Dandeli: ಮೂರುವರೆ ವರ್ಷಕ್ಕೆ India Book of Records ನಲ್ಲಿ ಹೆಸರು ದಾಖಲಿಸಿಕೊಂಡ ಪೋರ
Team Udayavani, Jun 7, 2024, 2:36 PM IST
ದಾಂಡೇಲಿ : ಸಾಧನೆ ಅಂದರೆ ಇದು ಕಣ್ರೀ, ಈ ಸಮಾಜದ ಬಗ್ಗೆ ಏನೆಂದು ಅರಿಯದ ಮುಗ್ಧ ಪುಟಾಣಿ ಎಂದು ಇಂಡಿಯ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಳ್ಳುವುದು ಇದೆಯಲ್ಲ, ಇದು ಸಾಮಾನ್ಯ ಸಾಧನೆಯಲ್ಲ, ಇದೊಂದು ಅಸಮಾನ್ಯವಾದ ದೈತ್ಯ ಸಾಧನೆ ಎಂದರೆ ಅತಿಶಯೋಕ್ತಿ ಎನಿಸದು.
ಇಂತಹ ಅಪರೂಪದ ಅಪೂರ್ವ ಸಾಧನೆಗೆದ ನಮ್ಮ ದಾಂಡೇಲಿಯ ಹೆಮ್ಮೆಯ ಪುಟಾಣಿ ಅನೋಷ್ ರೋಹಿತ್ ಸ್ವಾಮಿ. ಅಂದಹಾಗೆ ಈ ಪುಟಾಣಿಯ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಯಾಕೆ ದಾಖಲಾಯಿತು ಅಂದುಕೊಂಡೀರಾ, ಹಾಗಾದ್ರೆ ಇಲ್ಲಿ ಸ್ವಲ್ಪ ಕೇಳಿ, ಅದರ ಮುಂಚೆ ಈ ಪುಟಾಣಿಯ ಸಂಕ್ಷಿಪ್ತ ಪರಿಚಯ ಮಾಡೋಣ ಬನ್ನಿ.
ದಾಂಡೇಲಿ ನಗರದ ವಿಜಯನಗರದ ನಿವಾಸಿ ರೋಹಿತ್ ಸ್ವಾಮಿ ಹಾಗೂ ಮರ್ಲಿನ್ ಸ್ವಾಮಿ ದಂಪತಿಗಳ ಮುದ್ದಿನ ಸುಪುತ್ರ ಈ ಮೂರೂವರೆ ವರ್ಷ ಪ್ರಾಯದ ಅನೋಷ್ ರೋಹಿತ್ ಸ್ವಾಮಿ.
ರೋಹಿತ್ ಸ್ವಾಮಿ ದಂಪತಿ ದಾಂಡೇಲಿಯ ನಿವಾಸಿಗಳಾಗಿದ್ದರೂ ಸದ್ಯ ಹುಬ್ಬಳ್ಳಿಯಲ್ಲಿ ಉದ್ಯೋಗದಲ್ಲಿ ಇರುವುದರಿಂದ ಹುಬ್ಬಳ್ಳಿಯಲ್ಲಿ ವಾಸ್ತವ್ಯವನ್ನು ಹೂಡಿದ್ದಾರೆ. ಒಂದು ಮಗುವಿನ ಸಮಗ್ರ ಬೆಳವಣಿಗೆಯಲ್ಲಿ ತಂದೆ ತಾಯಿಗಳ ಪಾತ್ರ ಅತಿ ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎನ್ನುವುದಕ್ಕೆ ಅನೋಷ್ ರೋಹಿತ್ ಸ್ವಾಮಿ ನೈಜ ಉದಾಹರಣೆಯಾಗಿದ್ದಾನೆ.
ಅನೋಷ್ ಹುಟ್ಟಿ ಒಂದುವರೆ ವರ್ಷ ಆಗುತ್ತಿರುವಾಗಲೇ ಅವನಲ್ಲಿರುವ ಕ್ರಿಯಾಶೀಲತೆಯನ್ನು ಬಹಳ ಸೂಕ್ಷ್ಮ ಮನಸ್ಸಿನಿಂದ ಆತನ ತಾಯಿ ಮರ್ಲಿನ್ ಸ್ವಾಮಿ ಅರಿತುಕೊಂಡರು. ಒಂದು ಸಲ ಹೇಳಿದ್ದನ್ನು ಹಾಗೇನೇ ನೆನಪಿಟ್ಟುಕೊಳ್ಖುವ ಜಾಣ್ಮೆಯನ್ನು ಗಮನಿಸಿದ ಮರ್ಲಿನ್ ಅವರು ಪುಟಾಣಿಯ ಕ್ರಿಯಾಶೀಲತೆಗೆ ಅನುಗುಣವಾಗಿ ಮುಂದೆ ಮೂರು ವರ್ಷ ಆಗುತ್ತಿದ್ದಂತೆಯೇ, ಅವನಿಗೆ ಸಾಧ್ಯವಾದಷ್ಟು ತರಬೇತಿಯನ್ನು ನೀಡಿದರು. ಹೀಗೆ ಬೆಳೆದ ಈ ಪುಟಾಣಿ ವಾರದ ಹೆಸರು, ತಿಂಗಳ ಹೆಸರು, ಚಿತ್ರ ನೋಡಿ ವಿವಿಧ ಪ್ರಾಣಿಗಳ ಹೆಸರು, ಚಿತ್ರ ನೋಡಿ ವಿವಿಧ ಪಕ್ಷಿಗಳ ಹೆಸರು, ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ, ರೈಮ್ಸ್, ವಿವಿಧ ವೃತ್ತಿಗಳ ಬಗ್ಗೆ ಅಭಿನಯದ ಮೂಲಕ ತೋರಿಸಿದಾಗ ಆಯಾಯ ವೃತ್ತಿಯನ್ನು ಹೇಳುವುದು, ಪ್ರಸಕ್ತ ಸನ್ನಿವೇಶದ ಬಗ್ಗೆ ಉತ್ತರಿಸುವುದು, ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ರಾಷ್ಟ್ರಪತಿ, ಉಪರಾಷ್ಟ್ರಪತಿಯವರ ಹೆಸರನ್ನು ಹೇಳುವುದು, ರಾಜ್ಯ ಜಿಲ್ಲೆಯ ತಾಲೂಕಿನ ಹೆಸರನ್ನು ಹೇಳುವುದನ್ನು ಕರಗತ ಮಾಡಿಕೊಂಡು ಸಾಧನೆಯ ಸಾಧಕನಾಗುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾನೆ ಅನೋಷ್.
