್ರಾಮದ ಅಂಜಯ, ನೂಜಾಜೆ, ನೆಕ್ರಾಜೆಗೆ ಬಂದು ಕೃಷಿ ಹಾನಿ ಮಾಡಿದೆ‌.

ಜೂ.6ರಂದು ಮುಂಜಾನೆ 3 ಗಂಟೆಯ ತನಕ ಅರಣ್ಯಾಧಿಕಾರಿಗಳು ನೂಜಾಜೆಯಲ್ಲಿ ಬೀಡು ಬಿಟ್ಟಿದ್ದರು. ಜೂ.6ರಂದು ಬೆಳಿಗ್ಗೆ ಕಾಡಾನೆ ಕೆಯ್ಯೂರು ಗ್ರಾಮದ ತೆಗ್ಗು, ಎರಬೈಲು, ಓಲೆಮುಂಡೋವು ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು.

ಇದೀಗ ಜೂ.7ರಂದು ಪುಣ್ಚಪ್ಪಾಡಿ ಗ್ರಾಮಕ್ಕೆ ಮತ್ತೆ ಕಾಡಾನೆ ಬಂದು ಕೃಷಿ ಹಾನಿ ಮಾಡಿದೆ. ಇದರಿಂದ ಜನರಿಗೆ ಆತಂಕ ಶುರುವಾಗಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಹೆಚ್ಚಿರುವುದರಿಂದ ಕೃಷಿಕರಿಗೆ ಸಂಕಷ್ಟ ಎದುರಾಗಿದೆ.

ಕಾಡಾನೆ ಓಡಿಸಲು ಒತ್ತಾಯ

ಕಾಡಿನಿಂದ ಇಳಿದು ನಾಡಿಗೆ ಬಂದ ಕಾಡಾನೆಯನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪರಪ್ಪೆ ರಕ್ಷಿತಾರಣ್ಯದಿಂದ ತಪ್ಪಿಸಿಕೊಂಡು ಬಂದ ಒಂಟಿ ಸಲಗ..!?

ಕಾಸರಗೋಡಿನ ಪರಪ್ಪೆ ರಕ್ಷಿತಾರಣ್ಯದಿಂದ ಈ ಕಾಡಾನೆ ತಪ್ಪಿಸಿಕೊಂಡು ಬಂದಿದೆ ಎನ್ನಲಾಗಿದೆ. ಗುಂಪಿನಿಂದ ಬೇರ್ಪಟ್ಟ ಗಂಡಾನೆ ಇದಾಗಿದ್ದು, ಇದೇ ಆನೆ ಕೆಲ ತಿಂಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿತ್ತು.

ಆ ಬಳಿಕ ಕೆಲ ತಿಂಗಳು ಆನೆಯ ಸುಳಿವಿರಲಿಲ್ಲ. ಇದೀಗ ಮತ್ತೆ ಒಂಟಿ ಸಲಗ ಸದ್ದು ಮಾಡಿದ್ದು ಪುಣ್ಚಪ್ಪಾಡಿ, ತೆಗ್ಗು ಪ್ರದೇಶಗಳತ್ತ ತನ್ನ ಹೆಜ್ಜೆ ಇಟ್ಟಿದೆ. ತೆಗ್ಗು ಪ್ರದೇಶದಿಂದ ಆನೆಯನ್ನು ಓಡಿಸಿದರೆ ಮತ್ತೆ ಯಾವ ಕಡೆಗೆ ಹೋಗುತ್ತದೆ ಎಂದು ತಿಳಿಯುವುದು ಕಷ್ಟ. ಏಕೆಂದರೆ ಆನೆಯನ್ನು ಓಡಿಸುವುದು ಅಷ್ಟು ಸುಲಭದ ಕೆಲಸವೂ ಅಲ್ಲ. ಅಲ್ಲದೆ ಆನೆಯನ್ನು ಇಂತಹ ಕಡೆಗೇ ಓಡಿಸುವುದು ಕೂಡ ಕಷ್ಟ. ಏಕೆಂದರೆ ಆನೆ ನಡೆದದ್ದೆ ದಾರಿಯಾಗಬೇಕು ವಿನಹಃ ನಾವು ಹೇಳಿದ ಕಡೆಗೆ ಆನೆಯನ್ನು ಓಡಿಸುವುದು ಕಷ್ಟಸಾಧ್ಯ.

ಟಾಪ್ ನ್ಯೂಸ್

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.