Bengaluru: ಎಸ್ಪಿ, ಐಜಿಪಿ ಕಚೇರಿಯನ್ನೇ ಮಾರಲು ಯತ್ನ!

ಕಚೇರಿಗೆ ಪ್ರವೇಶಿಸಿ ವಿಡಿಯೋ ಮಾಡುತ್ತಿದ್ದ ಆರೋಪಿಗಳು

Team Udayavani, Jun 7, 2024, 11:52 AM IST

5-bng-sp-office

ಬೆಂಗಳೂರು: ಅಪರಿಚಿತ ವ್ಯಕ್ತಿ ತಮ್ಮ ಜಾಗವನ್ನು ಮಾರಾಟ ಮಾಡಿದ್ದಾನೆ ಎಂದು ದೂರು ನೀಡಲು ಪೊಲೀಸ್‌ ಠಾಣೆಗೆ ಬರುವುದು ಸಾಮಾನ್ಯ. ಆದರೆ, ಕೆಲ ಕಿಡಿಗೇಡಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ.

ಅಚ್ಚರಿಯಾದರೂ ನಿಜ. ಕೆಲ ದಿನಗಳ ಹಿಂದೆ ಎಸ್ಪಿ ಕಚೇರಿ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಕ್ರಮವಾಗಿ ವಿಡಿಯೋ ಸೆರೆ ಹಿಡಿಯುವಾಗ ಪ್ರಶ್ನೆ ಮಾಡಿದ ಪೊಲೀಸ್‌ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆರು ಮಂದಿ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಜಿಲ್ಲೆ ನಿಸ್ತಂತು ಜಿಲ್ಲಾ ನಿಯಂತ್ರಣ ಕೊಠಡಿ ಇನ್‌ಸ್ಪೆಕ್ಟರ್‌ ಹಾಗೂ ಎಸ್ಟೇಟ್‌ ಅಧಿಕಾರಿ ಸಂತೋಷ್‌ ಗೌಡ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರದ ಎಂ.ಡಿ.ಹನೀಫ್, ವಿಜಯನಗರದ ರಾಜಶೇಖರ್‌, ಉಲ್ಲಾಳದ ಮೊಹಮ್ಮದ್‌ ನದೀಮ್, ಸಂಜಯನಗರದ ಮೋಹನ್‌ ಶೆಟ್ಟಿ, ಗಣಪತಿ ಹಾಗೂ ಜಹೀರ್‌ ಅಹಮದ್‌ ಎಂಬುವರ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದಾರೆ. ‌ಈ ಸಂಬಂಧ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ದೂರಿನಲ್ಲಿ ಏನಿದೆ?: ಜೂ.3ರಂದು ಮಧ್ಯಾಹ್ನ 1 ಗಂಟೆಗೆ ಕೆಲ ಅಪರಿಚಿತರು ವಸಂತನಗರದ ಮಿಲ್ಲರ್ಸ್‌ ರಸ್ತೆಯ ಕೇಂದ್ರ ವಲಯ ಐಜಿಪಿ ಕಚೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಕಚೇರಿ ಆವರಣವನ್ನು ಅತಿಕ್ರಮ ಪ್ರವೇಶಿಸಿದ್ದಾರೆ. ತಮ್ಮ ಮೊಬೈಲ್‌ನಿಂದ ಕಚೇರಿಯ ಕಟ್ಟಡ ಹಾಗೂ ಆವರಣವನ್ನು ಚಿತ್ರೀಕರಿಸಿ, ಫೋಟೋ ಸೆರೆ ಹಿಡಿಯಲು ಮುಂದಾಗಿದ್ದಾರೆ.

ಅದನ್ನು ಗಮನಿಸಿದ ಎಸ್ಟೇಟ್‌ ಆಫೀಸರ್‌ ಸಂತೋಷ್‌ ಗೌಡ, ಏಕೆ ಕಚೇರಿಯ ಕಟ್ಟಡ ಚಿತ್ರೀಕರಿಸುತ್ತಿರುವಿರಿ’ ಎಂದು ಪ್ರಶ್ನಿಸಿದ್ದಾರೆ. ಆಗ ಅಪರಿಚಿತರು, “ನಮ್ಮನ್ನು ಕೇಳಲು ನೀನು ಯಾರು’ ಎಂದು ಪ್ರಶ್ನಿಸಿದ್ದಾರೆ. ಆಗ ಸಂತೋಷ್‌ ಗೌಡ, “ನಾನು ಈ ಕಚೇರಿ ಕಟ್ಟಡ ಮತ್ತು ಆವರಣಕ್ಕೆ ಎಸ್ಟೇಟ್‌ ಅಧಿಕಾರಿಯಾಗಿರುವುದರಿಂದ ಪ್ರಶ್ನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ನಿಂದೇನು ಎಂದು ಮರು ಪ್ರಶ್ನೆ ಹಾಕಿದ ಅಪರಿಚಿತರು, ಈ ಸ್ವತ್ತಿನ ದಾಖಲೆಗಳು ನಮ್ಮ ಬಳಿ ಇವೆ. ನಾವು ಚಿತ್ರೀಕರಣ ಮಾಡುತ್ತೇವೆ ಎಂದಿದ್ದಾರೆ.

ಸಂತೋಷ್‌ ಗೌಡ ಎಚ್ಚರಿಕೆ ನೀಡಿದರೂ, ಅಪರಿಚಿತರು ಚಿತ್ರೀಕರಣಕ್ಕೆ ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಅಪರಿಚಿತರನ್ನು ಸಂತೋಷ್‌ ಗೌಡ ಕಚೇರಿಯೊಳಗೆ ಕರೆದೊಯ್ದು ಚಿತ್ರೀಕರಣದ ಬಗ್ಗೆ ಪ್ರಶ್ನೆ ಮಾಡಿದಾಗ, ಈ ಸ್ವತ್ತಿನ ಮಾಲೀಕರಾದ ಗಣಪತಿ ಮತ್ತು ಜಹೀರ್‌ ಎಂಬವವರು ನಮಗೆ ಜಿಪಿಎ ಮಾಡಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನ: ಈ ಹಿನ್ನೆಲೆಯಲ್ಲಿ ಆರೋಪಿಗಳು ಈ ಸ್ವತ್ತನ್ನು ಅಕ್ರಮವಾಗಿ ಮಾರಾಟ ಮಾಡುವ ದುರುದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಚೇರಿ ಆವರಣ ಅತಿಕ್ರಮ ಪ್ರವೇಶ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಅಲ್ಲದೆ, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಂತೋಷ್‌ ಗೌಡ ಆರೋಪಿಸಿ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌.ಪಿ ಕಚೇರಿಗೆ ಅಕ್ರಮವಾಗಿ ಪ್ರವೇಶ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ●ಎಚ್‌.ಟಿ ಶೇಖರ್‌, ಕೇಂದ್ರ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.