ಪುಟಾಣಿಯ ಸಾಧನೆಗೆ ಸರಿಯಾದ ಸಮಯದಲ್ಲಿ ಪರಿಪಕ್ವವಾಗಿ ಬೆಳೆಯುವ ಮತ್ತು ಬೆಳೆಸುವ ನಿಟ್ಟಿನಲ್ಲಿ ರೋಹಿತ್ ಮತ್ತು ಮರ್ಲಿನ್ ಅವರಿಬ್ಬರು ತಮ್ಮನ್ನು ತಾವು ಪರಿಪೂರ್ಣವಾಗಿ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಅನೋಷ್ ನ ಸಾಧನೆ ಎಂದು ಜಗದಗಲಕ್ಕೆ ಪಸರಿಸಿದೆ. ಸಾಧನೆಗೆ ಮತ್ತಷ್ಟು ಕೀರ್ತಿ ಎಂಬಂತೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಅನೋಷ್ ರೋಹಿತ್ ಸ್ವಾಮಿಯ ಹೆಸರು ದಾಖಲಾಗಿದೆ.
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಮೂರುವರೆ ವರ್ಷದ ಪುಟಾಣಿಯ ಹೆಸರು ದಾಖಲಾಗುವುದು ಪುಟ್ಟ ಪುಟಾಣಿಯ ಬಹುದೊಡ್ಡ ಸಾಧನೆಯೆ ಆಗಿದೆ. ಪುಟಾಣಿ ಅನೋಷ್ ರೋಹಿತ್ ಸ್ವಾಮಿಯ ಸಾಧನೆ ಕೇವಲ ಆತನ ಕುಟುಂಬಕ್ಕೆ ಗೌರವದ ಜೊತೆಜೊತೆಯಲ್ಲಿ ನಮ್ಮ ಹೆಮ್ಮೆಯ ಕರ್ಮ ಭೂಮಿ ದಾಂಡೇಲಿಗೂ ಬಹುದೊಡ್ಡ ಹೆಮ್ಮೆ ಮತ್ತು ಗೌರವವನ್ನು ತಂದುಕೊಟ್ಟಿದೆ.
ಅನೋಷ್ ರೋಹಿತ್ ಸ್ವಾಮಿಯ ಈ ಸಾಧನೆಗೆ ಪ್ರೇರಣಾದಾಯಿಗಳಾಗಿ ರೋಹಿತ್ ಸ್ವಾಮಿ ಮತ್ತು ಮರ್ಲಿನ್ ಸ್ವಾಮಿ ಅವರು ಹಾಗೂ ಈ ಪುಟಾಣಿಯ ಚೈತನ್ಯದಾಯಕ ಕ್ರಿಯಾಶೀಲತೆಗೆ ಅಜ್ಜ ಅಜ್ಜಿಗಳಾದ ವಿಜಯನಗರದ ಸಿದ್ದರಾಮ, ಸ್ವಾಮಿ, ಸುಶೀಲ ಮತ್ತು ಅಜ್ಜಿ ಸುಭಾಷ್ ನಗರದ ಸವಿತಾ ದಂಡಗಿ ಅವರುಗಳ ಅಕ್ಕರೆಯ ಆಶೀರ್ವಾದ ಮತ್ತು ಕುಟುಂಬಸ್ಥರ ಪ್ರೀತಿಯ ಪ್ರೋತ್ಸಾಹವು ಬಹುಮೂಲ್ಯ ಕೊಡುಗೆಯಾಗಿದೆ.
ಈ ಪುಟಾಣಿಯ ಸಾಧನೆಗೆ ಆಶೀರ್ವದಿಸಿ. ಈ ಪುಟಾಣಿ ನಮ್ಮೂರ ಹೆಮ್ಮೆ, ನಮ್ಮೂರ ಗೌರವ, ನಮ್ಮೂರ ಕೀರ್ತಿ. ವಿಶ್ ಯು ಆಲ್ ದಿ ಬೆಸ್ಟ್ ಅನೋಷ್
– ಸಂದೇಶ್.ಎಸ್.ಜೈನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.