ಡಾ. ಧನಂಜಯ ಸರ್ಜಿ, ಎಸ್.ಎಲ್.ಭೋಜೇ ಗೌಡ ಗೆಲುವು;ಕಾಪುವಿನಲ್ಲಿ ಬಿಜೆಪಿ-ಜೆಡಿಎಸ್ ಸಂಭ್ರಮಾಚರಣೆ
Team Udayavani, Jun 7, 2024, 1:57 PM IST
ಕಾಪು: ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎನ್ ಡಿ ಎ ಒಕ್ಕೂಟದ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರ ಪರವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಕಾಪು ಪೇಟೆಯಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ನಡೆಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಾರಿಯ ವಿಧಾನ ಪರಿಷತ್ ಚುನಾವಣೆ ನಮಗೆ ಸವಾಲಾಗಿತ್ತು. ಆದರೂ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಗೆಲುವಾಗಿದ್ದು ಇದು ಕಾರ್ಯಕರ್ತರ ಪರಿಶ್ರಮದ ಗೆಲುವು, ಮುಂದಿನ ಎಲ್ಲಾ ಚುನಾವಣೆಗಳಿಗೂ ದಿಕ್ಸೂಚಿಯಾಗಲಿದೆ ಎಂದರು.
ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಗೆಲುವಿನ ಮೂಲಕ ವಿಧಾನ ಪರಿಷತ್ ನಲ್ಲಿ ಎನ್ ಡಿ ಎ ಬಲ ಹೆಚ್ಚಿದೆ. ಮೂರನೇ ಬಾರಿ ಮೋದಿ ಪ್ರಧಾನಿಯಾಗುತ್ತಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಮೇಲ್ಮನೆ ಚುನಾವಣೆಯಲ್ಲಿಯೂ ಎನ್ ಡಿ ಎ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಖುಷಿ ಹೆಚ್ಚಿಸಿದೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಮಾತನಾಡಿ, ನಮಗೆಲ್ಲರಿಗೂ ಸಂಭ್ರಮದ ಕ್ಷಣವಾಗಿದ್ದು ಗೆಲುವಿನಲ್ಲಿ ಎಲ್ಲರ ಶ್ರಮವಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಉತ್ತಮ ನಿರ್ಧಾರವಾಗಿದೆ ಎನ್ನುವುದನ್ನು ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ತೋರಿಸಿಕೊಟ್ಟಿದೆ. ಈ ಗೆಲುವು ನಮ್ಮ ಮೈತ್ರಿಯನ್ನು ಗಟ್ಟಿಗೊಳಿಸಿದೆ. ಮುಂದಿನ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಲಿದೆ ಎಂದರು.
ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಜಿತೇಂದ್ರ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜೆಡಿಎಸ್ ಕಾಪು ಬ್ಲಾಕ್ ಅಧ್ಯಕ್ಷ ದೇವರಾಜ್ ತೊಟ್ಟಂ, ಮುಖಂಡರಾದ ನಯನಾ ಗಣೇಶ್, ದೇವರಾಜ್ ತೊಟ್ಡಂ, ನವೀನ್ ಎಸ್.ಕೆ., ಸುಧಾಮ ಶೆಟ್ಟಿ, ಅನಿಲ್ ಕುಮಾರ್, ಉಮೇಶ್ ಕರ್ಕೇರ, ಕೃಷ್ಣ ರಾವ್, ಗೋಪಾಲ ಕೃಷ್ಣ ಭಟ್, ಚಂದ್ರ ಮಲ್ಲಾರು, ಸುರೇಖಾ ಶೈಲೇಶ್, ಕೇಸರಿ ಯುವರಾಜ್, ಪವಿತ್ರಾ ಶೆಟ್ಟಿ, ಶಶಿಪ್ರಭಾ ಶೆಟ್ಟಿ, ಗಣೇಶ್ ಶೆಟ್ಟಿ, ಚಂದ್ರಹಾಸ ಎರ್ಮಾಳು, ಶೇಖ್ ನಜೀರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.